ಬಹುಮತ 'ಸೃಷ್ಟಿಸಲು' ರಾಜ್ಯಪಾಲರ ಅವಕಾಶ: ಚಿದಂಬರಂ ಕಿಡಿ
ನವದೆಹಲಿ, ಮೇ 17: ಕರ್ನಾಟಕದ ರಾಜ್ಯಪಾಲ ವಜೂಭಾಯಿ ವಾಲಾ ಅವರು 104 ಸಂಖ್ಯೆಯನ್ನು 111ಕ್ಕೆ ಹೆಚ್ಚಿಸಿಕೊಳ್ಳಲು ಬಿ.ಎಸ್. ಯಡಿಯೂರಪ್ಪ ಅವರಿಗೆ 15 ದಿನಗಳ ಅವಕಾಶ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಕಿಡಿಕಾರಿದ್ದಾರೆ.
15 ದಿನಗಳಲ್ಲಿ ಬಹುಮತ ಸೃಷ್ಟಿಸಿಕೊಳ್ಳಲು ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಆಹ್ವಾನ ನೀಡಿದ್ದಾರೆ ಎಂದು ಬಿಜೆಪಿಯು ರಾಜ್ಯಪಾಲರಿಂದ ಬಂದ ಆಹ್ವಾನ ಪತ್ರದ ಪ್ರತಿಯನ್ನು ಬಹಿರಂಗಪಡಿಸಿದ ಬಳಿಕ ಪಿ. ಚಿದಂಬರಂ ಟ್ವೀಟ್ ಮಾಡಿದ್ದಾರೆ.
Governor invites Mr Yeddyurappa to manufacture a majority in 15 days.
— P. Chidambaram (@PChidambaram_IN) 16 May 2018
Governor gives Mr Yeddyurappa 15 days to convert the number 104 into 111.
ರಾಜ್ಯದಲ್ಲಿ ಸರ್ಕಾರ ರಚನೆಗೆ ಅಗತ್ಯವಿರುವಷ್ಟು ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಆಹ್ವಾನ ನೀಡದೆ ರಾಜ್ಯಪಾಲರು ವಾಮಮಾರ್ಗ ಹಿಡಿಯಬಾರದಿತ್ತು ಎಂದು ಚಿದಂಬರಂ ಹೇಳಿದ್ದಾರೆ.
'ನಮ್ಮ ಬಹುಮತ ಸ್ಪಷ್ಟಪಡಿಸಲಾಗಿದೆ. ರಾಜ್ಯಪಾಲರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳಬಾರದು. ಸರ್ಕಾರ ರಚನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ಗಳನ್ನು ಆಹ್ವಾನಿಸಬೇಕಿತ್ತು ಎಂದು ಮತ್ತೊಬ್ಬ ಮುಖಂಡ ಕಪಿಲ್ ಸಿಬಲ್ ಹೇಳಿದ್ದಾರೆ.