ಕರ್ನಾಟಕದ ದಿನೇಶ್ ಮಹೇಶ್ವರಿ ಸುಪ್ರೀಂ ನ್ಯಾಯಮೂರ್ತಿಯಾಗಿ ನೇಮಕ
ಕರ್ನಾಟಕ ಹೈ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ದೆಹಲಿ ಹೈ ಕೋರ್ಟ್ ಅ ನ್ಯಾ.ಸಂಜೀವ್ ಖನ್ನಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಸರಕಾರ ನೇಮಕ ಮಾಡಿದೆ. ಈ ಬಗ್ಗೆ ಕಾನೂನು ಸಚಿವಾಲಯದ ಅಧಿಸೂಚನೆ ಇದನ್ನು ತಿಳಿಸಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ರ ಅಂಕಿತ ಬಿದ್ದ ನಂತರ ಆದೇಶ ಹೊರಡಿಸಲಾಗಿದೆ.
ಸುಪ್ರೀಂಕೋರ್ಟ್ ಕೊಲಿಜಿಯಂ ತೀರ್ಮಾನಕ್ಕೆ ಆಕ್ಷೇಪ; ಏನಿದು ಹೊಸ ವಿವಾದ?
ಸುಪ್ರೀಂ ಕೋರ್ಟ್ ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯು ಮಾಡಿದ ಶಿಫಾರಸಿಗೆ ರಾಷ್ಟ್ರಪತಿ ಒಪ್ಪಿಗೆ ಸೂಚಿಸಿದ್ದಾರೆ. ಕರ್ನಾಟಕ ಹೈ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಪದೋನ್ನತಿಯಲ್ಲಿ ಕಡೆಗಣಿಸಲಾಗಿತ್ತು. ಇನ್ನು ಸದ್ಯಕ್ಕೆ ಇರುವ ಸುಪ್ರೀಂ ಕೋರ್ಟ್ ನ ಹಲವು ಮುಖ್ಯ ನ್ಯಾಯಮೂರ್ತಿಗಳಿಗಿಂತ ಹಾಗೂ ಹೈಕೋರ್ಟ್ ಹಲವು ನ್ಯಾಯಮೂರ್ತಿಗಳಿಗಿಂತ ಕಿರಿಯರು.
ಸದ್ಯಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಇಪ್ಪತ್ತಾರು ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅದರ ಮಂಜೂರಾದ ಸಾಮರ್ಥ್ಯ ಮೂವತ್ತೊಂದು. ಐದು ಸ್ಥಾನಗಳನ್ನು ಹಾಗೇ ಬಿಡಲಾಗಿದೆ. ಸುಪ್ರೀಂ ಕೋರ್ಟ್ ನ ಕೊಲಿಜಿಯಂನಿಂದ ನ್ಯಾಯಮೂರ್ತಿಗಳಾದ ಮಹೇಶ್ವರಿ ಹಾಗೂ ಖನ್ನಾ ಹೆಸರು ಅಂತಿಮಗೊಳಿಸಲಾಗಿತ್ತು.