ಐಎಸ್ಐಎಸ್ ಸೇರೋದ್ರಲ್ಲಿ ಕರ್ನಾಟಕದವರೇ ಫಸ್ಟ್!
ಬೆಂಗಳೂರು, ನವೆಂಬರ್, 24: ಕರ್ನಾಟಕದಿಂದಲೇ ಅತಿ ಹೆಚ್ಚು ಯುವಕರು ಐಎಸ್ ಐಸ್ ಉಗ್ರ ಸಂಘಟನೆ ಸೇರುತ್ತಿದ್ದಾರೆಯೇ? ಇಂಥದ್ದೊಂದು ಗಂಭೀರ ಪ್ರಶ್ನೆ ಹುಟ್ಟಿಕೊಳ್ಳಲು ಸಿಕ್ಕಿರುವ ಮಾಹಿತಿಗಳು ಪುಷ್ಠಿ ನೀಡುತ್ತವೆ.
ಉತ್ತರ ಕನ್ನಡ ಜಿಲ್ಲೆ ಭಟ್ಕಳದ ನಿವಾಸಿ ಅರ್ಮಾರ್ ಎಂಬಾತ ಸಂಘಟನೆಗೆ ಯುವಕರನ್ನು ಸೆಳೆಯುವುದರಲ್ಲಿ ಸದಾ ಕಾರ್ಯನಿರತನಾಗಿದ್ದ. 'ಅನ್ಶರ್ ಉಲ್ ತಹೀದ್' ಎಂಬ ಸಂಸ್ಥೆ ಹೆಸರಿನಲ್ಲಿ ಯುವಕರಿಗೆ ಗಾಳ ಹಾಕುತ್ತಿದ್ದ ಎಂಬ ಸಂಗತಿ ಬಯಲಾಗಿದೆ.[ಐಎಸ್ ಐಎಸ್ ಸೇರುವ ಯುವಕರಿಗೆ ಹಣ, ಕೆಲಸದ ಆಮಿಷ]

ಕೆಲ ತಿಂಗಳ ಹಿಂದೆಯೇ ಅರ್ಮಾರ್ ಸಾವಿಗೀಡಾಗಿದ್ದ ಎಂಬ ಸುದ್ದಿ ಬಂದಿತ್ತು. ಆದರೆ ಭಾರತದ ಗುಪ್ತಚರದಳ ಈ ಮಾಹಿತಿಯನ್ನು ದೃಢಪಡಿಸಿರಲಿಲ್ಲ. ಆದರೆ ಇದೀಗ ಐಎಸ್ ಐಎಸ್ ಪರವಾಗಿ ಕೆಲಸ ಮಾಡುತ್ತಿದ್ದ 6 ಜನ ಭಾರತೀಯ ಮೂಲದವರು ಇರಾಕ್ ಮತ್ತು ಸಿರಿಯಾದಲ್ಲಿ ಸಾವನ್ನಪ್ಪಿದ್ದು ಅದರಲ್ಲಿ ಅರ್ಮಾರ್ ಸಹ ಸೇರಿದ್ದಾನೆ ಎಂದು ತಿಳಿಸಿದೆ.
ಸಾವನ್ನಪ್ಪಿದ್ದ ಆರು ಜನ ಯಾರು?
ಒಟ್ಟು ಆರು ಜನ ಭಾರತೀಯರು ಸಾವನ್ನಪ್ಪಿದ್ದಾರೆ. ತೆಲಂಗಾಣದ ಅತೀಫ್ ವಾಸೀಮ್, ಬೆಂಗಳೂರು ಶಿವಾಜಿನಗರದ ಮೊಹಮದ್ ಉಮರ್, ಭಟ್ಕಳದ ಮೌಲಾನಾ ಅಬ್ದುಲ್ ಕಬೀರ್ ಸುಲ್ತಾನ್ ಅರ್ಮಾರ್, ಥಾಣೆಯ ಸಹೀಮ್ ಫಾರೂಕ್ ಥಂಕಿ, ಬೆಂಗಳೂರಿನ ಫಯಾಜ್ ಮಸೂದ್ , ಅಜಂಗಢದ ಮೊಹಮದ್ ಸಜೀದ್ ಸಾವಿಗೀಡಾದ ಆರು ಜನರು.[ಭಾರತಕ್ಕೆ ಬಂದ ಉಗ್ರ ನವೀದ್ ಎಲ್ಲಿದ್ದಾನೆ?]
ಈಗ ಭಾರತದ 23 ಜನ ಐಸ್ ಐಸ್ ಜತೆ ಕೆಲಸ ಮಾಡುತ್ತಿದ್ದಾರೆ. ಅದರಲ್ಲಿ 5 ಜನ ಕರ್ನಾಟಕದವರು, 3 ಜನ ತಮಿಳುನಾಡಿನವರು ಮತ್ತು ತೆಲಂಗಾಣ, ಮಹಾರಾಷ್ಟ್ರ ಮತ್ತು ಕೇರಳದ ತಲಾ ನಾಲ್ಕು ಜನ ಸೇರಿದ್ದಾರೆ ಎಂದು ಗುಪ್ತಚರ ಇಲಾಖೆ ವರದಿಯಲ್ಲಿ ತಿಳಿಸಿದೆ.
ಭಟ್ಕಳದ ಅರ್ಮಾರ್ ಸಾವಿನ ನಂತರ ಆತನ ಸಹೋದರ ಶಫಿ ಅರ್ಮಾರ್ ಚಲನವಲನಗಳ ಮೇಲೆ ಗುಪ್ತಚರ ಇಲಾಖೆ ಕಣ್ಣಿಟ್ಟಿದೆ. ಯುಎಇಯಿಂದ ಶಫಿ ಕೆಲ ವ್ಯವಹಾರಗಳನ್ನು ನಿಯಂತ್ರಿಸುತ್ತಿದ್ದಾನೆ ಎಂಬ ಮಾಹಿತಿಯಿದೆ. ಈತ ಅಲ್ಲಿಂದ ಸಿರಿಯಾಕ್ಕೆ ಹಾರಲು ಯತ್ನ ನಡೆಸಿದ್ದಾನೆ ಎಂದು ಇಲಾಖೆ ತಿಳಿಸಿದೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications