ಆಲಮಟ್ಟಿ ಎತ್ತರ ಹೆಚ್ಚಿಸಲು ಕರ್ನಾಟಕ ನಿರ್ಧಾರ; ತೆಲಂಗಾಣ, ಆಂಧ್ರಕ್ಕೆ ಶಾಕ್
ಹೆಚ್ಚಿನ ನೀರು ಸಂಗ್ರಹಕ್ಕೆ ಮುಂದಾಗಿರುವ ಕರ್ನಾಟಕ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಮುಂದಾಗಿದೆ. ಇದರಿಂದ ನೆರೆಯ ರಾಜ್ಯಗಳಾದ ಆಂಧ್ರ ಪ್ರದೇಶ ಮತ್ತು ತೆಲಂಗಾಣಕ್ಕೆ ನೀರು ಪೂರೈಕೆ ಕಡಿಮೆಯಾಗಲಿದೆ.
ಬೆಂಗಳೂರು, ಫೆಬ್ರವಿ 7: ಹೆಚ್ಚಿನ ನೀರು ಸಂಗ್ರಹಕ್ಕೆ ಮುಂದಾಗಿರುವ ಕರ್ನಾಟಕ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಮುಂದಾಗಿದೆ. ಇದರಿಂದ ನೆರೆಯ ರಾಜ್ಯಗಳಾದ ಆಂಧ್ರ ಪ್ರದೇಶ ಮತ್ತು ತೆಲಂಗಾಣಕ್ಕೆ ನೀರು ಪೂರೈಕೆ ಕಡಿಮೆಯಾಗಲಿದೆ.
ಆಲಮಟ್ಟಿ ಜಲಾಶಯದ ಎತ್ತರವನ್ನು ಈಗಿರುವ 519.60 ಅಡಿಯಿಂದ 524.256 ಅಡಿಗಳಿಗೆ ಹೆಚ್ಚಿಸಲು ಕರ್ನಾಟಕ ಪ್ಲಾನ್ ಸಿದ್ಧಪಡಿಸಿದೆ. ಈ ಮೂಲಕ 3ನೇ ಹಂತದ ಕೃಷ್ಣ ಮೇಲ್ದಂಡೆ ಯೋಜನೆಯಡಿ 4 ಏತ ನೀರಾವರಿ ಯೋಜನೆ ನಿರ್ಮಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದರಿಂದ ನೆರೆಯ ರಾಜ್ಯಗಳಾದ ಆಂಧ್ರ ಪ್ರದೇಶ ಮತ್ತು ತೆಲಂಗಾಣದ ನೀರಿಗೆ ಹೊಡೆತ ಬೀಳಲಿದ್ದು ಎರಡೂ ಸರ್ಕಾರಗಳು ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ಮೆಟ್ಟಲೇರುವ ಸಾಧ್ಯತೆಗಳಿವೆ.[ಆಲಮಟ್ಟಿ ಎತ್ತರ ಬದಲಾವಣೆ ಇಲ್ಲ: ನ್ಯಾಯಾಧೀಕರಣ]

ಒಂದೊಮ್ಮೆ ಕರ್ನಾಟಕ ಆಲಮಟ್ಟಿ ಎತ್ತರ ಹೆಚ್ಚಿಸಿದ್ದೇ ಆದಲ್ಲಿ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರೈತರ ಜೀವನಾಡಿಯಾಗಿರುವ ಕೃಷ್ಣಾ ನದಿ ನೀರಿನ ಒಳಹರಿವಿನ ಪ್ರಮಾಣ ಕಡಿಮೆಯಾಗಲಿದೆ. ಈಗಾಗಲೇ ಆಂಧ್ರ ಪ್ರದೇಶ ಸರಕಾರ ಯೋಜನೆ ಬಗ್ಗೆ ಅಪಸ್ವರ ಎತ್ತಿದ್ದು ಪ್ರಕರಣ ನ್ಯಾಯಾಂಗ ಮೆಟ್ಟಿಲೇರುವ ಎಲ್ಲಾ ಸಾಧ್ಯತೆಗಳೂ ಇವೆ.[ಸೋಲಾರ್ ವಿದ್ಯುತ್ ನೀಡುವ ಆಲಮಟ್ಟಿ ಕಾಲುವೆಗಳು!]
ಈ ಕುರಿತು ಮಾತನಾಡಿರುವ ಆಂಧ್ರ ಪ್ರದೇಶ ಜಲ ಸಂಪನ್ಮೂಲ ಸಚಿವ ದೇವಿನೇನಿ ಉಮಾ ಮಹೇಶ್ವರ ರಾವ್, "ಆಲಮಟ್ಟಿ ನದಿ ನೀರು ಹಂಚಿಕೆ ಪ್ರಕರಣದ ವಿಚಾರಣೆ ಇನ್ನೂ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದೆ. ಪ್ರಕರಣದ ತೀರ್ಪು ಇನ್ನೂ ಹೊರಬಿದ್ದಿಲ್ಲ. ಈ ಹಂತದಲ್ಲಿ ಜಲಾಶಯದ ಎತ್ತರ ಏರಿಸಿ 4ಏತ ನೀರಾವರಿ ಯೋಜನೆ ನಿರ್ಮಿಸಲು ಕರ್ನಾಟಕ ಹೊರಟಿದೆ. ಇದು ಸರಿಯಲ್ಲ," ಎಂದು ಹೇಳಿದ್ದಾರೆ.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications