ಕಾರ್ತಿ ಚಿದಂಬರಂ ಜಾಮೀನು ಅರ್ಜಿ ವಿಚಾರಣೆಯ ರೋಚಕ ಘಟ್ಟಗಳು
ದೆಹಲಿ, ಮಾರ್ಚ್ 1: ಇಂದು ಹಲವು ರೋಚಕ, ಕುತೂಹಲಕಾರಿ ಅಂಶಗಳಿಗೆ ಪಟಿಯಾಲಾ ಹೌಸ್ ಕೋರ್ಟ್ ಸಾಕ್ಷಿಯಾಯಿತು. ಇದಕ್ಕೆ ಕಾರಣವಾಗಿದ್ದು ಕಾರ್ತಿ ಚಿದಂಬರಂ ಅವರ ಜಾಮೀನು ಅರ್ಜಿಯ ವಿಚಾರಣೆ.
ಕಾರ್ತಿ ಚಿದಂಬರಂಗೆ ತನ್ನ ಪೋಷಕರನ್ನು ಭೇಟಿಯಾಗಲು ನ್ಯಾಯಾಲಯವು ಕೋರ್ಟ್ ಹಾಲ್ ನಲ್ಲಿ ಅವಕಾಶ ನೀಡಿತು. ಆದರೆ ತನಿಖಾಧಿಕಾರಿಯ ಸಮ್ಮುಖದಲ್ಲಿ ತಂದೆ ಪಿ. ಚಿದಂಬರಂ ಮತ್ತು ತಾಯಿ ನಳಿನಿ ಚಿದಂಬರಂ ಜತೆ ಮಾತುಕತೆ ನಡೆಸಬಹುದು ಎಂದು ನ್ಯಾಯಾಧೀಶರು ಸೂಚನೆ ನೀಡಿದರು.

'ನಿನಗಾಗಿ ನಾನಿದ್ದೇನೆ'
ಲಂಡನ್ ನಿಂದ ಬಂದ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ನೇರವಾಗಿ ನ್ಯಾಯಾಲಯಕ್ಕೆ ತೆರಳಿದರು. ತಮ್ಮ ಮಗನ ಜತೆ ಸಣ್ಣ ಮಾತುಕತೆ ನಡೆಸಿದ ಅವರು "ಏನೂ ಯೋಜನೆ ಮಾಡಬೇಡ. ನಿನಗಾಗಿ ನಾನಿದ್ದೇನೆ. ಗಟ್ಟಿಯಾಗಿರು," ಎಂದು ಹೇಳಿದರು.

ಆಹಾರ ಚೆನ್ನಾಗಿಲ್ಲ
ಕೋರ್ಟ್ ಹಾಲ್ ಪ್ರವೇಶಿಸುತ್ತಿದ್ದಂತೆ ಸಿಬಿಐ ವಕೀಲರಿಗೆ ಕಾರ್ತಿ ಚಿದಂಬರಂ ನನಗೆ ಆಹಾರ ಇಷ್ಟವಾಗುತ್ತಿಲ್ಲ. ನನಗೆ ನೀಡಿದ ಆಹಾರದ ಗುಣಮಟ್ಟ ಕೆಟ್ಟದಾಗಿತ್ತು ಎಂದು ದೂರಿತ್ತರು.

ನಮ್ಮ ವಶದಲ್ಲಿದ್ದೀರಿ
ಕೋರ್ಟ್ ಹಾಲ್ ನಲ್ಲಿ ತಮ್ಮ ಗೆಳೆಯರೊಬ್ಬರ ಜತೆ ಕಾರ್ತಿ ಚಿದಂಬರಂ ಮಾತನಾಡಲು ಮುಂದಾದರು. ಈ ಸಂದರ್ಭ ಅವರನ್ನು ಸಿಬಿಐ ಅಧಿಕಾರಿಗಳು ತಡೆದರು. ಮಾತ್ರವಲ್ಲ ಇಂಗ್ಲೀಷ್ ನಲ್ಲಿ ಮಾತನಾಡಿ, ತಮಿಳಿನಲ್ಲಿ ಅಲ್ಲ ಎಂದು ಅಧಿಕಾರಿ ಕಾರ್ತಿಗೆ ಎಚ್ಚರಿಕೆ ನೀಡಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಕಾರ್ತಿ, "ನೀವು ನನ್ನ ಸುತ್ತ ಮುತ್ತಲಿರುವಾಗಲೂ ಇಂಗ್ಲೀಷ್ ನಲ್ಲಿ ಮಾತನಾಡಬೇಕು," ಎಂದು ಹೇಳಿದರು. ಇದಕ್ಕೆ ಕೆರಳಿದ ಅಧಿಕಾರಿ, "ನೀವು ನಮ್ಮ ಕಸ್ಟಡಿಯಲ್ಲಿದ್ದೀರಿ, ನಾವು ನಿಮ್ಮ ಕಸ್ಟಡಿಯಲ್ಲಿರುವುದಲ್ಲ," ಎಂದರು.

ಲಾಯರ್ ಭೇಟಿಗೆ ಅವಕಾಶ
ಪ್ರತಿ ದಿನ ಬೆಳಗ್ಗೆ 1 ಗಂಟೆ ಮತ್ತು ಸಂಜೆ ಒಂದು ಗಂಟೆ ತನ್ನ ವಕೀಲರನ್ನು ಕಾರ್ತಿ ಚಿದಂಬರಂ ಕಸ್ಟಡಿಯಲ್ಲಿ ಭೇಟಿಯಾಗಬಹುದು ಎಂದು ನ್ಯಾಯಾಲಯ ಆದೇಶ ನೀಡಿದೆ. ಆದರೆ ಮನೆ ಊಟ ನೀಡಬಾರದು ಎಂದು ಖಡಕ್ ಸೂಚನೆ ನೀಡಿದೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications