ಮಾರ್ಚ್ 24ರ ತನಕ ಚಿದಂಬರಂ ಮಗ ನ್ಯಾಯಾಂಗ ಬಂಧನಕ್ಕೆ, ತಿಹಾರ್ ಜೈಲಿಗೆ
ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಮಗ ಕಾರ್ತಿಯನ್ನು ಮಾರ್ಚ್ ಇಪ್ಪತ್ನಾಲ್ಕರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ವಿಶೇಷ ಕೋರ್ಟ್ ಸೂಚನೆ ನೀಡಿದೆ. ಇದರರ್ಥ ಏನೆಂದರೆ ಮಾರ್ಚ್ ಇಪ್ಪತ್ನಾಲ್ಕರ ತನಕ ಕಾರ್ತಿ ಚಿದಂಬರಂ ತಿಹಾರ್ ಜೈಲಿನಲ್ಲಿ ಕಳೆಯಬೇಕಾಗುತ್ತದೆ. ಹಣಕಾಸು ಅವ್ಯವಹಾರದ ಆರೋಪ ಅವರ ಮೇಲಿದೆ.
ಅಗತ್ಯ ಇರುವಷ್ಟು ಭದ್ರತೆಯನ್ನು ಕಾರ್ತಿ ಚಿದಂಬರಂಗೆ ನೀಡಿ ಎಂದು ತಿಹಾರ್ ಜೈಲಿನ ಅಧಿಕಾರಿಗಳಿಗೆ ಕೋರ್ಟ್ ನಿರ್ದೇಶನ ನೀಡಿದೆ. ಇನ್ನು ಮನೆಯೂಟವನ್ನು ಜೈಲಿಗೆ ತರಿಸಿಕೊಳ್ಳಲು ಅನುಮತಿ ನೀಡಬೇಕು ಎಂದು ಕೋರ್ಟ್ ನ ಕೇಳಿಕೊಂಡಿದ್ದರು ಕಾರ್ತಿ. ಅದಕ್ಕೆ ಅವಕಾಶವನ್ನು ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಅಂದಹಾಗೆ ಐಎನ್ ಎಕ್ಸ್ ಮೀಡಿಯಾಗೆ ಸಂಬಂಧಿಸಿದ ವಿಚಾರಣೆಯನ್ನು ಕೋರ್ಟ್ ಕೈಗೆತ್ತಿಕೊಂಡಿತ್ತು. ಮತ್ತಷ್ಟು ಸಮಯ ನಮ್ಮ ವಶಕ್ಕೆ ಕಾರ್ತಿ ಚಿದಂಬರಂ ಅವರನ್ನು ನೀಡಬೇಕು ಎಂದು ಸಿಬಿಐ ಯಾವುದೇ ಅರ್ಜಿಯನ್ನು ಕೋರ್ಟ್ ಗೆ ಹಾಕಿರಲಿಲ್ಲ. ಯುಪಿಎ ಸರಕಾರದ ಅವಧಿಯಲ್ಲಿ ಚಿದಂಬರಂ ಪ್ರಭಾವಿ ಸಚಿವರಾಗಿದ್ದರು. ಬಿಜೆಪಿ ಸರಕಾರದ ವಿರುದ್ಧದ ಟೀಕಾಕಾರರಲ್ಲಿ ಚಿದಂಬರಂ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications