ಮಾರ್ಚ್ 9ರವರೆಗೆ ಕಾರ್ತಿ ಚಿದಂಬರಂಗೆ ಸಿಬಿಐ ಕಸ್ಟಡಿಯೇ ಗತಿ
ನವದೆಹಲಿ, ಮಾರ್ಚ್ 6: ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಸಿಬಿಐ ಕಸ್ಟಡಿ ಅವಧಿಯನ್ನು ಮಾರ್ಚ್ 9ರವರೆಗೆ ವಿಸ್ತರಣೆ ಮಾಡಲಾಗಿದೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕಾರ್ತಿ ಚಿದಂಬರಂರನನ್ನು ಮತ್ತೆ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿ ಇಂದು ಪಟಿಯಾಲ ಹೌಸ್ ನ್ಯಾಯಾಲಯ ಆದೇಶ ನೀಡಿತು. ಮತ್ತು ಮುಂದಿನ ವಿಚಾರಣೆಯನ್ನು ಮಾರ್ಚ್ 9ಕ್ಕೆ ಮುಂದೂಡಿದೆ.
ಇಂದು ತನಿಖಾ ಸಂಸ್ಥೆ ಮುಚ್ಚಿದ ಲಕೋಟೆಯಲ್ಲಿ ಕಳೆದ 6 ದಿನಗಳಲ್ಲಿ ಕೈಗೊಂಡ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿತು. ಪ್ರಶ್ನೆಗಳಿಗೆ ಉತ್ತರಿಸುವಾಗ ಕಾರ್ತಿ ಚಿದಂಬರಂ ಹಲವು ವಿಷಯಗಳನ್ನು ಮುಚ್ಚಿಟ್ಟರೂ ಪ್ರಮುಖ ಮಾಹಿತಿಗಳನ್ನು ಕಲೆ ಹಾಕಿರುವುದಾಗಿ ಇದೇ ಸಂದರ್ಭದಲ್ಲಿ ಸಿಬಿಐ ವಕೀಲ ವಿಕೆ ಶರ್ಮಾ ನ್ಯಾಯಾಲಯಕ್ಕೆ ತಿಳಿಸಿದರು.

ಇನ್ನು ವಿಚಾರಣೆ ವೇಳೆ ಕೋರ್ಟ್ ಹಾಲ್ ನಲ್ಲಿ ಉಪಸ್ಥಿತರಿದ್ದ ತಂದೆ ಚಿದಂಬರಂ ಮತ್ತು ತಾಯಿ ನಳಿನಿ ಚಿದಂಬರಂರನ್ನು 10 ನಿಮಿಷಗಳ ಕಾಲ ಭೇಟಿಯಾಗಲು ಕಾರ್ತಿ ಚಿದಂಬರಂಗೆ ನ್ಯಾಯಾಧೀಶರು ಅವಕಾಶ ನೀಡಿದರು.
ಈ ಹಿಂದೆ ಮಾರ್ಚ್ 1, 2018ರಂದು ಕಾರ್ತಿ ಚಿದಂಬರಂರನ್ನು 5 ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಲಾಗಿತ್ತು. ಪ್ರಕರಣದಲ್ಲಿ ಇನ್ನೂ ಹೆಚ್ಚಿನ ತನಿಖೆ ಅಗತ್ಯವಿದೆ. ಮತ್ತು ಕಾರ್ತಿ ಚಿದಂಬರಂ ನಮ್ಮ ವಶದಲ್ಲಿರುವುದು ಅಗತ್ಯವಾಗಿದೆ ಎಂದು ಸಿಬಿಐ ವಾದಿಸಿದ ಹಿನ್ನಲೆಯಲ್ಲಿ ನ್ಯಾಯಾಧೀಶರು ಇನ್ನೂ ಮೂರು ದಿನಗಳ ಕಾಲ ಅವರನ್ನು ಸಿಬಿಐ ವಶಕ್ಕೆ ನೀಡಿದ್ದಾರೆ.
ಕಳೆದ 5 ದಿನಗಳ ವಿಚಾರಣೆಯಚಲ್ಲಿ ಕಾರ್ತಿ ಚಿದಂಬರಂನ್ನು ಐಎನ್ಎಕ್ಸ್ ಮೀಡಿಯಾದ ಮಾಜಿ ನಿರ್ದೇಶಕಿ ಇಂದ್ರಾಣಿ ಮುಖರ್ಜಿ ಬಂಧಿತರಾಗಿರುವ ಮುಂಬೈನ ಬೈಕುಲ್ಲಾ ಜೈಲಿಗೆ ಕರೆದೊಯ್ದು ಮುಖಾಮುಖಿ ವಿಚಾರಣೆ ನಡೆಸಲಾಗಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ಮಾಹಿತಿ ನೀಡಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications