ನೀವು ಆಮ್ಲೆಟ್ ತಿಂತಿರಾ!: ಗಂಟಲಲ್ಲಿ ಆಮ್ಲೆಟ್ ಸಿಲುಕಿ ಕಾಸರಗೋಡಿನ ವ್ಯಕ್ತಿ ಸಾವು: ಆಗಿದ್ದೇನು..?
ಮನುಷ್ಯನಿಗೆ ಸಾವು ಹೇಗೆ ಬರುತ್ತೆ ಎಂದು ಗೊತ್ತಾಗುವುದಿಲ್ಲ. ಇತ್ತೀಚೆಗೆ ದೈನಂದಿನ ಕಾರ್ಯದಲ್ಲಿ ನಿರತಾದಾಗ, ದೈಹಿಕವಾಗಿ ಗಟ್ಟಿಮುಟ್ಟಾದ ಮತ್ತು ಆರೋಗ್ಯವಂತ ವ್ಯಕ್ತಿಗಳೇ ಹೃದಯಾಘಾತದಿಂದ ಮೃತಪಡುವ ಸಂಖ್ಯೆ ಹೆಚ್ಚಾಗುತ್ತಿದೆ. ಇದೆಲ್ಲ ಒಂದೆಡೆಯಾದರೆ, ಇಲ್ಲೊಬ್ಬ ವ್ಯಕ್ತಿ ಆಮ್ಲೆಟ್ ತಿನ್ನುವಾಗ ಮೃತಪಟ್ಟಿರುವ ಘಟನೆ ಕಾರಸಗೋಡಿನಲ್ಲಿ ನಡೆದಿದೆ.
ವಿನ್ಸೆಂಟ್ ಕಾಸ್ತಾ (52) ಎಂಬುವವರು ಮನೆ ಬಳಿಯ ಗೂಡಂಗಡಿಯಲ್ಲಿ ಆಮ್ಲೆಟ್ ತಿನ್ನುವಾಗ ಅದು ಗಂಟಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಇವರು ಕಾಸರಗೋಡಿನ ಬದಿಯಡ್ಕ ಚುಳ್ಳಿಕ್ಕಾನ ನಿವಾಸಿಯಾಗಿದ್ದಾರೆ. ಸದ್ಯ ಬಾರಡ್ಕದಲ್ಲಿ ವಾಸವಿದ್ದ ಅವರು ಅಸುನಿಗಿದ್ದಾರೆ. 52 ವರ್ಷದ ಇವರು ಅವಿವಾಹಿತರಾಗಿದ್ದು, ಒಬ್ಬರೆ ಇದ್ದರು ಎಂದು ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿನ್ಸೆಂಟ್ ತಮ್ಮ ಮನೆ ಸಮೀಪ ಗೂಡಂಗಡಿಗೆ ಎಂದಿನಂತೆ ಹೋಗಿದ್ದಾರೆ. ಅಲ್ಲಿ ಆಮ್ಲೆಟ್ ತಿನ್ನುತ್ತಿದ್ದರು. ಈ ವೇಳೆ ಗಂಟಲಿಗೆ ಆಮ್ಲೆಟ್ ಸಿಲುಕಿ ಒದ್ದಾಡಿದ್ದಾರೆ. ಕೂಡಲೇ ಸ್ಥಳಿಯರು ಅವರನ್ನು ಕಂಬಳೆಯ ಆಸ್ಪತ್ರೆಗೆ ಸೇರಿಸಿದರಾದರೂ ಫಲಕಾರಿಯಾಗಲಿಲ್ಲ. ಅವರು ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲೇ ಜೀವ ಬಿಟ್ಟಿದ್ದಾರೆ.
ಬೇಳ ಕಟ್ಟಂತಗಡಿ ಎಂಬಲ್ಲಿ ಅವರು ವೆಲ್ಡಿಂಗ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ಬಳಿಕ ಸ್ಥಳಕ್ಕೆ ಬಂದ ಬದಿಯಡ್ಕ ಪೊಲೀಸರು ಸ್ಥಳಿಯರಿಂದ ಮಾಹಿತಿ ಪಡೆದು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸುದ್ದಿ ಕೇಳಲು ಚೂರು ಅಚ್ಚರಿ ಅನ್ನಿಸಿದರೂ ಆಮ್ಲೆಟ್ ತಿನ್ನುವಾಗ ಮೃತಪಟ್ಟಿದ್ದಾರೆ. ಆಮ್ಲೆಟ್ನಲ್ಲಿ ಬೇರೆ ಏನಾದರು ಕಸರು ಇತ್ತಾ? ಅಥವಾ ಅವರಿಗೆ ಅನಾರೋಗ್ಯ ಎದುರಾಗಿತ್ತಾ? ಅಥವಾ ತಿನ್ನುವಾಗ ಹೃದಯಾಘಾತವಾಗಿ ಮೃತಪಟ್ಟರಾ ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಇತ್ತ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಇದೆಲ್ಲವು ಅಸಾಧ್ಯ. ಯಾರಾದರೂ ಆಮ್ಲೆಟ್ ತಿನ್ನುವಾಗ ಮೃತಪಟ್ಟರೆಂದರೆ ನಂಬಲು ಆಗಲ್ಲ. ಬಹುಶಃ ಅವರಿಗೆ ಹೃದಯಾಘಾತವಾಗಿರಬೇಕು ಎಂದು ಈ ಸಾವಿನ ಬಗ್ಗೆ ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನ ಮಾಡುತ್ತಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications