Get Updates
Get notified of breaking news, exclusive insights, and must-see stories!

ದೆಹಲಿ ಹೈಕೋರ್ಟ್‌ನಲ್ಲಿ ಕ್ಷಮೆ ಕೇಳಿದ ದಿ ಕಾಶ್ಮೀರ್ ಫೈಲ್ಸ್‌ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

ನವದೆಹಲಿ, ಏಪ್ರಿಲ್‌ 10: ಕಾಶ್ಮೀರ್‌ ಫೈಲ್ಸ್‌ ಚಲನಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಸೋಮವಾರ ದೆಹಲಿ ಹೈಕೋರ್ಟ್‌ಗೆ ಹಾಜರಾಗಿ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ನೀಡಿದ್ದ ಹೇಳಿಕೆ ಕ್ರಿಮಿನಲ್ ಅವಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಷರತ್ ಕ್ಷಮೆಯಾಚಿಸಿದರು.

ವಿವೇಕ್ ಅಗ್ನಿಹೋತ್ರಿ ಕ್ಷಮಾಪಣೆಯನ್ನು ಸ್ವೀಕರಿಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ವಿಕಾಸ್ ಮಹಾಜನ್ ಅವರ ಪೀಠವು ಅಗ್ನಿಹೋತ್ರಿ ಅವರನ್ನು ಅವಹೇಳನದ ಆರೋಪದಿಂದ ಮುಕ್ತಗೊಳಿಸಿ ಭವಿಷ್ಯದಲ್ಲಿ ಜಾಗರೂಕರಾಗಿರಲು ಅವರಿಗೆ ಎಚ್ಚರಿಕೆ ನೀಡಿತು.

Kashmir Files director Vivek Agnihotri apologizes in Delhi High Court

ವಿವೇಕ್ ಅಗ್ನಿಹೋತ್ರಿ ಅವರು ನ್ಯಾಯಾಂಗದ ಸಂಸ್ಥೆಯ ಬಗ್ಗೆ ಅತ್ಯಂತ ಗೌರವವನ್ನು ಹೊಂದಿದ್ದಾರೆ ಮತ್ತು ಉದ್ದೇಶಪೂರ್ವಕವಾಗಿ ಈ ನ್ಯಾಯಾಲಯದ ಘನತೆಗೆ ಧಕ್ಕೆ ತರಲು ಉದ್ದೇಶಿಸಿಲ್ಲ ಎಂದು ಹೇಳಿರುವ ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ನೀಡಲಾದ ಕಾರಣ ತೋರಿಸಲು ನೋಟಿಸ್ ಅನ್ನು ಈ ಮೂಲಕ ಹಿಂಪಡೆಯಲಾಗಿದ್ದು, ವಿವೇಕ್ ಅಗ್ನಿಹೋತ್ರಿ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಪೀಠ ಹೇಳಿದೆ.

ನ್ಯಾಯಾಲಯದ ಹಿಂದಿನ ನಿರ್ದೇಶನದ ಅನುಸಾರವಾಗಿ ಅಗ್ನಿಹೋತ್ರಿ ನ್ಯಾಯಾಲಯದ ಮುಂದೆ ಸೋಮವಾರ ಹಾಜರಾದರು. 2018ರಲ್ಲಿ ಚಲನಚಿತ್ರ ನಿರ್ಮಾಪಕ ವಿವೇಕ್‌ ಅಗ್ನಿಹೋತ್ರಿ ಆಗ ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದ ಮತ್ತು ಪ್ರಸ್ತುತ ಒರಿಸ್ಸಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರ ವಿರುದ್ಧ ಪಕ್ಷಪಾತವನ್ನು ಆರೋಪಿಸಿ ಟ್ವೀಟ್‌ಗಳನ್ನು ಮಾಡಿದ್ದರು. ಎಸ್ ಮುರಳೀಧರ್ ಅವರು ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಿಂದ ಬಿಡುಗಡೆ ಮಾಡಿದ್ದರು.

ವಿವೇಕ್‌ ಅಗ್ನಿಹೋತ್ರಿ ಮತ್ತು ಇತರರ ವಿರುದ್ಧ ಹೈಕೋರ್ಟ್ ನಿಂದ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿತ್ತು. ಕಳೆದ ವರ್ಷ ಡಿಸೆಂಬರ್ 6 ರಂದು, ಅಫಿಡವಿಟ್ ಮೂಲಕ ಬೇಷರತ್ ಕ್ಷಮೆಯಾಚಿಸಿದ ನಂತರ ನ್ಯಾಯಾಲಯವು ಚಲನಚಿತ್ರ ನಿರ್ಮಾಪಕರನ್ನು ವೈಯಕ್ತಿಕವಾಗಿ ಕ್ಷಮೆ ಕೇಳುವಂತೆ ಸೂಚನೆ ನೀಡಿತ್ತು.

Kashmir Files director Vivek Agnihotri apologizes in Delhi High Court

"ನಾವು ವಿವೇಕ್‌ ಅಗ್ನಿಹೋತ್ರಿ ಆಪಾದಿತ ಅಪರಾಧಿಯಾಗಿರುವುದರಿಂದ ನ್ಯಾಯಲಯಕ್ಕೆ ಬರಲು ಹೇಳಿದ್ದೇವೆ. ಈ ನ್ಯಾಯಾಲಯದ ಮುಂದೆ ಹಾಜರಾಗಲು ಅವರಿಗೆ ಏನಾದರೂ ತೊಂದರೆ ಇದೆಯೇ? ಅವರು ಹಾಜರಾಗಬೇಕು ಮತ್ತು ವೈಯಕ್ತಿಕವಾಗಿ ಕ್ಷಮೆ ಕೇಳಬೇಕು ಎಂದು ನ್ಯಾಯಾಲಯ ಹೇಳಿತ್ತು. ಮತ್ತೊಬ್ಬ ಆಪಾದಿತ ಆರೋಪಿ ಆನಂದ್ ರಂಗನಾಥನ್ ಪರ ಹಾಜರಾದ ವಕೀಲರು, ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕವಾದ ಮೇ 24 ರಂದು ನ್ಯಾಯಾಲಯದ ಮುಂದೆ ಹಾಜರಾಗುವುದಾಗಿ ಮಾಹಿತಿ ನೀಡಿದ್ದರು.

ಈ ವಿಚಾರದಲ್ಲಿ ಅಮಿಕಸ್ ಕ್ಯೂರಿಯಾಗಿ ನ್ಯಾಯಾಲಯಕ್ಕೆ ಸಹಾಯ ಮಾಡುತ್ತಿರುವ ಹಿರಿಯ ವಕೀಲ ಅರವಿಂದ್ ನಿಗಮ್ ಅವರು, ರಂಗನಾಥನ್ ಅವರು ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದು, ಹೋರಾಟಕ್ಕೆ ಇಳಿಯುವುದಾಗಿ ಈ ಹಿಂದೆ ತಿಳಿಸಿದ್ದರು. ಹಿರಿಯ ವಕೀಲ ರಾಜಶೇಖರ್ ರಾವ್ ಅವರ ಪತ್ರವನ್ನು ಸ್ವೀಕರಿಸಿದ ನಂತರ ನ್ಯಾಯಾಲಯವು ಪ್ರಸ್ತುತ ಪ್ರಕರಣದಲ್ಲಿ ತನ್ನದೇ ಆದ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿತು.

ನ್ಯಾಯಾಧೀಶರ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಚೆನ್ನೈ ಮೂಲದ "ತುಗ್ಲಕ್" ವಾರಪತ್ರಿಕೆಯ ಸಂಪಾದಕ ಸ್ವಾಮಿನಾಥನ್ ಗುರುಮೂರ್ತಿ ವಿರುದ್ಧವೂ ಅವಹೇಳನ ಪ್ರಕ್ರಿಯೆ ಆರಂಭಿಸಲಾಗಿದೆ. ಗುರುಮೂರ್ತಿ ವಿರುದ್ಧದ ವಿಚಾರಣೆಯನ್ನು ಅಕ್ಟೋಬರ್ 2019 ರಲ್ಲಿ ಮುಕ್ತಗೊಳಿಸಲಾಗಿತ್ತು. ರಾವ್ ಅವರು ತಮ್ಮ ಪತ್ರದಲ್ಲಿ ಟ್ವೀಟ್‌ಗಳು ಹೈಕೋರ್ಟ್ ನ್ಯಾಯಾಧೀಶರ ಮೇಲೆ ದಾಳಿ ಮಾಡುವ ಉದ್ದೇಶಪೂರ್ವಕ ಪ್ರಯತ್ನ ಎಂದು ಹೇಳಿದ್ದಾರೆ.

ಈ ಹಿಂದೆ, ನ್ಯಾಯಾಧೀಶರ ವಿರುದ್ಧ ವೃಥಾ ಆರೋಪಗಳನ್ನು ಹೊರಿಸುವ ಆಕ್ಷೇಪಾರ್ಹ ಲೇಖನಕ್ಕೆ ವೆಬ್‌ಲಿಂಕ್‌ಗಳನ್ನು ನಿರ್ಬಂಧಿಸುವಂತೆ ನ್ಯಾಯಾಲಯವು ಎರಡು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ನಿರ್ದೇಶನ ನೀಡಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+