ಕತುವಾ ಪ್ರಕರಣ: ಸಂತ್ರಸ್ಥೆ ಕುಟುಂಬದ ವಕೀಲರಿಗೆ ಕೊಲೆ ಬೆದರಿಕೆ
ಶ್ರೀನಗರ, ಏಪ್ರಿಲ್ 16: ದೇಶದಾದ್ಯಂತ ಕಿಚ್ಚು ಹೊತ್ತಿಸಿರುವ ಜಮ್ಮು ಕಾಶ್ಮೀರದ ಕತುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆಯ ಕುಟುಂಬದ ಪರ ವಕಾಲತ್ತು ವಹಿಸಿದ್ದ ವಕೀಲರಿಗೆ ಕೊಲೆ ಬೆದರಕೆ ಕರೆಗಳು ಬಂದಿವೆ.
ಕತುವಾ ಪ್ರಕರಣ ಇತ್ಯರ್ಥಕ್ಕೆ ತ್ವರಿತ ನ್ಯಾಯಾಲಯ: 90 ದಿನಗಳ ಗಡುವು
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವಕೀಲೆ ದೀಪಿಕಾ ಎಸ್ ರಾಜಾವತ್, "ನಾನು ಅಪಾಯದಲ್ಲಿದ್ದೇನೆ. ನನ್ನನ್ನು ಯಾವಾಗ ಬೇಕಾದರೂ ಅತ್ಯಾಚಾರ ಮಾಡಬಹುದು, ಕೊಲ್ಲಬಹುದು. ನನಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ನಿಮ್ಮನ್ನು ಸುಮ್ಮನೇ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡುತ್ತಿದ್ದಾರೆ" ಎಂದು ಹೇಳಿದ್ದಾರೆ.
I don't know till when I will be alive. I can be raped, my modesty can be outraged, I can be killed, I can be damaged. I was threatened yesterday that 'we will not forgive you'. I am going to tell SC tomorrow that I am in danger: Deepika S Rajawat, Counsel, Kathua victim's family pic.twitter.com/khXFELUqZe
— ANI (@ANI) April 15, 2018
ಇದಕ್ಕೂ ಮುನ್ನ ಜಮ್ಮುವಿನ ಬಾರ್ ಅಸೋಸಿಯೇಶನ್ ಅಧ್ಯಕ್ಷ ಬಿ ಎಸ್ ಸ್ಲಾಥಿಯಾ ಅವರು ಸಹ ಕೋರ್ಟಿನಲ್ಲಿ ಬಹಿರಂಗವಾಗಿಯೇ ತಮಗೆ ಬೆದರಿಕೆ ಒಡ್ಡಿದ್ದರು ಎಂದು ದೀಪಿಕಾ ಆರೋಪಿಸಿದ್ದರು.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಜನವರಿ ತಿಂಗಳಿನಲ್ಲಿ ಕತುವಾದ ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ ದೇವಾಲಯವೊಂದರಲ್ಲಿ ಮತ್ತು ಬರುವ ಔಷಧ ನೀಡಿ ನಿರಂತರವಾಗಿ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ನಂತರ ಮುಗ್ಧ ಬಾಲಕಿಯನ್ನು ಕೊಲೆ ಮಾಡಲಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಎಂಟು ಜನ ಆರೋಪಿಗಳನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವನ್ನು 90 ದಿನಗಳೊಳಗೆ ಇತ್ಯರ್ಥಗೊಳಿಸಿ, ಅಪರಾಧಿಗಳನ್ನು ಪತ್ತೆ ಮಾಡಿ ಶಿಕ್ಷಿಸುವಂತೆ ಜಮ್ಮು-ಕಾಶ್ಮೀರ ಸರ್ಕಾರ ತ್ವರಿತ ನ್ಯಾಯಾಲಯವನ್ನು ರಚಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಮ್ಮು ಕಾಶ್ಮೀರದ ಚೀಫ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಲಿದೆ.