ಕತುವಾ ಪ್ರಕರಣ ಜಮ್ಮು-ಕಾಶ್ಮೀರದಿಂದ ವರ್ಗಾಯಿಸಿ: ಸುಪ್ರೀಂಗೆ ಮನವಿ
ನವದೆಹಲಿ, ಏಪ್ರಿಲ್ 16: ಕತುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಜಮ್ಮು-ಕಾಶ್ಮೀರದ ಆಚೆ ವಿಚಾರಣೆ ನಡೆಸಲು ವರ್ಗಾಯಿಸವುಂತೆ ಕೋರಿ ಸಂತ್ರಸ್ಥೆಯ ತಂದೆ ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದಾರೆ.
ಭದ್ರತೆ ನೀಡುವಂತೆಯೂ ಸಂತ್ರಸ್ಥೆಯ ತಂದೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದು, ಈ ಕುರಿತಂತೆ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮಧ್ಯಾಹ್ನ 2 ಗಂಟೆಗೆ ನಡೆಸಲಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಎಂಟು ಆರೋಪಿಗಳನ್ನು ಇಲ್ಲಿನ ಚೀಫ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ ಇಂದಿನಿಂದ ವಿಚಾರಣೆ ನಡೆಸಲಾಗುತ್ತಿದೆ.

ಇಡೀ ದೇಶವನ್ನು ಬೆಚ್ಚಿ ಬೀಳಿಸಿದ ಕತುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಭವಿಸಿದ್ದು ಇದೇ ವರ್ಷದ ಜನವರಿ ತಿಂಗಳಿನಲ್ಲಿ. ಕತುವಾದ ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಗೆ ಮತ್ತು ಬರುವ ಔಷಧ ನೀಡಿ, ದೇವಾಲಯದಲ್ಲಿ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ನಂತರ ಆಕೆಯನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.












Click it and Unblock the Notifications