ಜೂನ್ ವೇಳೆಗೆ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಖಚಿತ: ವೇಣುಗೋಪಾಲ್
ನವದೆಹಲಿ, ಜನವರಿ 22: ಏನೇ ಆದರೂ ಜೂನ್ ವೇಳೆಗೆ ಕಾಂಗ್ರೆಸ್ ಪಕ್ಷ ತನ್ನ ಚುನಾಯಿತ ಅಧ್ಯಕ್ಷರನ್ನು ಹೊಂದಲಿದೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ. 2021ರ ಜೂನ್ ವೇಳೆಗೆ ಪಕ್ಷದ ಚುನಾಯಿತ ಅಧ್ಯಕ್ಷರನ್ನು ಹೊಂದಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ನಿರ್ಧರಿಸಿದೆ ಎಂದು ಅವರು ಶುಕ್ರವಾರ ತಿಳಿಸಿದ್ದಾರೆ.
ಪಕ್ಷದ ಅಧ್ಯಕ್ಷರ ಆಯ್ಕೆ ಹಾಗೂ ಎಐಸಿಸಿ ಪದಾಧಿಕಾರಿಗಳ ಪುನಾರಚನೆಗೆ ಮೇ 29ರಂದು ಚುನಾವಣೆ ನಡೆಸುವಂತೆ ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರ ಪ್ರಸ್ತಾಪ ಇರಿಸಿದೆ ಎಂದು ವರದಿಯಾಗಿದೆ.
ಪಕ್ಷದ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಆನ್ಲೈನ್ ಸಭೆ ನಡೆಯಿತು. ಪಕ್ಷದ ಪುನಾರಚನೆಗೆ ಚುನಾವಣೆ ನಡೆಸಲು ಈ ಮಹತ್ವದ ಕಾರ್ಯಕಾರಿ ಸಭೆ ನಡೆಸಲಾಯಿತು. ಸೋನಿಯಾ ಗಾಂಧಿ ಅವರ ಭಾಷಣದ ಬಳಿಕ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷರು ಕಳುಹಿಸಿದ ಸಾಂಸ್ಥಿಕ ಚುನಾವಣಾ ವೇಳಾಪಟ್ಟಿಯನ್ನು ಓದುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ ವೇಣುಗೋಪಾಲ್ ಅವರಿಗೆ ಸೂಚಿಸಿದರು.

ಮಧುಸೂದನ್ ಮಿಸ್ತ್ರಿ ನೇತೃತ್ವದ ಸಿಇಸಿ, ಎಐಸಿಸಿ ಅಧಿವೇಶನ ಹಾಗೂ ಮೇ 29ರಂದು ಪಕ್ಷದ ಅಧ್ಯಕ್ಷರ ಚುನಾವಣೆಗೆ ಪ್ರಸ್ತಾಪಿಸಿದ್ದಾರೆ.
2019ರ ಮೇ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿನ ಪಕ್ಷದ ಹೀನಾಯ ಸೋಲಿನ ಬಳಿಕ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತೊರೆದಿದ್ದರು. 2019ರ ಆಗಸ್ಟ್ನಲ್ಲಿ ಸೋನಿಯಾ ಅವರನ್ನು ಮಧ್ಯಂತರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು.
ಆದರೆ ಪಕ್ಷಕ್ಕೆ ಪೂರ್ಣಾವಧಿ ಮತ್ತು ಸಕ್ರಿಯ ಅಧ್ಯಕ್ಷರ ಅಗತ್ಯವಿದ್ದು, ಇಡೀ ಪಕ್ಷವನ್ನು ಸಂಘಟನಾತ್ಮಕವಾಗಿ ಪುನರ್ ರಚಿಸಬೇಕೆಂದು ಪಕ್ಷದ ಒಂದು ವರ್ಗದ ನಾಯಕರು ಬೇಡಿಕೆ ಇರಿಸಿದ್ದಾರೆ.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications