ದೆಹಲಿ ಮದ್ಯ ನೀತಿ ಹಗರಣದಲ್ಲಿ ಕೆಸಿಆರ್ ಪುತ್ರಿ ಕವಿತಾಗೆ ಸಿಬಿಐ ಸಮನ್ಸ್: ತೆಲಂಗಾಣದಲ್ಲಿ ಭುಗಿಲೆದ್ದ ರಾಜಕೀಯ ಸಂಘರ್ಷ
ಹೈದರಾಬಾದ್, ಡಿಸೆಂಬರ್ 02: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ಮಂಗಳವಾರ ಸಮನ್ಸ್ ಜಾರಿ ಮಾಡಿದೆ.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಾಕ್ಷಿಯಾಗಿ ಹಾಜರಾಗುವಂತೆ ಸಿಬಿಐ ಸೂಚಿಸಿದೆ.
ವಿಧಾನ ಪರಿಷತ್ ಸದಸ್ಯೆಯಾಗಿರುವ ಕವಿತಾ ಅವರಿಗೆ ದೆಹಲಿಯ ಸಿಬಿಐ ಪ್ರಧಾನ ಕಚೇರಿ ಅಥವಾ ಹೈದರಾಬಾದ್ನ ಸಿಬಿಐ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಆಯ್ಕೆಯನ್ನು ನೀಡಲಾಗಿದೆ.

ಯಾರಿಗೂ ಹೆದರುವುದಿಲ್ಲ ಎಂದ ಕವಿತಾ
ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಚಾರಣೆಗೆ ನಾನು ಹೆದರುವುದಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಗಳು ನಡೆಸುವ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ಅವರು ಹೇಳಿದ್ದಾರೆ.
ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,'ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಿಕೊಂಡು ಅಧಿಕಾರಕ್ಕೆ ಬರಲು ಇಡಿ, ಸಿಬಿಐ ಮತ್ತು ಐಟಿಯಂತಹ ಕೇಂದ್ರ ಸಂಸ್ಥೆಗಳನ್ನು ಬಳಸುವುದನ್ನು ನಿಲ್ಲಿಸಬೇಕು' ಎಂದು ತಿಳಿಸಿದ್ದಾರೆ.
'ನೀವು(ಮೋದಿ) ನನ್ನನ್ನು ಜೈಲಿಗೆ ಹಾಕಲು ಬಯಸಿದರೆ, ಅದನ್ನು ಮಾಡಿ. ನನಗೆ ಯಾವುದೇ ತೊಂದರೆ ಇಲ್ಲ. ಆದರೆ ನಾವು ಜನರಿಗಾಗಿ ಕೆಲಸ ಮಾಡುವುದನ್ನು ನಿಲ್ಲಿಸುವುದಿಲ್ಲ. ಬಿಜೆಪಿಯ ವೈಫಲ್ಯಗಳನ್ನು ಬಹಿರಂಗಪಡಿಸುತ್ತೇವೆ' ಎಂದು ಕವಿತಾ ವಾಗ್ದಾಳಿ ನಡೆಸಿದ್ದಾರೆ.

'ನೀವು ಸರ್ಕಾರವನ್ನು ಬೀಳಿಸಲು ಪಿತೂರಿ ನಡೆಸಿದ್ದೀರಿ. ನಾವು ಇದನ್ನು ಜನರ ಮುಂದೆ ಬಹಿರಂಗಪಡಿಸಿದ್ದೇವೆ. ಇದಕ್ಕೆ ಪ್ರತಿಕ್ರಿಯೆಯಾಗಿ ಇಡಿ, ಸಿಬಿಐ, ಐಟಿ ಕೇಸ್ಗಳನ್ನು ಸಚಿವರು, ಶಾಸಕರು ಮತ್ತು ಎಂಎಲ್ಸಿಗಳ ವಿರುದ್ಧ ದಾಖಲಿಸಲಾಗಿದೆ' ಎಂದು ಅವರು ಹರಿಹಾಯ್ದಿದ್ದಾರೆ.
'ನಮಗೆ ಯಾವುದೇ ಭಯವಿಲ್ಲ. ಹೆಚ್ಚೆಂದರೆ ನೀವು ಏನು ಮಾಡುತ್ತೀರಿ. ನಮ್ಮನ್ನು ಗಲ್ಲಿಗೇರಿಸುತ್ತೀರಾ? ಹೆಚ್ಚೆಂದರೆ ಜೈಲಿಗೆ ಹಾಕಬಹುದು. ಅದನ್ನು ಮಾಡಿ. ಜನರು ನಮ್ಮೊಂದಿಗೆ ಇರುವವರೆಗೆ ಮತ್ತು ನಾವು ಜನರಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವವರೆಗೆ ನಾವು ಭಯ ಪಡುವುದಿಲ್ಲ. ನಮಗೆ ಏನೂ ಆಗುವುದೂ ಇಲ್ಲ' ಎಂದು ಕವಿತಾ ತಿಳಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications