ಕೆಸಿಆರ್ ಶೀಘ್ರದಲ್ಲೇ ವಿಆರ್ಎಸ್ ತೆಗೆದುಕೊಳ್ಳುತ್ತಾರೆ: ಜೆಪಿ ನಡ್ಡಾ
ಹೈದರಾಬಾದ್, ಡಿಸೆಂಬರ್ 16: ಟಿಆರ್ಎಸ್ ಬಿಆರ್ಎಸ್ ಆಗಿದ್ದು, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಶೀಘ್ರದಲ್ಲೇ ವಿಆರ್ಎಸ್ (ಸ್ವಯಂ ನಿವೃತ್ತಿ) ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವ್ಯಂಗ್ಯವಾಡಿದ್ದಾರೆ.
ಮುಂದಿನ ವರ್ಷ ತೆಲಂಗಾಣ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ಎಲ್ಲಾ ವರ್ಗದ ಜನರಿಗೆ ಮನವಿ ಮಾಡಿದರು. ತೆಲಂಗಾಣ ಸಿಎಂ ಮತ್ತು ಈಗ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಮುಖ್ಯಸ್ಥ ಕೆಸಿಆರ್ ಅವರು ಹೊಸದಿಲ್ಲಿಯಲ್ಲಿ ಪಕ್ಷದ ಕೇಂದ್ರ ಕಚೇರಿಯನ್ನು ಉದ್ಘಾಟಿಸಿದ ಒಂದು ದಿನದ ನಂತರ ನಡ್ಡಾ ಅವರು ಟೀಕೆ ಮಾಡಿದ್ದಾರೆ. ನವದೆಹಲಿಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಜೆಡಿ (ಎಸ್) ನಾಯಕ ಎಚ್ ಡಿ ಕುಮಾರಸ್ವಾಮಿ ಅವರಂತಹ ನಾಯಕರು ಉಪಸ್ಥಿತರಿದ್ದರು.
ಕೆಸಿಆರ್ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಸಾಮರ್ಥ್ಯ ಬಿಜೆಪಿಗೆ ಮಾತ್ರ ಇದೆ. ಭ್ರಷ್ಟಾಚಾರ, ಕುಟುಂಬ ಆಡಳಿತದ ವಿರುದ್ಧ ಯಾರೇ ಇರಲಿ, ನಮ್ಮೊಂದಿಗೆ ಕೈಜೋಡಿಸುವುವವರನ್ನು ನಾವು ಸ್ವಾಗತಿಸುತ್ತೇವೆ ಎಂದು ನಡ್ಡಾ ಹೇಳಿದ್ದಾರೆ. ನಡ್ಡಾ ಅವರು ಗುರುವಾರ ಕರೀಂ ನಗರದಲ್ಲಿ ರಾಜ್ಯ ಘಟಕದ ಮುಖ್ಯಸ್ಥ ಬಂಡಿ ಸಂಜಯ್ ಅವರ ಐದನೇ ಹಂತದ ಪ್ರಜಾ ಸಂಗ್ರಾಮ ಪಾದಯಾತ್ರೆಯ ಸಮಾರೋಪಕ್ಕೆ ಉತ್ತರ ತೆಲಂಗಾಣ ನಗರದಲ್ಲಿ ಆಯೋಜಿಸಿದ್ದ ಬಿಜೆಪಿ ಯಾತ್ರೆಯಲ್ಲಿ ಭಾಗವಹಿಸಿದ್ದರು.

ಕೆಸಿಆರ್ ಅವರು ತೆಲಂಗಾಣದಂತಹ ಶ್ರೀಮಂತ, ಆದಾಯ ತರುವ ರಾಜ್ಯವನ್ನು ಬಡ ಮತ್ತು ಸಾಲದ ಹೊರೆಯಾದ ರಾಜ್ಯವಾಗಿ ಪರಿವರ್ತಿಸಿದ್ದಾರೆ. ಆದರೆ ಅವರ ಕುಟುಂಬವು ಭ್ರಷ್ಟ ವಿಧಾನಗಳಿಂದ ಅಪಾರ ಸಂಪತ್ತನ್ನು ಸಂಗ್ರಹಿಸಿದೆ ಎಂದು ಆರೋಪಿಸಿದರು. ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಶಾಸಕಿ ಕೆ. ಕವಿತಾ ಅವರ ಹೇಳಿಕೆಯನ್ನು ಸಿಬಿಐ ದಾಖಲಿಸಿದ ಕೆಲವು ದಿನಗಳ ನಂತರ ನಡ್ಡಾ ಅವರು ಕೇಂದ್ರ ಏಜೆನ್ಸಿಗಳು ತಮ್ಮ ಮಗಳು ಕವಿತಾ ಅವರನ್ನು ತನಿಖೆ ಮಾಡುತ್ತಿವೆ ಎಂದು ಕೆಸಿಆರ್ ಕೋಪಗೊಳ್ಳಬಹುದು. ಆದರೆ ಈ ಕಾರಣವನ್ನು ಜನರು ತಿಳಿದುಕೊಳ್ಳಬೇಕು ಎಂದು ಹೇಳಿದರು.
ತೆಲಂಗಾಣದ ಅಸ್ಥಿತ್ವಕ್ಕಾಗಿ ಜನರು ಟಿಆರ್ಎಸ್ಗೆ ಎರಡು ಬಾರಿ ಮತ ಹಾಕಿದ್ದಾರೆ. ಅದನ್ನು ಈಗ ತೆಗೆದು ಹಾಕಲಾಗಿದೆ. ಇದು ಒಬ್ಬರ ಸ್ವಂತ ತಾಯಿಗೆ ದ್ರೋಹ ಬಗೆದಂತಿದೆ. ಈ ಬದಲಾವಣೆಯು ರಾಜ್ಯ ಮತ್ತು ಅದರ ಸಾರ್ವಜನಿಕರಿಗೆ ಒಳ್ಳೆಯ ದಿನಗಳ ಆರಂಭವನ್ನು ಸೂಚಿಸುತ್ತದೆ ಎಂದು ಬಂಡಿ ಸಂಜಯ್ ಹೇಳಿದರು.

3016 ಮಾಸಿಕ ಭತ್ಯೆಯ ಭರವಸೆಯೊಂದಿಗೆ ಕೆಸಿಆರ್ ಅವರು ಬಡವರು, ವಸತಿ ರಹಿತರು, ನಿವೇಶನ ರಹಿತರಿಗೆ ಭೂಮಿ, 2 ಬಿಎಚ್ಕೆ ಮನೆ ಮತ್ತು ನಿರುದ್ಯೋಗಿ ಯುವಕರಿಗೆ ಸುಳ್ಳು ಭರವಸೆ ನೀಡಿ ವಂಚಿಸಿದ್ದಾರೆ ಎಂದು ನಡ್ಡಾ ಆರೋಪಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications