ಕೇದಾರನಾಥದಲ್ಲಿ ಮೊದಲ ದಿನವೇ ಭಕ್ತ ಸಾಗರ: ಭಕ್ತರನ್ನು ಸ್ವಾಗತಿಸಿದ ಸಿಎಂ ಧಾಮಿ
ಡೆಹ್ರಾಡೂನ್, ಮೇ 6: ದೇಶದ ಪುರಾಣ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಉತ್ತರಾಖಂಡದಲ್ಲಿರುವ ಕೇದಾರನಾಥ ದೇವಾಲಯದ ಬಾಗಿಲನ್ನು ಆರು ತಿಂಗಳ ನಂತರ ಶುಕ್ರವಾರ (ಮೇ 6) ಮುಂಜಾನೆ 6.25ಕ್ಕೆ ತೆರೆಯಲಾಗಿದೆ. ಬಾಗಿಲು ತೆರೆಯುವ ಮುನ್ನ ಭಕ್ತರನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸ್ವಾಗತಿಸಿದ್ದಾರೆ.
ದೇವಾಲಯದ ಬಾಗಿಲು ತೆರೆಯುವ ವೇಳೆ ಸಿಎಂ ಧಾಮಿ ಸೇರಿದಂತೆ ಸರಕಾರದ ಕ್ಯಾಬಿನೆಟ್ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಅಲ್ಲಿ ಹಾಜರಿದ್ದರು. "ಚಾರ್ ಧಾಮ್ ಯಾತ್ರೆಗೆ ಬರುವ ಭಕ್ತರಿಗೆ ಸುರಕ್ಷಿತ ಪ್ರಯಾಣವನ್ನು ನಮ್ಮ ಸರಕಾರ ಖಾತ್ರಿ ಪಡಿಸುತ್ತದೆ"ಎಂದು ಸಿಎಂ ಈ ಸಂದರ್ಭದಲ್ಲಿ ಹೇಳಿದ್ದಾರೆ.
ದ್ವಾದಶ ಜ್ಯೋತಿರ್ಲಿಂಗ ದೇವಾಲಯಗಳಲ್ಲೊಂದಾದ ಕೇದಾರನಾಥ ದೇವಾಲಯದಲ್ಲಿ ಮೊದಲ ದಿನವೇ ಭಾರೀ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದಾರೆ. ಕೋವಿಡ್ ಶಿಷ್ಟಾಚಾರದ ಕಾರಣಕ್ಕಾಗಿ ಬದರೀನಾಥ ಹೊರತು ಪಡಿಸಿ ಮೂರು ಕ್ಷೇತ್ರಗಳಲ್ಲಿ ಹನ್ನೆರಡು ಸಾವಿರ ಭಕ್ತರಿಗೆ ಮತ್ತು ಬದರೀನಾಥದಲ್ಲಿ ಹದಿನೈದು ಸಾವಿರ ಭಕ್ತರ ಭೇಟಿಗೆ ಅವಕಾಶ ನೀಡಲಾಗಿದೆ.

ಚಾರ್ ಧಾಮ್ ಯಾತ್ರೆಯ ಸಂಬಂಧ ಟ್ವಿಟ್ಟರ್ ಮೂಲಕ ವಿಡಿಯೋ ಬಿಡುಗಡೆ ಮಾಡಿರುವ ಸಿಎಂ ಧಾಮಿ, "ಭಗವಾನ್ ಶಿವನ ಅನುಗ್ರಹದಿಂದ ಕೇದಾರನಾಥ ದೇವಾಲಯದ ಕವಾಟು ತೆರೆಯುವ ಅವಕಾಶ ಸಿಕ್ಕಿದೆ. ಇದು ನನ್ನ ಸೌಭಾಗ್ಯ" ಎಂದು ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.
ವಿಡಿಯೋದಲ್ಲಿ ಕೇದಾರನಾಥ ಕ್ಷೇತ್ರದ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನೂ ಸಿಎಂ ಧಾಮಿ ನೀಡಿದ್ದಾರೆ. ನರ ಮತ್ತು ನಾರಾಯಣರ ತಪಸ್ಸಿಗೆ ಮೆಚ್ಚಿ ಶಿವನು ಜ್ಯೋತಿರ್ಲಿಂಗದ ರೂಪದಲ್ಲಿ ಕ್ಷೇತ್ರದಲ್ಲಿ ಅವತಾರವೆತ್ತಿದ್ದಾನೆ. ಬರುವ ಭಕ್ತರನ್ನು ಎಂದೂ ಶಿವನು ನಿರಾಸೆಗೊಳಿಸುವುದಿಲ್ಲ ಎಂದು ವಿಡಿಯೋದಲ್ಲಿ ಕ್ಷೇತ್ರದ ಬಗ್ಗೆ ವಿಶ್ಲೇಷಣೆಯನ್ನು ಮಾಡಲಾಗಿದೆ.
भगवान शिव की कृपा से मुझे कल श्री केदारनाथ धाम के कपाट खुलने के शुभ अवसर पर जाने का सौभाग्य प्राप्त हो रहा है।
— Pushkar Singh Dhami (@pushkardhami) May 5, 2022
"प्रणाम आपको बारम्बार, जय हो बाबा श्री केदार"@narendramodi@JPNadda pic.twitter.com/VUNCTSHZXb
ಮೇ ಮೂರರ ಅಕ್ಷಯ ತೃತೀಯಾ ದಿನದಂದು ಚಾರ್ ಧಾಮ್ ಯಾತ್ರೆಗಳ ಪೈಕಿ ಗಂಗೋತ್ರಿ ಮತ್ತು ಯಮುನಾತ್ರಿ ಭಕ್ತರ ದರ್ಶನಕ್ಕೆ ಮುಕ್ತವಾಗಿತ್ತು. ಇನ್ನು ಕೇದಾರನಾಥ್ ಮೇ ಆರು ಮತ್ತು ಬದರೀನಾಥ್ ಮೇ ಎಂಟರಂದು ಮುಕ್ತವಾಗಲಿದೆ. ಚಾರ್ ಧಾಮ್ ಯಾತ್ರೆ ಅಕ್ಟೋಬರ್ 26ಕ್ಕೆ ಮುಕ್ತಾಯಗೊಳ್ಳಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications