ಸಿಂಗಪುರ ಕೊರೊನಾ ರೂಪಾಂತರ ಸೋಂಕಿನ ಮೇಲೆ ಕಣ್ಣಿಟ್ಟಿದ್ದೇವೆ; ಕೇಂದ್ರ
ನವದೆಹಲಿ, ಮೇ 18: ಸಿಂಗಪುರದಲ್ಲಿ ಕಂಡುಬಂದಿರುವ ಕೊರೊನಾ ರೂಪಾಂತರ ಸೋಂಕಿನ ಪ್ರಕರಣಗಳನ್ನು ಪತ್ತೆ ಹಚ್ಚುತ್ತಿರುವುದಾಗಿ ಕೇಂದ್ರ ಸರ್ಕಾರದ ನೀತಿ ಆಯೋಗ ತಿಳಿಸಿದ್ದು, ಈ ರೂಪಾಂತರ ಸೋಂಕು ಮಕ್ಕಳ ಮೇಲೆ ಗಂಭೀರ ಪರಿಣಾಮ ಉಂಟು ಮಾಡುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದೆ.
ಸಿಂಗಪುರದಲ್ಲಿ ಪತ್ತೆಯಾಗಿರುವ ರೂಪಾಂತರ ಸೋಂಕು ಹಾಗೂ ಮಕ್ಕಳ ಮೇಲೆ ಅದರ ಪರಿಣಾಮದ ಕುರಿತು ಪ್ರಶ್ನೆಯೊಂದಕ್ಕೆ ಉತ್ತರಿಸಿದ ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್, "ಸಿಂಗಪುರದಲ್ಲಿ ಪತ್ತೆಯಾಗಿರುವ ಆ ನಿರ್ದಿಷ್ಟ ರೂಪಾಂತರ ಸೋಂಕಿನ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ. ಆದರೆ ಮಕ್ಕಳ ಮೇಲೆ ಈ ಸೋಂಕು ಗಂಭೀರ ಪರಿಣಾಮ ಬೀರುವುದಿಲ್ಲ. ಹೀಗಾಗ್ಯೂ ಈ ಸೋಂಕಿನ ಮಾದರಿ ಮೇಲೆ ನಿಗಾ ವಹಿಸಲಾಗುವುದು" ಎಂದು ಹೇಳಿದರು.
ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಸಂಬಂಧ ಸರ್ಕಾರದ ಯೋಜನೆಗಳ ಕುರಿತು ಮಾತನಾಡಿದ ಅವರು, ಔಷಧ ನಿಯಂತ್ರಣ ಪ್ರಾಧಿಕಾರವು 2ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ಪ್ರಯೋಗಕ್ಕೆ ಅನುಮತಿ ನೀಡಿದೆ ಎಂದು ಘೋಷಿಸಿದರು. ಮುಂದಿನ 10-12 ದಿನಗಳಲ್ಲಿ ಪ್ರಯೋಗ ಆರಂಭವಾಗಲಿದೆ ಎಂದು ತಿಳಿಸಿದರು.

ದೆಹಲಿಯ ಏಮ್ಸ್, ಪಾಟ್ನಾದ ಏಮ್ಸ್ ಹಾಗೂ ನಾಗ್ಪುರದ ಮೆಡಿಟ್ರಿನಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ 525 ಮಾದರಿ ಪ್ರಯೋಗಗಳನ್ನು ನಡೆಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಮಂಗಳವಾರ ವಿಷಯ ತಜ್ಞರ ಸಮಿತಿಯು ಕೇಂದ್ರ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಕೊವ್ಯಾಕ್ಸಿನ್ ಲಸಿಕೆಯ ಪ್ರಯೋಗಕ್ಕೆ ಅನುಮೋದನೆ ನೀಡುವಂತೆ ಅರ್ಜಿ ಸಲ್ಲಿಸಿತ್ತು. ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ 2-18 ವರ್ಷದವರಿಗೆ ಸುರಕ್ಷಿತವೇ ಎಂಬ ಬಗ್ಗೆ ವಿಸ್ತೃತ ಚರ್ಚೆಯ ಬಳಿಕ ವೈದ್ಯಕೀಯ ಪ್ರಯೋಗಕ್ಕೆ ಷರತ್ತುಬದ್ಧ ಅನುಮೋದನೆ ನೀಡಲಾಗಿದೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಂಗಪುರದಲ್ಲಿ ಪತ್ತೆಯಾಗಿರುವ ಕೊರೊನಾ ರೂಪಾಂತರ ಸೋಂಕು ಭಾರತದಲ್ಲಿ ಮೂರನೇ ಅಲೆಗೆ ಕಾರಣವಾಗಿರಬಹುದು ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದರು.
-
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications