ಅಣ್ಣಾ ಹಜಾರೆ ಪ್ರಾಣತ್ಯಾಗ ಬಯಸಿದ್ದರೇ ಕೇಜ್ರಿವಾಲ್!
ಔರಂಗಾಬಾದ್, ನ 26: ದೆಹಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅರವಿಂದ್ ಕೇಜ್ರಿವಾಲ್ ಮತ್ತು ಅಣ್ಣಾ ಹಜಾರೆ ಬಣದ ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿವೆ. ಈ ಹಿಂದೆ ಅಣ್ಣಾ ಹಜಾರೆ ಅವರ ಪ್ರಾಣ ತ್ಯಾಗವನ್ನು ಕೇಜ್ರಿವಾಲ್ ಬಯಸಿದ್ದರು ಎಂದು ಅಣ್ಣಾ ಬಣದ ಸದಸ್ಯರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.
2011ರಲ್ಲಿ ಭ್ರಷ್ಟಾಚಾರ ತಡೆಗಾಗಿ ಲೋಕಪಾಲ್ ಮಸೂದೆ ಜಾರಿಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಆಮರಣಾಂತ ಉಪವಾಸ ಹೋರಾಟ ಮಾಡುತ್ತಿದ್ದಾಗ ಅವರ ಪ್ರಾಣ ತ್ಯಾಗವನ್ನು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬಯಸಿದ್ದರೆಂದು ಅಣ್ಣಾ ಬಣದ ಸ್ವಾಮಿ ಅಗ್ನಿವೇಷ್ ಗುರುತರ ಆರೋಪ ಮಾಡಿದ್ದಾರೆ.
ದೆಹಲಿಯ ಜಂತರ್ ಮಂತರ್ ನಲ್ಲಿ ಅಣ್ಣಾ ಹಜಾರೆ ಮಸೂದೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ದೇಶಾದ್ಯಂತ ಹಜಾರೆ ಪ್ರತಿಭಟನೆಗೆ ಭಾರೀ ಜನಬೆಂಬಲ ಕೂಡಾ ವ್ಯಕ್ತವಾಗಿತ್ತು.

ಜಂತರ್ ಮಂತರ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಅಣ್ಣಾ ಹಜಾರೆಗೆ ಅರವಿಂದ್ ಕೇಜ್ರಿವಾಲ್ ಕೂಡಾ ಸಾಥ್ ನೀಡಿದ್ದರು.
ಆ ಸಮಯದಲ್ಲಿ ಅಣ್ಣಾ ಹಜಾರೆ ಪ್ರಾಣ ತ್ಯಾಗ ನಡೆಸಿದರೆ ಈ ಹೋರಾಟದ ಮುಂದಿನ ಜನ ನಾಯಕನಾಗಿ ತಾನು ಹೊರಹೊಮ್ಮ ಬಹುದು ಎನ್ನುವ ದುರಾಲೋಚನೆಯ ಕನಸನ್ನು ಕೇಜ್ರಿವಾಲ್ ಹೊಂದಿದ್ದರು ಎಂದು ಸ್ವಾಮಿ ಅಗ್ನಿವೇಷ್ ಆರೋಪಿಸಿದ್ದಾರೆ.
ಅಣ್ಣಾ ಹಜಾರೆಗೆ ಅಗ್ನಿವೇಷ್ ದುರಾಲೋಚನೆಯ ಅರಿವಿತ್ತು. ಆದರೆ ಅವರು ಅಂದು ಮೌನ ವಹಿಸಿದ್ದರು. ಅಣ್ಣಾ ಜೊತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕೇಜ್ರಿವಾಲ್ ಕೇಂದ್ರದಲ್ಲಿ ಸಚಿವರಾಗಿದ್ದ ವಿಲಾಸ್ ರಾವ್ ದೇಶಮುಖ್ ಮೂಲಕ ಅಣ್ಣಾ ಪ್ರತಿಭಟನೆ ಹನ್ನೆರಡು ದಿನದ ನಂತರ ಮುಕ್ತಾಯ ಗೊಳ್ಳುವಂತೆ ನೋಡಿಕೊಂಡರು ಎಂದು ಅಗ್ನಿವೇಷ್ ಆರೋಪಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications