ಕೇರಳವನ್ನು 'ಕೇರಳಂ' ಮಾಡುವ ಪಟ್ಟು ಬಿಡುತ್ತಿಲ್ಲ ಪಿಣರಾಯಿ ವಿಜಯನ್; ಸಿಗುತ್ತಾ ಗೆಲುವು?
ತಿರುವನಂತಪುರಂ, ಜೂನ್. 25: ಕೇರಳ ವಿಧಾನಸಭೆಯು ಜೂನ್ 24 ರಂದು ಸರ್ವಾನುಮತದ ನಿರ್ಣಯದಲ್ಲಿ ರಾಜ್ಯದ ಹೆಸರನ್ನು 'ಕೇರಳ'ದಿಂದ 'ಕೇರಳಂ' ಎಂದು ಬದಲಾಯಿಸುವ ಸಾಂವಿಧಾನಿಕ ತಿದ್ದುಪಡಿಯನ್ನು ಪ್ರಸ್ತಾಪಿಸುವ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಿದೆ.
ರಾಜ್ಯದ ಹೆಸರು ಬದಲಿಸಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಡಿಸಿದ್ದಾರೆ. ಕೇರಳ ವಿಧಾನಸಭೆಯು ಈ ಎರಡನೇ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಿದೆ. ರಾಜ್ಯದ ಹೆಸರನ್ನು ಅಧಿಕೃತವಾಗಿ 'ಕೇರಳಂ' ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿದೆ. ಸರಿಸುಮಾರು ಒಂದು ವರ್ಷದ ನಂತರ ಕೇಂದ್ರವು ತಿದ್ದುಪಡಿಗಾಗಿ ಅದನ್ನು ಹಿಂದಿರುಗಿಸುವ ಮೊದಲು ಇದೇ ರೀತಿಯ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು.

ಕಳೆದ ವರ್ಷವೂ ನಡೆದಿತ್ತು ಮರುನಾಮಕರಣದ ಪ್ರಸ್ತಾಪ
ವಿಧಾನಸಭೆಯ ನಿರ್ಣಯವನ್ನು ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಕಳೆದ ವರ್ಷ ಆಗಸ್ಟ್ನಲ್ಲಿ, ಕೇಂದ್ರ ಗೃಹ ಸಚಿವಾಲಯವು ಕೊನೆಯ ನಿರ್ಣಯವನ್ನು ಪರಿಶೀಲಿಸಿತು. ಕೇರಳ ಸರ್ಕಾರವು ರಾಜ್ಯದ ಹೆಸರನ್ನು ಬದಲಾಯಿಸಲು "ತಕ್ಷಣದ ಕ್ರಮಗಳನ್ನು" ಕೋರಿದ ನಂತರ ಕೆಲವು ತಾಂತ್ರಿಕ ಬದಲಾವಣೆಗಳನ್ನು ಸೂಚಿಸಿತ್ತು.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಂವಿಧಾನದ ಎಂಟನೇ ಶೆಡ್ಯೂಲ್ನಲ್ಲಿ ಪಟ್ಟಿ ಮಾಡಲಾದ ಎಲ್ಲಾ ಭಾಷೆಗಳಲ್ಲಿ ರಾಜ್ಯದ ಹೆಸರನ್ನು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಕೋರುವ ನಿರ್ಣಯವನ್ನು ಪ್ರಸ್ತಾಪಿಸಿದರು. ಭಾರತೀಯ ಸಂವಿಧಾನದ 3 ನೇ ವಿಧಿಯನ್ನು ಬೊಟ್ಟು ಮಾಡಿದ್ದಾರೆ.

ನಿರ್ಣಯವನ್ನು ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯವನ್ನು ಮಲಯಾಳಂನಲ್ಲಿ 'ಕೇರಳಂ' ಎಂದು ಕರೆಯಲಾಗಿದೆ ಮತ್ತು ಮಲಯಾಳಂ ಭಾಷಿಕರ ಅಖಂಡ ಕೇರಳದ ಬೇಡಿಕೆ ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದಿಂದಲೂ ಪ್ರಬಲವಾಗಿದೆ. ಆದರೆ ಸಂವಿಧಾನದ ಮೊದಲ ಶೆಡ್ಯೂಲ್ನಲ್ಲಿ ನಮ್ಮ ರಾಜ್ಯದ ಹೆಸರನ್ನು ಕೇರಳ ಎಂದು ಬರೆಯಲಾಗಿದೆ ಎಂದು ಹೇಳಿದ್ದಾರೆ.
"ಸಂವಿಧಾನದ 3 ನೇ ಪರಿಚ್ಛೇದದ ಅಡಿಯಲ್ಲಿ ಅದನ್ನು 'ಕೇರಳಂ' ಎಂದು ತಿದ್ದುಪಡಿ ಮಾಡಲು ಮತ್ತು ಸಂವಿಧಾನದ ಎಂಟನೇ ಶೆಡ್ಯೂಲ್ನಲ್ಲಿ ಉಲ್ಲೇಖಿಸಲಾದ ಎಲ್ಲಾ ಭಾಷೆಗಳಲ್ಲಿ ಅದನ್ನು 'ಕೇರಳಂ' ಎಂದು ಮರುನಾಮಕರಣ ಮಾಡಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈ ಸಭೆಯು ಕೇಂದ್ರವನ್ನು ಕೋರುತ್ತದೆ" ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉಲ್ಲೇಖಿಸಿದ್ದಾರೆ.
ಕೇರಳವನ್ನು ಕೇರಳಂ ಎನ್ನಲು ಎಲ್ಲಾ ಪಕ್ಷಗಳ ಒಪ್ಪಿಗೆ
ಆಡಳಿತಾರೂಢ ಎಲ್ಡಿಎಫ್ ಮತ್ತು ಪ್ರತಿಪಕ್ಷ ಯುಡಿಎಫ್ ಎರಡೂ ಸದಸ್ಯರು ನಿರ್ಣಯವನ್ನು ಬೆಂಬಲಿಸಿದ್ದಾರೆ. ಯುಡಿಎಫ್ ಶಾಸಕ ಎನ್ ಶಂಸುದ್ದೀನ್ ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಆದರೆ, ಸರ್ಕಾರ ಅವುಗಳನ್ನು ತಿರಸ್ಕರಿಸಿತು. ನಂತರ ವಿಧಾನಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತು ಎಂದು ಸ್ಪೀಕರ್ ಎಎನ್ ಶಂಸೀರ್ ಘೋಷಿಸಿದ್ದಾರೆ.
ಸ್ವಾತಂತ್ರ್ಯದ ನಂತರ ಭಾರತದಲ್ಲಿ ನೂರಕ್ಕೂ ಹೆಚ್ಚು ನಗರಗಳು ಮತ್ತು ಹಲವಾರು ರಾಜ್ಯಗಳು ತಮ್ಮ ಹೆಸರನ್ನು ಬದಲಾಯಿಸಿಕೊಂಡಿವೆ. 2000 ರಲ್ಲಿ ಉತ್ತರ ಪ್ರದೇಶದಿಂದ ರಾಜ್ಯವನ್ನು ಬೇರ್ಪಡಿಸಲು ಕಾರಣವಾದ ಉತ್ತರಾಖಂಡ ಆಂದೋಲನ ಚಳವಳಿಯನ್ನು ಗೌರವಿಸಿ 2007 ರಲ್ಲಿ ಉತ್ತರಾಂಚಲ್ ಉತ್ತರಾಖಂಡವಾಯಿತು.
ಒರಿಸ್ಸಾ (ಹೆಸರಿನ ಬದಲಾವಣೆ) ಕಾಯಿದೆಯನ್ನು ಅನುಸರಿಸಿ 2011 ರಲ್ಲಿ ಒಡಿಶಾ ಎಂದು ಮರುನಾಮಕರಣ ಮಾಡಲಾಯಿತು. 2006 ರಲ್ಲಿ, ಪಾಂಡಿಚೇರಿ ಕೇಂದ್ರಾಡಳಿತ ಪ್ರದೇಶವು ಪುದುಚೇರಿ ಆಯಿತು. ಕೆಲವು ರಾಜಧಾನಿ ನಗರಗಳು ಕೂಡ ಮರುನಾಮಕರಣಗೊಂಡಿವೆ. ಮುಂಬೈ ಎಂದು ಮರುನಾಮಕರಣಗೊಂಡ ಬಾಂಬೆ ಮತ್ತು ಚೆನ್ನೈ ಆಗಿ ಮಾರ್ಪಟ್ಟಿರುವ ಮದ್ರಾಸ್ ಕೂಡ ಈ ಸಾಲಿನಲ್ಲಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications