ನ.1ರಂದು ಬಯಲು ಶೌಚ ಮುಕ್ತ ರಾಜ್ಯಕ್ಕೆ ಮೋದಿ
ತಿರುವನಂತಪುರಂ, ಆಗಸ್ಟ್ 26: ನವೆಂಬರ್ 1 ರಿಂದ ಕೇರಳ ಸಂಪೂರ್ಣ ಬಯಲು ಮುಕ್ತ ರಾಜ್ಯವಾಗಲಿದೆ ಎಂದು ಸಿಪಿಐಎಂ ನೇತೃತ್ವದ ಎಲ್ ಡಿಎಫ್ ಸರ್ಕಾರ ಘೋಷಿಸಿದೆ. ಈ ಶುಭ ಸಂದರ್ಭವನ್ನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಂಚಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಪಿನರಾಯಿ ವಿಜಯನ್ ಹೇಳಿದ್ದಾರೆ.
ತಿರುವನಂತಪುರಂನಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಸ್ವಚ್ಛ ಭಾರತ ಯೋಜನೆ ಸಾಕಾರಗೊಂಡಿರುವುದನ್ನು ಪ್ರಧಾನಿ ಮೋದಿ ಅವರು ಕಣ್ಣಾರೆ ಕಾಣಲಿ ಎಂಬುದು ಎಂಬ ಆಶಯ ಎಂದು ವಿಜಯನ್ ಹೇಳಿದ್ದಾರೆ.

ಕೇರಳದಲ್ಲಿರುವ 941ಗ್ರಾಮ ಪಂಚಾಯಿತಿಗಳಲ್ಲಿ 1.90 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ರಾಜ್ಯದ ನೋಡಲ್ ಸಂಸ್ಥೆಯಾದ ಶುಚಿತ್ವ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ.
ಕೇರಳವನ್ನು ಸಂಪೂರ್ಣ ಪರಿಸರ ಮಾಲಿನ್ಯ ಮುಕ್ತ, ಕಸಮುಕ್ತ ರಾಜ್ಯ ಮಾಡಲು ಮುಂದಾಗಿದ್ದು, ಶೇ 35ರಷ್ಟು ಕಾರ್ಯ ಪೂರ್ಣಗೊಂಡಿದೆ ಎಂದು ವಿವರಿಸಿದರು.












Click it and Unblock the Notifications