ಕೇರಳ ಈಗ ಸಂಪೂರ್ಣ ಬಯಲು ಶೌಚ ಮುಕ್ತ ರಾಜ್ಯ
ನವೆಂಬರ್ 1ರ ರಾಜ್ಯೋತ್ಸವದ ಸಂಭ್ರಮದಲ್ಲಿ ಕೇರಳ ಸಂಪೂರ್ಣವಾಗಿ ಬಯಲು ಶೌಚ ಮುಕ್ತ ರಾಜ್ಯವಾಗಿದೆ ಎಂದು ಸಿಪಿಐಎಂ ನೇತೃತ್ವದ ಎಲ್ ಡಿಎಫ್ ಸರ್ಕಾರ ಘೋಷಿಸಿದೆ
ತಿರುವನಂತಪುರಂ, ನವೆಂಬರ್ 02: ನವೆಂಬರ್ 1ರ ರಾಜ್ಯೋತ್ಸವದ ಸಂಭ್ರಮದಲ್ಲಿ ಕೇರಳ ಸಂಪೂರ್ಣವಾಗಿ ಬಯಲು ಶೌಚ ಮುಕ್ತ ರಾಜ್ಯವಾಗಿದೆ ಎಂದು ಸಿಪಿಐಎಂ ನೇತೃತ್ವದ ಎಲ್ ಡಿಎಫ್ ಸರ್ಕಾರ ಘೋಷಿಸಿದೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರು ಈ ಕುರಿತಂತೆ ಟ್ವಿಟ್ಟರ್ ಮೂಲಕ ಜನತೆಗೆ ಶುಭಕೋರಿದ್ದಾರೆ.
ಸ್ವಚ್ಛ ಭಾರತ ಯೋಜನೆ ಸಾಕಾರಗೊಂಡಿರುವುದನ್ನು ಪ್ರಧಾನಿ ಮೋದಿ ಅವರು ಕಣ್ಣಾರೆ ಕಾಣಲಿ ಎಂಬ ಆಶಯ ಹೊಂದಿದ್ದ ವಿಜಯನ್ ಅವರಿಗೆ ನಿರಾಶೆಯಾಗಿದೆ. ಪ್ರಧಾನಿ ಅವರು ಹರ್ಯಾಣ ರಾಜ್ಯ ಸಂಸ್ಥಾಪನಾ ವಜ್ರ ಮಹೋತ್ಸವ ದಿನಾಚರಣೆಯಲ್ಲಿ ತೊಡಗಿಕೊಂಡಿದ್ದರು.

ಕೇರಳದಲ್ಲಿರುವ 941 ಗ್ರಾಮ ಪಂಚಾಯಿತಿಗಳಲ್ಲಿ 1.90 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ರಾಜ್ಯದ ನೋಡಲ್ ಸಂಸ್ಥೆಯಾದ ಶುಚಿತ್ವ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ.
ಕೇರಳವನ್ನು ಸಂಪೂರ್ಣ ಪರಿಸರ ಮಾಲಿನ್ಯ ಮುಕ್ತ, ಕಸಮುಕ್ತ ರಾಜ್ಯ ಮಾಡಲು ಮುಂದಾಗಿದ್ದು, ಶೇ 35ರಷ್ಟು ಕಾರ್ಯ ಪೂರ್ಣಗೊಂಡಿದೆ ಎಂದು ವಿವರಿಸಿದರು.
Kerala becomes first high density populated state in the country to achieve Open Defecation Free status today on its formation day. pic.twitter.com/wZPzSCXJ7U
— Pinarayi Vijayan (@vijayanpinarayi) November 1, 2016
ಕೇರಳ ನಂತರ ಈ ಸಾಲಿಗೆ ಗುಜರಾತ್, ಹರ್ಯಾಣ ಹಾಗೂ ಉತ್ತರಾಖಂಡ್ ರಾಜ್ಯಗಳು ಶೀಘ್ರದಲ್ಲೇ ಸೇರಲು ಮುಂದಾಗಿವೆ. ಸ್ವಚ್ಛಭಾರತ ಹಾಗೂ ಬಯಲು ಶೌಚ ಮುಕ್ತ ರಾಜ್ಯಗಳಾಗಿ ಪರಿವರ್ತನೆಗೊಂಡಿವೆ ಎಂದು ಮಾಹಿತಿ ಸಿಕ್ಕಿದೆ. (ಪಿಟಿಐ)
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications