ಕೇರಳ ಈಗ ಸಂಪೂರ್ಣ ಬಯಲು ಶೌಚ ಮುಕ್ತ ರಾಜ್ಯ
ನವೆಂಬರ್ 1ರ ರಾಜ್ಯೋತ್ಸವದ ಸಂಭ್ರಮದಲ್ಲಿ ಕೇರಳ ಸಂಪೂರ್ಣವಾಗಿ ಬಯಲು ಶೌಚ ಮುಕ್ತ ರಾಜ್ಯವಾಗಿದೆ ಎಂದು ಸಿಪಿಐಎಂ ನೇತೃತ್ವದ ಎಲ್ ಡಿಎಫ್ ಸರ್ಕಾರ ಘೋಷಿಸಿದೆ
ತಿರುವನಂತಪುರಂ, ನವೆಂಬರ್ 02: ನವೆಂಬರ್ 1ರ ರಾಜ್ಯೋತ್ಸವದ ಸಂಭ್ರಮದಲ್ಲಿ ಕೇರಳ ಸಂಪೂರ್ಣವಾಗಿ ಬಯಲು ಶೌಚ ಮುಕ್ತ ರಾಜ್ಯವಾಗಿದೆ ಎಂದು ಸಿಪಿಐಎಂ ನೇತೃತ್ವದ ಎಲ್ ಡಿಎಫ್ ಸರ್ಕಾರ ಘೋಷಿಸಿದೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರು ಈ ಕುರಿತಂತೆ ಟ್ವಿಟ್ಟರ್ ಮೂಲಕ ಜನತೆಗೆ ಶುಭಕೋರಿದ್ದಾರೆ.
ಸ್ವಚ್ಛ ಭಾರತ ಯೋಜನೆ ಸಾಕಾರಗೊಂಡಿರುವುದನ್ನು ಪ್ರಧಾನಿ ಮೋದಿ ಅವರು ಕಣ್ಣಾರೆ ಕಾಣಲಿ ಎಂಬ ಆಶಯ ಹೊಂದಿದ್ದ ವಿಜಯನ್ ಅವರಿಗೆ ನಿರಾಶೆಯಾಗಿದೆ. ಪ್ರಧಾನಿ ಅವರು ಹರ್ಯಾಣ ರಾಜ್ಯ ಸಂಸ್ಥಾಪನಾ ವಜ್ರ ಮಹೋತ್ಸವ ದಿನಾಚರಣೆಯಲ್ಲಿ ತೊಡಗಿಕೊಂಡಿದ್ದರು.

ಕೇರಳದಲ್ಲಿರುವ 941 ಗ್ರಾಮ ಪಂಚಾಯಿತಿಗಳಲ್ಲಿ 1.90 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ರಾಜ್ಯದ ನೋಡಲ್ ಸಂಸ್ಥೆಯಾದ ಶುಚಿತ್ವ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ.
ಕೇರಳವನ್ನು ಸಂಪೂರ್ಣ ಪರಿಸರ ಮಾಲಿನ್ಯ ಮುಕ್ತ, ಕಸಮುಕ್ತ ರಾಜ್ಯ ಮಾಡಲು ಮುಂದಾಗಿದ್ದು, ಶೇ 35ರಷ್ಟು ಕಾರ್ಯ ಪೂರ್ಣಗೊಂಡಿದೆ ಎಂದು ವಿವರಿಸಿದರು.
Kerala becomes first high density populated state in the country to achieve Open Defecation Free status today on its formation day. pic.twitter.com/wZPzSCXJ7U
— Pinarayi Vijayan (@vijayanpinarayi) November 1, 2016
ಕೇರಳ ನಂತರ ಈ ಸಾಲಿಗೆ ಗುಜರಾತ್, ಹರ್ಯಾಣ ಹಾಗೂ ಉತ್ತರಾಖಂಡ್ ರಾಜ್ಯಗಳು ಶೀಘ್ರದಲ್ಲೇ ಸೇರಲು ಮುಂದಾಗಿವೆ. ಸ್ವಚ್ಛಭಾರತ ಹಾಗೂ ಬಯಲು ಶೌಚ ಮುಕ್ತ ರಾಜ್ಯಗಳಾಗಿ ಪರಿವರ್ತನೆಗೊಂಡಿವೆ ಎಂದು ಮಾಹಿತಿ ಸಿಕ್ಕಿದೆ. (ಪಿಟಿಐ)
-
ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅವಮಾನ ಆರೋಪ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಕೇಂದ್ರದ ಕಿಡಿ, ಮೋದಿ ಆಕ್ರೋಶ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications