Kerala blast: ಕೇರಳ ಸ್ಫೋಟ ಪ್ರಕರಣ: 12 ವರ್ಷದ ಬಾಲಕಿ ಸಾವು!
ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ನಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ ಮೂರಕ್ಕೆ ಏರಿದೆ. ಭಾನುವಾರ ನಡೆದ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ನಡೆದ ಸ್ಫೋಟದಲ್ಲಿ ಗಾಯಗೊಂಡ 50 ಜನರ ಪೈಕಿ 12 ವರ್ಷದ ಬಾಲಕಿ ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಭಾನುವಾರ ನಡೆದ ಸ್ಪೋಟದಲ್ಲಿ ಬಾಲಕಿ ಕೇರಳದ ಎರ್ನಾಕುಲಂ ಜಿಲ್ಲೆಯ ಲಿಬಿನಾ ತೀವ್ರವಾಗಿ ಗಾಯಗೊಂಡಿದ್ದಳು. ಲಿಬಿನಾ ಅವರ ದೇಹದ ಶೇಕಡ 95 ರಷ್ಟು ಭಾಗ ತೀವ್ರವಾಗಿ ಸುಟ್ಟು ಹೋಗಿತ್ತು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾಳೆ.

ಇದಕ್ಕೂ ಮೊದಲು ಸ್ಫೋಟಗಳಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ಈ ಸ್ಪೋಟ ಸಂಭವಿಸಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ.
ಮೂರು ದಿನಗಳ ಪ್ರಾರ್ಥನಾ ಸಭೆಯ ಮುಕ್ತಾಯದ ದಿನದಂದು ಅಲ್ಪಸಂಖ್ಯಾತ ಕ್ರಿಶ್ಚಿಯನ್ ಗುಂಪು ನೂರಾರು ಅನುಯಾಯಿಗಳು ಯೆಹೋವನ ಪ್ರಾರ್ಥನೆಗಾಗಿ ಒಟ್ಟುಗೂಡಿದಾಗ ಸ್ಫೋಟಗಳು ಸಂಭವಿಸಿದವು.
ದೇಶಾದ್ಯಂತ ಈ ಸ್ಪೋಟ ಆಘಾತ ಸೃಷ್ಟಿಸಿದೆ. ದೆಹಲಿ ಮತ್ತು ಮುಂಬೈಯನ್ನು ಹೈ ಅಲರ್ಟ್ನಲ್ಲಿ ಇರಿಸಲಾಗಿದೆ. ಈ ಸರಣಿ ಸ್ಫೋಟದ ಗಂಟೆಗಳ ನಂತರ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಯೆಹೋವನ ಅನುಯಾಯಿ ಎಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬರು ಪೊಲೀಸರ ಮುಂದೆ ಶರಣಾಗಿದ್ದಾನೆ.
ಕೇರಳದ ಸ್ಫೋಟಗಳಲ್ಲಿ ಐಇಡಿ ಬಳಕೆ
ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನವನ್ನು ಬಳಸಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಸ್ಫೋಟಕಗಳನ್ನು ಟಿಫಿನ್ ಬಾಕ್ಸ್ನಲ್ಲಿ ಇರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳ ಪ್ರಕಾರ ಸ್ಫೋಟಗಳು ನಡೆದಾಗ ಸಮಾವೇಶ ಕೇಂದ್ರದಲ್ಲಿ ಸುಮಾರು 2,000 ಜನರು ಇದ್ದರು. ಅಕ್ಟೋಬರ್ 27ರಂದು ಆರಂಭವಾದ ಮೂರು ದಿನವಾಗಿತ್ತು ಭಾನುವಾರ ಸಭೆಗೆ ಕೊನೆಯ ದಿನವಾಗಿತ್ತು.
-
Keralam Assembly Elections 2026: ಎಲ್ಡಿಎಫ್ vs ಯುಡಿಎಫ್ ಪೈಪೋಟಿ, ಶಬರಿಮಲೆ ಚಿನ್ನಾಭರಣ ಕಳ್ಳತನ ವಿಷಯವೇ ಪ್ರಮುಖ -
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications