Kerala blast: ಕೇರಳ ಸ್ಫೋಟ ಪ್ರಕರಣ: 12 ವರ್ಷದ ಬಾಲಕಿ ಸಾವು!
ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ನಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ ಮೂರಕ್ಕೆ ಏರಿದೆ. ಭಾನುವಾರ ನಡೆದ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ನಡೆದ ಸ್ಫೋಟದಲ್ಲಿ ಗಾಯಗೊಂಡ 50 ಜನರ ಪೈಕಿ 12 ವರ್ಷದ ಬಾಲಕಿ ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಭಾನುವಾರ ನಡೆದ ಸ್ಪೋಟದಲ್ಲಿ ಬಾಲಕಿ ಕೇರಳದ ಎರ್ನಾಕುಲಂ ಜಿಲ್ಲೆಯ ಲಿಬಿನಾ ತೀವ್ರವಾಗಿ ಗಾಯಗೊಂಡಿದ್ದಳು. ಲಿಬಿನಾ ಅವರ ದೇಹದ ಶೇಕಡ 95 ರಷ್ಟು ಭಾಗ ತೀವ್ರವಾಗಿ ಸುಟ್ಟು ಹೋಗಿತ್ತು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾಳೆ.

ಇದಕ್ಕೂ ಮೊದಲು ಸ್ಫೋಟಗಳಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ಈ ಸ್ಪೋಟ ಸಂಭವಿಸಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ.
ಮೂರು ದಿನಗಳ ಪ್ರಾರ್ಥನಾ ಸಭೆಯ ಮುಕ್ತಾಯದ ದಿನದಂದು ಅಲ್ಪಸಂಖ್ಯಾತ ಕ್ರಿಶ್ಚಿಯನ್ ಗುಂಪು ನೂರಾರು ಅನುಯಾಯಿಗಳು ಯೆಹೋವನ ಪ್ರಾರ್ಥನೆಗಾಗಿ ಒಟ್ಟುಗೂಡಿದಾಗ ಸ್ಫೋಟಗಳು ಸಂಭವಿಸಿದವು.
ದೇಶಾದ್ಯಂತ ಈ ಸ್ಪೋಟ ಆಘಾತ ಸೃಷ್ಟಿಸಿದೆ. ದೆಹಲಿ ಮತ್ತು ಮುಂಬೈಯನ್ನು ಹೈ ಅಲರ್ಟ್ನಲ್ಲಿ ಇರಿಸಲಾಗಿದೆ. ಈ ಸರಣಿ ಸ್ಫೋಟದ ಗಂಟೆಗಳ ನಂತರ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಯೆಹೋವನ ಅನುಯಾಯಿ ಎಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬರು ಪೊಲೀಸರ ಮುಂದೆ ಶರಣಾಗಿದ್ದಾನೆ.
ಕೇರಳದ ಸ್ಫೋಟಗಳಲ್ಲಿ ಐಇಡಿ ಬಳಕೆ
ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನವನ್ನು ಬಳಸಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಸ್ಫೋಟಕಗಳನ್ನು ಟಿಫಿನ್ ಬಾಕ್ಸ್ನಲ್ಲಿ ಇರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳ ಪ್ರಕಾರ ಸ್ಫೋಟಗಳು ನಡೆದಾಗ ಸಮಾವೇಶ ಕೇಂದ್ರದಲ್ಲಿ ಸುಮಾರು 2,000 ಜನರು ಇದ್ದರು. ಅಕ್ಟೋಬರ್ 27ರಂದು ಆರಂಭವಾದ ಮೂರು ದಿನವಾಗಿತ್ತು ಭಾನುವಾರ ಸಭೆಗೆ ಕೊನೆಯ ದಿನವಾಗಿತ್ತು.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Jr NTR: ನಟ ಜ್ಯೂನಿಯರ್ ಎನ್ಟಿಆರ್ ಬೆಂಗಳೂರು ಭೇಟಿ ವೇಳೆ ಅಭಿಮಾನಿಗಳ ನೂಕುನುಗ್ಗಲು; ಆಸ್ಪತ್ರೆಯ ಎಸ್ಕಲೇಟರ್ ಧ್ವಂಸ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ












Click it and Unblock the Notifications