ಕೇರಳದಲ್ಲಿ ನಾಯಿ ಕಚ್ಚಿ ವೃದ್ಧೆ ಸಾವಿಗೆ ಮನೇಕಾ ಕಾರಣ?
ಬೆಂಗಳೂರು, ಆಗಸ್ಟ್ 24: ನಾಯಿಗಳ ಬಗ್ಗೆ ಸಹಾನುಭೂತಿ ತೋರುವ ಕಾರಣಕ್ಕೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮನೇಕಾ ಗಾಂಧಿ ವಿರೋಧ ಎದುರಿಸುವಂತಾಗಿದೆ. ಕೇರಳದಲ್ಲಿ 65 ವರ್ಷದ ಮಹಿಳೆಯೊಬ್ಬರು ನಾಯಿ ದಾಳಿಯಿಂದ ಮೃತಪಟ್ಟ ಮೇಲೆ ಅಲ್ಲಿನ ವ್ಯಾಪಾರಿಯೊಬ್ಬರು ಮನೇಕಾ ಗಾಂಧಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಕೂಡ ಆಗ್ರಹಿಸಿದ್ದಾರೆ.
ಆದರೆ, ಮನೇಕಾ ಗಾಂಧಿಯವರು ಮಾತ್ರ ನಾಯಿ ದಾಳಿಯಿಂದ ಸಾವಿಗೀಡಾಗುವುದಕ್ಕೆ ಸ್ವತಃ ಆಕೆಯೇ ಕಾರಣ ಎಂದು ಹೇಳಿದ್ದಾರೆ. ಸುದ್ದಿ ಮಾಧ್ಯಮವೊಂದರ ಜತೆ ಮಾತನಾಡುತ್ತಾ ಅವರು, ಆ ಮಹಿಳೆಗೆ ಏನಾಯಿತು ಅದು ದುಃಖಕರ ಸಂಗತಿ. ಆದರೆ ಆ ಕಾರಣಕ್ಕೆ ಆ ಬಡಾವಣೆಯ ಎಲ್ಲ ಬೀದಿ ನಾಯಿಗಳನ್ನು ಕೊಲ್ಲುವುದು ಮೂರ್ಖತನ. ನನಗೆ ಅನಿಸುತ್ತೆ, ಆ ಮಹಿಳೆ ಮಾಂಸ ತೆಗೆದುಕೊಂಡು ಹೋಗುತ್ತಿರಬಹುದು. ನಾಯಿಗಳು ಸುಮ್ಮನೆ ಬೆನ್ನಟ್ಟುವುದಿಲ್ಲ' ಎಂದಿದ್ದಾರೆ.[ಕೇರಳದ ಯುವಕ ಮಂಗಳೂರಿನಲ್ಲಿ ಒಂದು ತಿಂಗಳಿನಿಂದ ನಾಪತ್ತೆ]

ಬೀದಿ ನಾಯಿಗಳ ತೊಂದರೆ ವಿರುದ್ಧ ಕೇರಳ ಸರ್ಕಾರದ ವಿರುದ್ಧ ಹಲವೆಡೆ ಪ್ರತಿಭಟನೆ ನೇತೃತ್ವ ವಹಿಸಿರುವ ವ್ಯಾಪಾರಿ ಕೊಚೌಸೆಫ್ ಚಿತ್ತಲಪಲ್ಲಿ ಮಾಧ್ಯಮದವರ ಜತೆ ಮಾತನಾಡುತ್ತಾ, ಮನೇಕಾ ಗಾಂಧಿ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ನೀಡಿರುವುದೇ ನಾಚಿಕೆಗೇಡು ಎಂದಿದ್ದಾರೆ.
ಆಕೆಯ ವಿರುದ್ಧ ಕೇಸು ದಾಖಲಿಸಬೇಕು. ಮಾಧ್ಯಮಗಳು ಮನೇಕಾ ಗಾಂಧಿ ಕಾರ್ಯಕ್ರಮಗಳನ್ನು ಬಾಯ್ಕಾಟ್ ಮಾಡಬೇಕು. ಆಕೆ ಏಕೆ ಹಾಗೆ ವರ್ತಿಸುತ್ತಾರೋ ತಿಳಿಯದು. ತೊಂದರೆ ಕೊಡುವ ನಾಯಿಗಳನ್ನು ಗುಂಡಿಟ್ಟು ಕೊಲ್ಲಬೇಕು ಎಂದಿದ್ದಾರೆ. ಕ್ರೂರ ನಾಯಿಗಳ ಕೂಡಿಹಾಕುವುದಕ್ಕೆ ಸರ್ಕಾರ ನಿರ್ಧರಿಸಿರುವುದನ್ನು ದೇಶದ ಅನಿಮಲ್ ವೆಲ್ಫೇರ್ ಬೋರ್ಡ್ ಅಧ್ಯಕ್ಷ ಆರ್.ಎಂ.ಖರಬ್ ವಿರೋಧಿಸಿರುವುದಕ್ಕೆ ಕೇರಳದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.[ದರೋಡೆ ಮಾಡಿದ ಹಣ ಭಯೋತ್ಪಾದನಾ ಕೃತ್ಯಕ್ಕೆ ಪೂರೈಕೆ]
ಕೇರಳದಲ್ಲಿ ಈ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಬೀದಿ ನಾಯಿಗಳು ಕಡಿದಿವೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ರೇಬೀಸ್ ನಿರೋಧಕ ಔಷಧಿ ಮಾರುವುದರಲ್ಲಿ ಕೇರಳ ರಾಜ್ಯ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications