ಕೊಟ್ಟಾಯಂನಲ್ಲಿ ಕೇರಳ ಸಿಎಂ ಚಾಂಡಿ ಕಾರು ಅಪಘಾತ
ಕೊಟ್ಟಾಯಂ(ಕೇರಳ), ಫೆ. 28: ಕೇರಳದ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಗ್ರಹಚಾರ ಸರಿ ಇದ್ದಂತೆ ಕಾಣುತ್ತಿಲ್ಲ. ಸೋಲಾರ್ ಹಗರಣ ಭೀತಿಯ ನಡುವೆ ಚುನಾವಣೆ ಎದುರಿಸುತ್ತಿದ್ದಾರೆ. ಭಾನುವಾರ ಮಲಪ್ಪುರಂನಿಂದ ಕೊಟ್ಟಾಯಂಗೆ ಹಿಂತಿರುಗುವಾಗ ಚಾಂಡಿ ಅವರಿದ್ದ ಕಾರು ತಿರುವಿನಲ್ಲಿ ಮಗಚಿ ಬಿದ್ದಿದೆ. ಅದೃಷ್ಟವಶಾತ್ ಚಾಂಡಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೀಟು ಬೆಲ್ಟ್ ಧರಿಸಿದ್ದರಿಂದ ಜೀವ ಉಳಿದಿದೆ ಎಂದು ತಿಳಿದು ಬಂದಿದೆ.
ಭಾನುವಾರ ಮುಂಜಾನೆ ಕೊಟ್ಟಾಯಂನ ಎಟ್ಟುಮನೂರ್ ಬಳಿ ಚರ್ಚ್ ಜಂಕ್ಷನ್ ನಲ್ಲಿ ಕಾರು ತಿರುವಿನಲ್ಲಿ ಸಾಗುವಾಗ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ ಮಗಚಿ ಬಿದ್ದಿದೆ. ಭಾನುವಾರ ಮುಂಜಾನೆ 2.30ರ ಸುಮಾರಿಗೆ ಈ ಘಟನೆ ನಡೆದಿದ್ದು ಸೆಂಟ್ರಲ್ ರೋಡ್ ಬಳಿ ಸಾಗುವಾಗ ಕಾರಿನ ಬಲಬದಿ ಟಯರ್ ಪಂಕ್ಚರ್ ಆಗಿದೆ. ವೇಗದಲ್ಲಿದ್ದ ಗಾಡಿ ನಿಯಂತ್ರಣಕ್ಕೆ ಸಿಗದ ಕಾರಣ ರಸ್ತೆ ಬದಿ ಚರಂಡಿಗೆ ಇಳಿಸಲಾಗಿದೆ.

ಸಿಎಂ ಅವರ ಗನ್ ಮ್ಯಾನ್ ಅಶೋಕ್ ಅವರು ಮುಂದಿನ ಸೀಟಿನಲ್ಲಿದ್ದರು. ಚಾಲಕ ಹಾಗೂ ಅಶೋಕ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸೀಟು ಬೆಲ್ಟ್ ಧರಿಸಿದ್ದರಿಂದ ಹಣೆಗೆ ಸಣ್ಣ ಪೆಟ್ಟು ಮಾತ್ರ ತಗುಲಿದೆ.
#Kerala CM @Oommen_Chandy's car meets with minor #accident in wee hours of Sunday; CM unhurt. @NewIndianXpress pic.twitter.com/ap0dbR41tH
— Sovi Vidyadharan (@Sovi_TNIE) February 28, 2016
ಯಾವುದೇ ಪ್ರಾಣಾಪಾಯವಿಲ್ಲ ಎಂದು ಸರ್ಕಾರಿ ವೈದ್ಯರು ಹೇಳಿದ್ದಾರೆ. ಸದ್ಯಕ್ಕೆ ನಾಟ್ಟಕೊಮ್ ನ ಸರ್ಕಾರಿ ಅತಿಥಿ ಗೃಹದಲ್ಲಿ ಚಾಂಡಿ ಅವರು ವಿಶ್ರಾಂತಿ ಪಡೆಯುತಿದ್ದಾರೆ.ಇದು ಸಾಧಾರಾಣ ರಸ್ತೆ ಅಪಘಾತದಂತೆ ಕಂಡು ಬಂದರೂ ಚುನಾವಣೆ ಸಮಯವಾದ್ದರಿಂದ ರಾಜ್ಯದ ಗೃಹ ಇಲಾಖೆ ತನಿಖೆಗೆ ಮುಂದಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications