ನಾನೀಗ ಮುಕ್ತ ಮುಕ್ತ; ಕೇರಳ ಕಾಂಗ್ರೆಸ್ಸಿಗ ಮುಸ್ತಫಾ
ಕೊಚ್ಚಿ, ಮೇ 30: ಕೇರಳದಲ್ಲಿ ಈ ಬಾರಿಯೂ ತನ್ನ ಅಸ್ತಿತ್ವವನ್ನು ಸುಧಾರಿಸಿಕೊಳ್ಳುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಪಕ್ಷವು ಮುಜುಗರದ ಸನ್ನಿವೇಶ ಎದುರಿಸಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಜೋಕರ್ ರೀತಿ ವರ್ತಿಸಿದ್ದಾರೆ ಎಂದು ಜರಿದಿದ್ದ ಮಾಜಿ ಸಚಿವರೊಬ್ಬರನ್ನು ಪಕ್ಷದಿಂದ ಗುರುವಾರ ರಾತ್ರಿ ಅಮಾನತು ಮಾಡಲಾಗಿದೆ. ಇದರಿಂದ ಕಾಂಗ್ರೆಸ್ಸಿಗೆ ಮತ್ತಷ್ಟು ಮುಜುಗರವುಂಟಾಗಿದೆ.
'ರಾಹುಲ್ ಜೋಕರ್' ಎಂದಿದ್ದಕ್ಕೆ ಎಐಸಿಸಿ ಸದಸ್ಯ ಸಸ್ಪೆಂಡ್ : ಕೇರಳದ ಮಾಜಿ ಸಚಿವ ಟಿಎಚ್ ಮುಸ್ತಾಫಾ ಅವರು ಕೊಚ್ಚಿಯಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡುತ್ತಾ 'ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಜೋಕರ್ ರೀತಿ ವರ್ತಿಸಿದ್ದಾರೆ. ಹೀಗಾಗಿಯೇ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಹೀನಾಯವಾಗಿ ಸೋಲುವಂತಾಯಿತು' ಎಂದು ಈ ಬಾರಿಯ ಚುನಾವಣಾ ಫಲಿತಾಂಶವನ್ನು ವಿಶ್ಲೇಷಿಸಿದ್ದರು.

ನಾನೀಗ ಮುಕ್ತ ಮುಕ್ತ; ಕೇರಳ ಕಾಂಗ್ರೆಸ್ಸಿಗ ಮುಸ್ತಫಾ
'ನಾನೀಗ ಸರ್ವತಂತ್ರ ಸ್ವತಂತ್ರ. ಇನ್ನು ಏನು ಬೇಕಾದರೂ ಮಾತನಾಡಬಹುದು. ನನ್ನ ಮನಸ್ಸಿಗೆ ಬಂದದ್ದನ್ನು ಮುಕ್ತವಾಗಿ ಅಭಿವ್ಯಕ್ತಿಗೊಳಿಸಬಹುದು' ಎಂದು ಕಾಂಗ್ರೆಸ್ನಿಂದ ಅಮಾನತ್ತಾಗಿರುವ ನಾಯಕ ಮುಸ್ತಫಾ ಹೇಳಿದ್ದಾರೆ.
'ಈಗ ನನ್ನ ಮಾತಿಗೆ ನಿರ್ಬಂಧ ಹೇರುವವರು ಯಾರೂ ಇಲ್ಲ. ತೋಚಿದ್ದನ್ನು ಹೇಳಬಲ್ಲೆ. ಕೊನೆಯವರೆಗೆ ನಿಜವಾದ ಕಾಂಗ್ರೆಸ್ಸಿಗನಾಗಿ ಉಳಿದವನು ನಾನು ಎಂಬ ಹೆಮ್ಮೆ ನನ್ನದು' ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ವರಿಷ್ಠರು ಏನನ್ನುತ್ತಾರೆ?:
ಮುಸ್ತಫಾ ಅಮಾನುತು ಕ್ರಮವನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್, ಪಕ್ಷದೊಳಗಿನ ಆಂತರಿಕೆ ಟೀಕೆಗಳನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅವರು ಬಳಸಿರುವ ಭಾಷೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದು ಕಾಂಗ್ರೆಸ್ನ ನಾಯಕ ಸಂಜಯ್ ಝಾ ಹೇಳಿದ್ದಾರೆ.
ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಸೋಲಿನ ಹೊಣೆ ಹೊತ್ತು ಅವರ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಅದಾಗ್ಯೂ ಮುಸ್ತಫಾ ಈ ರೀತಿ ಮಾತನಾಡಿರುವುದು ಖಂಡನಾರ್ಹ ಎಂದು ಝಾ ಹೇಳಿದ್ದಾರೆ.

ರಾಹುಲರನ್ನು ಬಲವಂತವಾಗಿ ವಜಾ ಮಾಡಬೇಕು
ಜತೆಗೆ, ಅವರನ್ನು (ರಾಹುಲ್ ಗಾಂಧಿ) ಪಕ್ಷದಿಂದ ಉಚ್ಚಾಟಿಸಬೇಕು. ಅವರು ಸ್ವಯಂಪ್ರೇರಿತರಾಗಿ ಆ ಸ್ಥಾನದಿಂದ ಕೆಳಗಿಳಯಬೇಕು. ಇಲ್ಲವಾದಲ್ಲಿ ಅವರನ್ನು ಬಲವಂತವಾಗಿ ವಜಾ ಮಾಡಬೇಕು ಎಂದು ಮುಸ್ತಾಫಾ ಆಗ್ರಹಿಸಿದ್ದರು.

ಪ್ರಿಯಾಂಕಾ ಗಾಂಧಿ ಪಕ್ಷದ ಅಧ್ಯಕ್ಷೆಯಾಗಲಿ
ಇದೇ ವೇಳೆ ಪ್ರಿಯಾಂಕಾ ಗಾಂಧಿ ಅವರನ್ನೇ ಪಕ್ಷದ ಅಧ್ಯಕ್ಷೆಯನ್ನಾಗಿ ಮಾಡಬೇಕು ಎಂದೂ ಮುಸ್ತಾಫಾ ಆಗ್ರಹಿಸಿದ್ದರು. ಗಮನಾರ್ಹವೆಂದರೆ ಮುಸ್ತಾಫಾ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಸದಸ್ಯರೂ ಹೌದು.

ಕಾಂಗ್ರೆಸ್ ಸೋಲಿಗೆ ಸಾಮೂಹಿಕ ಜವಾಬ್ದಾರಿ ಹೊರಬೇಕು
ಇದರಿಂದ ಕೆರಳಿದ ಕೆಪಿಸಿಸಿ ರಾಜ್ಯಾಧ್ಯಕ್ಷ ವಿಎಂ ಸುಧೀರ್ ಅವರು ಕಾಂಗ್ರೆಸ್ ಸೋಲಿಗೆ ಸಾಮೂಹಿಕ ಜವಾಬ್ದಾರಿ ಹೊರಬೇಕಿದೆ. ಕೇವಲ ಒಬ್ಬ ವ್ಯಕ್ತಿಯನ್ನು ದೂಷಿಸುವುದು ಸರ್ವತಾ ಸಾಧುವಲ್ಲ ಎಂದು ಮುಸ್ತಾಫಾ ಟೀಕೆಗೆ ಪ್ರತಿಕ್ರಿಯಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದಿಂದ ಸಸ್ಪೆಂಡ್ ಮಾಡಿ ಗುರುವಾರ ಆದೇಶ ಹೊರಡಿಸಿದ್ದಾರೆ.

ಸೋನಿಯಾನೂ ಬೇಡ ಪ್ರಿಯಾಂಕಾ ಬರಲಿ
1998ರ ಲೋಕಸಬಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪರಾಭವಗೊಂಡಾಗ ಸೋನಿಯಾ ಗಾಂಧಿ ಅವರನ್ನು ಪಕ್ಷದ ಅಧ್ಯಕ್ಷೆಯನ್ನಾಗಿ ನೇಮಿಸಲಾಯಿತು. 1999ರಲ್ಲಿಯೇ ಕಾಂಗ್ರೆಸ್ ಮತ್ತೆ ಬಿಜೆಪಿ ಎದುರು ಸೋತಿತು. ಆದರೆ 5 ವರ್ಷದ ಬಳಿಕ ಪಕ್ಷ ಮತ್ತೆ ಅಮೋಘವಾಗಿ ಜಯ ಸಾಧಿಸಿ, 10 ವರ್ಷ ಕಾಲ ಕೇಂದ್ರದಲ್ಲಿ ಚುಕ್ಕಾಣಿ ಹಿಡಿದಿತ್ತು.

ಕೇರಳದಲ್ಲೂ, ದೇಶದಲ್ಲಿಯೂ ಕಾಂಗ್ರೆಸ್ಸಿಗೆ ಭಾರಿ ಪರಾಭವ
ಕೇರಳದಲ್ಲಿ ಒಟ್ಟು 20 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷವು ಯುಡಿಎಫ್ ಮೈತ್ರಿಯೊಂದಿಗೆ 5 ಸ್ಥಾನಗಳನ್ನು ಗೆದ್ದುಕೊಂಡಿದೆ. ದೇಶದಾದ್ಯಂತ 543 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷವು ಕೇವಲ 44 ಸ್ಥಾನ ಗಳಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications