ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಮ್ಮ ಯಶೋಗಾಥೆಯಲ್ಲಿ ಕೇರಳದ ಪಾತ್ರವೂ ಇದೆ: ಯುಎಇ

|
Google Oneindia Kannada News

ಕೊಚ್ಚಿ, ಆಗಸ್ಟ್ 18: ಪ್ರವಾಹದಿಂದ ತತ್ತರಿಸಿರುವ ಕೇರಳಕ್ಕೆ ನೆರವಾಗಲು ಯುನೈಟೆಡ್ ಅರಬ್ ಎಮಿರೇಟ್ಸ್ ಮುಂದಾಗಿದೆ. ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಸಲುವಾಗಿಯೇ ಯುಎಇ ಸಮಿತಿಯೊಂದನ್ನು ರಚಿಸಿದೆ.

ನೆರೆ ಹಾವಳಿಯಲ್ಲಿ ಸಿಲುಕಿರುವವರಿಗೆ ನೆರವಾಗಲು ರಾಷ್ಟ್ರೀಯ ವಿಪತ್ತು ಸಮಿತಿಯೊಂದನ್ನು ರಚಿಸುವಂತೆ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಸೂಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕೇರಳ ಪ್ರವಾಹ : ದೇವರ ನಾಡಿಗೆ ನಿಮ್ಮ ಸಹಾಯಹಸ್ತ ಬೇಕಾಗಿದೆಕೇರಳ ಪ್ರವಾಹ : ದೇವರ ನಾಡಿಗೆ ನಿಮ್ಮ ಸಹಾಯಹಸ್ತ ಬೇಕಾಗಿದೆ

ಕೇರಳದಲ್ಲಿ ಸುಮಾರು 324 ಜನರ ಮೃತಪಟ್ಟು, ಎರಡು ಲಕ್ಷ ಜನರು ನೆಲೆ ಕಳೆದುಕೊಂಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವುದು ದೇಶದ ವಿಶೇಷ ಜವಾಬ್ದಾರಿಯಾಗಿದೆ. ಕೇರಳದಿಂದ ಬಂದ ಅನೇಕ ಜನರು ಯುಎಇಯಲ್ಲಿ ನೆಲೆಸಿದ್ದಾರೆ ಎಂದು ಯುಎಇ ಉಪಾಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಹೇಳಿದ್ದಾರೆ.

'ಕೇರಳದ ಜನರು ಯಾವಾಗಲೂ ಮತ್ತು ಇಂದಿಗೂ ಯುಎಇಯ ಯಶಸ್ಸಿನ ಕಥೆಯ ಭಾಗವಾಗಿದ್ದಾರೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.

Kerala flood: Kerala part of our success story: UAE

ವೈಮಾನಿಕ ಸಮೀಕ್ಷೆಯಲ್ಲಿ ಕೇರಳ ಪ್ರವಾಹದ ರೌದ್ರಾವತಾರ ಕಂಡ ಮೋದಿ!ವೈಮಾನಿಕ ಸಮೀಕ್ಷೆಯಲ್ಲಿ ಕೇರಳ ಪ್ರವಾಹದ ರೌದ್ರಾವತಾರ ಕಂಡ ಮೋದಿ!

ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ಸೂಚನೆ ಕಾಣಿಸುತ್ತಿಲ್ಲ. ಅಲ್ಲಿನ ನೂರಾರು ಅಣೆಕಟ್ಟುಗಳು, ನದಿ, ಜಲಾಶಯಗಳ ಪ್ರದೇಶದಿಂದ ಸಾವಿರಕ್ಕೂ ಅಧಿಕ ಸಂಖ್ಯೆಯ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ಮಳೆ ಇನ್ನಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನರು ಇನ್ನಷ್ಟು ತೊಂದರೆಗೆ ಸಿಲುಕುವ ಅಪಾಯವಿದೆ.

English summary
Kerala Flood: UAE's vice president said, 'The people of Kerala have always been and are still part of our success story in the UAE. UAE offered help to Kerala by forming a committee.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X