ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈಮಾನಿಕ ಸಮೀಕ್ಷೆಯಲ್ಲಿ ಕೇರಳ ಪ್ರವಾಹದ ರೌದ್ರಾವತಾರ ಕಂಡ ಮೋದಿ!

|
Google Oneindia Kannada News

ತಿರುವನಂತಪುರಂ, ಆಗಸ್ಟ್ 18: ಪ್ರವಾಹದ ರುದ್ರ ನರ್ತನಕ್ಕೆ ನಲುಗುತ್ತಿರುವ ಕೇರಳದ ಸ್ಥಿತಿಯನ್ನು ವೈಮಾನಿಕ ಸಮೀಕ್ಷೆಯ ಮೂಲಕ ಇಂದು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದರು.

ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೇಂದ್ರ ಸಚಿವ ಕೆ ಜೆ ಆಲ್ಫಾನ್ಸ್ ಮತ್ತು ಇನ್ನಿತರ ಸಿಬ್ಬಂದಿ ಜೊತೆ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಉನ್ನತ ಮಟ್ಟದ ಸಭೆ ನಡೆಸಿದರು.

ವೈಮಾನಿಕ ಸಮೀಕ್ಷೆಯ ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭೀಕರ ಪ್ರವಾಹದಿಂದಾಗಿ ಮಡಿದವರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದರು. ಮತ್ತು ಗಂಭೀರವಾದ ಗಾಯಗೊಂಡವರಿಗೆ ತಲಾ 50,000 ರೂ. ನೆರವು ನೀಡುವುದಾಗಿ ಅಭಯ ನೀಡಿದರು.

ಕೇರಳ ಪ್ರವಾಹ : ದೇವರ ನಾಡಿಗೆ ನಿಮ್ಮ ಸಹಾಯಹಸ್ತ ಬೇಕಾಗಿದೆಕೇರಳ ಪ್ರವಾಹ : ದೇವರ ನಾಡಿಗೆ ನಿಮ್ಮ ಸಹಾಯಹಸ್ತ ಬೇಕಾಗಿದೆ

Kerala floods: PM Modi conducts an aerial survey

ಕೇರಳದಲ್ಲಿ ಕಳೆದ ಹಲವು ದಿನಗಳಿಂದ ಸುರಿದ ಧಾರಾಕಾರ ಮಳೆ, ಮತ್ತು ಅದರಿಂದುಂಟಾದ ಪ್ರವಾಹದಿಂದಾಗಿ ಇದುವರೆಗೂ ಸುಮಾರು 320 ಕ್ಕೂ ಹೆಚ್ಚು ಜನ ಮೃತರಾಗಿದ್ದು, 2,23,139 ಕ್ಕೂ ಹೆಚ್ಚು ಜರು 150 ಕ್ಕೂ ಹೆಚ್ಚು ಸಂತ್ರಸ್ತ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ದೇಶದೆಲ್ಲೆಡೆಯಿಂದ ಸಂತ್ರಸ್ತ ಪರಿಹಾರ ನಿಧಿಗೆ ನೆರವು ಹರಿದುಬರುತ್ತಿದೆಯಾದರೂ, ಪ್ರವಾಹದ ಮಟ್ಟ ಏರುತ್ತಲೇ ಇರುವುದರಿಂದ ಕೇರಳ ಮತ್ತು ಕರ್ನಾಟಕದ ಕೆಲವು ಜಿಲ್ಲೆಗಳ ಜನರ ಜೀವನ ಚಿಂತಾಜನಕವಾಗಿದೆ.

English summary
Kerala floods: Prime Minister Narendra Modi conducts an aerial survey of flood affected areas. PM has announced an ex-gratia of Rs. 2 lakh per person to the next kin of the deceased and Rs.50,000 to those seriously injured, from PM’s National Relief Funds (PMNRF).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X