ಕೇರಳ ಪ್ರವಾಹ: ಒಂದು ತಿಂಗಳ ಸಂಬಳ ದೇಣಿಗೆ ನೀಡಿದ ತೆಲಂಗಾಣ ಡಿಸಿಎಂ

ಹೈದರಾಬಾದ್, ಆಗಸ್ಟ್ 20: ಕೇರಳದಲ್ಲಿ ಉಂಟಾಗಿರುವ ಭೀಕರ ಪ್ರವಾಹದ ಸಂತ್ರಸ್ತನಿಧಿಗೆ ತಮ್ಮ ಒಂದು ತಿಂಗಳ ವೇತನವನ್ನು ದೇಣಿಗೆ ನೀಡಲು ತೆಲಂಗಾಣದ ಉಪಮುಖ್ಯಮಂತ್ರಿ ಮೊಹಮ್ಮದ್ ಮಹ್ಮೂದ್ ಅಲಿ ನಿರ್ಧರಿಸಿದ್ದಾರೆ.

ತೆಲಂಗಾಣದ ಗೃಹಮಂತ್ರಿ ನಯನಿ ನರಸಿಂಹ ರೆಡ್ಡಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಈಗಾಗಲೇ 25 ಕೋಟಿ ರೂ.ಗಳ ಚೆಕ್ ಅನ್ನು ಸಂತ್ರಸ್ತರ ಪರಿಹಾರದ ರೂಪದಲ್ಲಿ ದೇಣಿಗೆ ನೀಡಿದ್ದಾರೆ.

ಅಷ್ಟೇ ಅಲ್ಲದೆ, ತೆಲಂಗಾಣ ಸರಕಾರ ಕೇರಳದ ಪ್ರವಾಹಕ್ಕೆ ಯಾವೆಲ್ಲ ರೀತಿಯಲ್ಲಿ ನೆರವು ನೀಡಬಹುದೋ ಆ ಎಲ್ಲ ರೀತಿಯಲ್ಲೂ ಸಹಾಯ ಹಸ್ತ ಚಾಚಿದೆ.

Kerala floods: Telangana Dy CM to donate one months salary

ತಮ್ಮ ಒಂದು ತಿಂಗಳ ವೇತನವನ್ನು ದೇಣಿಗೆ ರೂಪದಲ್ಲಿ ನೀಡುವ ಮೂಲಕ ಕೇರಳ ಉಪಮುಖ್ಯಮಂತ್ರಿ ಅಲಿ ಅವರು ಹೊಸ ಆದರ್ಶಕ್ಕೆ ನಾಂದಿ ಹಾಡಿದ್ದಾರೆ.

ಕರ್ನಾಟಕ, ಉತ್ತರ ಪ್ರದೇಶ, ಪಂಜಾಬ್, ದೆಹಲಿ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳು ಕೇರಳದ ಈ ಸಂಕಷ್ಟದಲ್ಲಿ ಜೊತೆಯಾಗಿ, ನೆರವಿನ ಹಸ್ತಚಾಚಿದೆ.

ಇತ್ತೀಚೆಗಷ್ಟೇ ತನ್ನೆಲ್ಲಾ ಜನಪ್ರತಿನಿಧಿಗಳ ಸಂಬಳವನ್ನು ಕಾಂಗ್ರೆಸ್ ಪಕ್ಷ, ಕೇರಳ ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

ಕಳೇದ ಕೆಲ ದಿನಗಳಿಂದ ಕೇರಳದಲ್ಲಿ ಒಂದೇ ಸಮೆನೆ ಸುರಿಯುತ್ತಿರುವ ಮಳೆಗೆ ಇದುವರೆಗೂ 350 ಕ್ಕೂ ಹೆಚ್ಚು ಜನ ಮೃತರಾಗಿದ್ದು, ಸುಮಾತು 19,512 ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+