ಕುಲಪತಿ ಹುದ್ದೆಯಿಂದ ಗವರ್ನರ್ ಕೆಳಗಿಳಿಸಿದ ಕೇರಳ ಸರ್ಕಾರ
ತಿರುವನಂತಪುರಂ, ನವೆಂಬರ್ 10: ಕೇರಳದಲ್ಲಿ ಉಭಯ ಪಕ್ಷಗಳ ನಡುವಿನ ಗಲಾಟೆ ತೀವ್ರವಾಗಿ ಹೆಚ್ಚಾದ ಒಂದು ದಿನದ ನಂತರ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಕೇರಳ ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಸ್ಥಾನದಿಂದ ರಾಜ್ಯ ಸರ್ಕಾರ ಗುರುವಾರ ತೆಗೆದುಹಾಕಿದೆ.
ಆರಿಫ್ ಮೊಹಮ್ಮದ್ ಖಾನ್ ಅವರ ಸ್ಥಾನವನ್ನು ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಗಣ್ಯ ವ್ಯಕ್ತಿಯನ್ನು ನೇಮಿಸಲು ವಿಶ್ವವಿದ್ಯಾಲಯದ ನಿಯಮಗಳನ್ನು ಬದಲಾಯಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತು. ರಾಜ್ಯಪಾಲರು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಪ್ರತಿನಿಧಿಯಾಗಿದ್ದಾರೆ ಮತ್ತು ರಾಜ್ಯದ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್ಡಿಎಫ್) ಆಡಳಿತದೊಂದಿಗೆ ದಿನನಿತ್ಯ ಸಂಘರ್ಷಕ್ಕೆ ಹೆಸರುವಾಸಿಯಾಗಿದ್ದಾರೆ ಎಂದು ಅಲ್ಲಿನ ಸರ್ಕಾರ ಆರೋಪಿಸಿದೆ.

ಬಿಜೆಪಿಯೇತರ ಆಡಳಿತವಿರುವ ಮೂರು ದಕ್ಷಿಣ ರಾಜ್ಯಗಳಲ್ಲಿ ಗವರ್ನರ್ಗಳು ಮತ್ತು ಸರ್ಕಾರಗಳ ನಡುವಿನ ಘರ್ಷಣೆ ಉಲ್ಬಣಗೊಂಡ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ತಮಿಳುನಾಡು ಆರ್ಎನ್ ರವಿಯನ್ನು ವಾಪಸು ಕರೆಸಿಕೊಳ್ಳಲು ಕೋರಿದೆ. ಕೇರಳವು ಆರಿಫ್ ಮೊಹಮದ್ ಖಾನ್ ಅವರನ್ನು ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಯನ್ನಾಗಿ ಬದಲಿ ವ್ಯವಸ್ಥೆ ಮಾಡಲು ವಿಶೇಷ ಸುಗ್ರೀವಾಜ್ಞೆಯನ್ನು ಪ್ರಸ್ತಾಪಿಸಿದೆ. ತಮಿಳಿಸೈ ಸೌಂದರರಾಜನ್ ತೆಲಂಗಾಣದಲ್ಲಿ ಆಕೆಯ ಫೋನ್ ಟ್ಯಾಪ್ ಆಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆಡಳಿತವು ಇನ್ನು ಮುಂದೆ ರಾಜ್ಯದ ವಿಶ್ವವಿದ್ಯಾಲಯಗಳ ಚುಕ್ಕಾಣಿ ಹಿಡಿಯಲು ರಾಜ್ಯಪಾಲರು ಬಯಸುವುದಿಲ್ಲ ಎಂದು ಹೇಳಿದೆ. ಉಪಕುಲಪತಿಗಳ ನೇಮಕ ಸೇರಿದಂತೆ ವಿಶ್ವವಿದ್ಯಾನಿಲಯಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಹೆಚ್ಚು ಭಿನ್ನಾಭಿಪ್ರಾಯ ಹೊಂದಿದ್ದಾರೆ. ಡೀಮ್ಡ್ ವಿಶ್ವವಿದ್ಯಾಲಯದ ತಿದ್ದುಪಡಿ ನಿಯಮಗಳು ಕೇರಳ ಕಲಾಮಂಡಲದ ಆಡಳಿತ ವ್ಯವಸ್ಥೆ ಮತ್ತು ನಿರ್ವಹಣಾ ರಚನೆಯು ರಾಜ್ಯ ಸರ್ಕಾರದ ನಿರ್ಧಾರಗಳನ್ನು ಅನುಸರಿಸುತ್ತದೆ ಎಂದು ಹೇಳುತ್ತದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications