ಕೇರಳ ಸರ್ಕಾರಿ ವೆಬ್ ಸೈಟಿಗೆ ಪಾಕಿಸ್ತಾನಿಗಳಿಂದ ಕನ್ನ!
ತಿರುವನಂತಪುರಂ, ಸೆ. 27: 'ದೇವರ ನಾಡು' ಕೇರಳ ರಾಜ್ಯದ ಪ್ರಮುಖ ವೆಬ್ ಸೈಟ್ ಮೇಲೆ ಪಾಕಿಸ್ತಾನದ ಹ್ಯಾಕರ್ ಗಳ ಕಣ್ಣು ಬಿದ್ದಿದೆ. ಕೇರಳ ಸರ್ಕಾರದ ಅಧಿಕೃತ ವೆಬ್ ಸೈಟಿಗೆ ಹ್ಯಾಕರ್ಸ್ ಕನ್ನ ಹಾಕಿರುವ ಸುದ್ದಿ ಹೊರಬಂದಿದೆ. ಸದ್ಯಕ್ಕೆ ವೆಬ್ ಸೈಟ್ ಮುಖಪುಟದಲ್ಲಿ 'ದುರಸ್ತಿ ಕಾರ್ಯ ಜಾರಿಯಲ್ಲಿದೆ' ಎಂಬ ಫಲಕ ಹಾಕಲಾಗಿದೆ.
ಕೇರಳ ಸರ್ಕಾರದ ವೆಬ್ ಸೈಟ್ (www.kerala.gov.in) ಮೇಲೆ ಪಾಕಿಸ್ತಾನ ಮೂಲದ ಹ್ಯಾಕರ್ಸ್ ಶನಿವಾರ ತಡರಾತ್ರಿ ದಾಳಿ ಮಾಡಿದ್ದಾರೆ. ಈ ವಿಷಯವನ್ನು ಮುಖ್ಯಮಂತ್ರಿ ಉಮ್ಮನ್ ಚಾಂಡಿ ಕೂಡಾ ಸ್ಪಷ್ಟಪಡಿಸಿದ್ದು, ಕೊಟ್ಟಾಯಂನಲ್ಲಿ ಈ ಬಗ್ಗೆ ಹೇಳಿಕೆ ನೀಡಿ' ಇದು ಮುಗಿದ ಅಧ್ಯಾಯ' ಏನು ಹಾನಿಯಾಗಿಲ್ಲ ಎಂದಿದ್ದಾರೆ.

ಕೇರಳ ರಾಜ್ಯ ಪೊಲೀಸರು ಈ ಘಟನೆ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ವೆಬ್ ಸೈಟ್ ನ ಮುಖಪುಟಕ್ಕೆ ಮಾತ್ರ ಕನ್ನ ಹಾಕಲಾಗಿದ್ದು, ಸರ್ವರ್ ಗೆ ಯಾವುದೇ ಹಾನಿಯಾಗಿಲ್ಲ. ವೆಬ್ ಸೈಟ್ ನ ಅನೇಕ ಸಬ್ ಡೊಮೈನ್ ಗಳು ಈಗಲೂ ಕಾರ್ಯನಿರ್ವಹಿಸುತ್ತಿವೆ.
ಶಿಕ್ಷಣ, ಟೆಂಡರ್, ಗೆಜೆಟ್, ಸರ್ಕಾರಿ ಆದೇಶ, ಸಾಮಾಜಿಕ ಕಲ್ಯಾಣ ಇಲಾಖೆ ಸೇರಿದಂತೆ ಅನೇಕ ಸಬ್ ಡೊಮೈನ್ ಗಳು ಕಾರ್ಯನಿರ್ವಹಿಸುತ್ತಿವೆ.ಮುಖ್ಯಪುಟದ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಸರಿಪಡಿಸಲಾಗುವುದು ಎಂದು ಕೇರಳ ರಾಜ್ಯದ ಸರ್ಕಾರಿ ವೆಬ್ ಸೈಟ್ ನಿಯಂತ್ರಣ ಸಂಸ್ಥೆ ಇಮೇಜ್ ಟೆಕ್ನಾಲಜಿ ಪ್ರಕಟಿಸಿದೆ.
ಇದಕ್ಕೂ ಮುನ್ನ ಪಾಕಿಸ್ತಾನಿ ಮೂಲದ ಹ್ಯಾಕರ್ಸ್ ಎಂದು ಹೇಳಿಕೊಂದ ಗುಂಪೊಂದು ಕೇರಳದ ಅಧಿಕೃತ ವೆಬ್ ಸೈಟ್ ನಲ್ಲಿ ಭಾರತದ ತ್ರಿವರ್ಣ ಧ್ವಜ ಸುಡುವ ಚಿತ್ರವನ್ನು ಹಾಕಿ, ಪಾಕಿಸ್ತಾನ ಪರ ಘೋಷಣೆಗಳನ್ನು ಮುಖಪುಟದಲ್ಲಿ ಹಾಕಿದ್ದರು. (ಐಎಎನ್ ಎಸ್)
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications