ಕೇರಳ ಹಣಕಾಸು ಸಚಿವರನ್ನು ವಜಾಗೊಳಿಸುವಂತೆ ಸಿಎಂಗೆ ರಾಜ್ಯಪಾಲರ ಪತ್ರ
ತಿರುವನಂತಪುರಂ, ಅಕ್ಟೋಬರ್ 26: ಕೇರಳದ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ನೀಡಿರುವ ದೇಶದ್ರೋಹಿ ಹೇಳಿಕೆಗೆ ಸಂಬಂಧಿಸಿದಂತೆ ಹಣಕಾಸು ಸಚಿವ ಕೆಎನ್ ಬಾಲಗೋಪಾಲ್ ಅನ್ನು ವಜಾಗೊಳಿಸುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪತ್ರ ಬರೆದಿದ್ದಾರೆ.
ಕಳೆದ ಬುಧವಾರ ತಿರುವನಂತಪುರಂನ ಕ್ಯಾಂಪಸ್ನಲ್ಲಿ ಬಾಲಗೋಪಾಲ್, "ಪ್ರಾದೇಶಿಕತೆ ಮತ್ತು ಪ್ರಾಂತೀಯತೆಯ ಬೆಂಕಿಯನ್ನು ಹೊತ್ತಿಸಲು ಮತ್ತು ಭಾರತದ ಏಕತೆಗೆ ಧಕ್ಕೆ ಉಂಟು ಮಾಡುವಂತೆ," ಭಾಷಣ ಮಾಡಿದ್ದಾರೆ ಎಂದು ರಾಜ್ಯಪಾಲರು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.
ಕೇರಳದ ಹಣಕಾಸು ಸಚಿವ ಕೆಎನ್ ಬಾಲಗೋಪಾಲ್ ಈ ಸಮಾರಂಭದಲ್ಲಿ "ಉತ್ತರ ಪ್ರದೇಶದಂತಹ ಸ್ಥಳಗಳಿಂದ ಬರುವವರಿಗೆ ಕೇರಳದ ವಿಶ್ವವಿದ್ಯಾನಿಲಯಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗಬಹುದು," ಎಂದು ಹೇಳಿದರು. ದೇಶದ ಇತರ ಭಾಗಗಳಲ್ಲಿ ಅಧಿಕಾರಿಗಳು ವಿದ್ಯಾರ್ಥಿಗಳ ಮೇಲೆ ಹಿಂಸಾತ್ಮಕ ದಬ್ಬಾಳಿಕೆ ಅನ್ನು ನೆನಪಿಸಿಕೊಂಡರು.

ವಿವಿಧ ರಾಜ್ಯಗಳು ಉನ್ನತ ಶಿಕ್ಷಣದ ವಿವಿಧ ವ್ಯವಸ್ಥೆ ಹೊಂದಿವೆ:
"ಹಣಕಾಸು ಸಚಿವ ಕೆಎನ್ ಬಾಲಗೋಪಾಲ್ ಹೇಳಿಕೆಗಳು ಕೇರಳ ಮತ್ತು ಭಾರತೀಯ ಒಕ್ಕೂಟದ ಇತರ ರಾಜ್ಯಗಳ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸುತ್ತವೆ. ಭಾರತದ ವಿವಿಧ ರಾಜ್ಯಗಳು ಉನ್ನತ ಶಿಕ್ಷಣದ ವಿವಿಧ ವ್ಯವಸ್ಥೆಗಳನ್ನು ಹೊಂದಿವೆ ಎಂಬ ತಪ್ಪು ಅಭಿಪ್ರಾಯವನ್ನು ಮೂಡಿಸಲು ಪ್ರಯತ್ನಿಸುತ್ತದೆ," ಎಂದು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಉಲ್ಲೇಖಿಸಿದ್ದಾರೆ.
ಕೆಎನ್ ಬಾಲಗೋಪಾಲ್ ಅನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ:
"ಶಿಕ್ಷಣ ಸಚಿವರು ಮತ್ತು ಕಾನೂನು ಸಚಿವರಂತಹ ಇತರರು ನನ್ನ ಮೇಲೆ ದಾಳಿಯಲ್ಲಿ ತೊಡಗಿದ್ದರೂ, ಅವರು ವೈಯಕ್ತಿಕವಾಗಿ ನನಗೆ ನೋವುಂಟು ಮಾಡುವುದರಿಂದ ಅವರನ್ನು ನಿರ್ಲಕ್ಷಿಸಲು ನಾನು ಬಯಸುತ್ತೇನೆ. ಆದರೆ ಕೆಎನ್ ಬಾಲಗೋಪಾಲ್, ದೇಶದ್ರೋಹದ ಹೇಳಿಕೆಗಳನ್ನು ನಾನು ಗಮನಿಸದಿದ್ದರೆ ಅದು ನನ್ನ ಕಡೆಯಿಂದ ಗಂಭೀರ ಕರ್ತವ್ಯ ಲೋಪವಾಗುತ್ತದೆ," ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಈ ಮನವಿಯನ್ನು ತಕ್ಷಣವೇ ತಿರಸ್ಕರಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಲಾಗಿದೆ. ರಾಜ್ಯಪಾಲರ ಪತ್ರವು ರಾಜಭವನದ ಹೊರಗೆ ರಾಜ್ಯದ ಆಡಳಿತಾರೂಢ ಎಡಪಕ್ಷಗಳ ವಿದ್ಯಾರ್ಥಿ ಘಟಕದ ಪ್ರತಿಭಟನಾ ಮೆರವಣಿಗೆ ಪ್ರೇರೇಪಣೆಯನ್ನು ನೀಡಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications