ಕೇರಳ ಸಚಿವೆ ಶೈಲಜಾಗೆ ಮದರ್ ತೆರೆಸಾ ಪ್ರಶಸ್ತಿ
ನವದೆಹಲಿ, ಡಿಸೆಂಬರ್ 25: ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ, ಡಿಜಿಪಿ ಸಂಜಯ್ ಪಾಂಡೆ, ಅಮೆರಿಕದ ಖ್ಯಾತ ವೈದ್ಯ ಡಾ. ಆಂಥೋನಿ ಫೌಸಿ ಮತ್ತು ಇತರೆ ಅನೇಕ ಜಾಗತಿಕ ವ್ಯಕ್ತಿಗಳು 2020ರ ಪ್ರತಿಷ್ಠಿತ ಮದರ್ ತೆರೆಸಾ ಸ್ಮಾರಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕೋಲ್ಕತಾದ ಮಿಷನರೀಸ್ ಆಫ್ ಚಾರಿಟಿ ಸಂಸ್ಥೆಯು 2005ರಲ್ಲಿ ಈ ಪ್ರಶಸ್ತಿಯನ್ನು ಸ್ಥಾಪಿಸಿತ್ತು. ಈ ವರ್ಷ ಕೋವಿಡ್ 19ರ ನಿಯಂತ್ರಣದ ಹೋರಾಟದಲ್ಲಿ ಗಮನಾರ್ಹ ಕೊಡುಗೆ ನೀಡಿದ ವ್ಯಕ್ತಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಸಕ್ತ ವರ್ಷ 'ಕೋವಿಡ್ ಸಮಯದಲ್ಲಿ ಅನುಕಂಪದ ಸಂಭ್ರಮಾಚರಣೆ' ಥೀಮ್ನಲ್ಲಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ಹಾರ್ಮೊನಿ ಫೌಂಡೇಷನ್ ಅಧ್ಯಕ್ಷ ಅಬ್ರಹಾಂ ಮಥಾಯ್ ಹೇಳಿದ್ದಾರೆ.
ಕೇರಳದ ಆರೋಗ್ಯ ಸಚಿವರಾದ ಕೆ.ಕೆ. ಶೈಲಜಾ (64) ಪರಿಣತರು ಮತ್ತು ವಿಜ್ಞಾನಿಗಳ ಸಲಹೆಗಳನ್ನು ಪಡೆದು ಕೊರೊನಾ ವೈರಸ್ ತಡೆಗೆ ತೆಗೆದುಕೊಂಡ ಕ್ರಮಗಳು ಮತ್ತು ಕೋವಿಡ್ ಭೀತಿಗೆ ಒಳಗಾಗಿದ್ದ ಅಸಂಖ್ಯಾತ ಕೇರಳಿಗರಿಗೆ ಸಹಾಯ ಮಾಡುವ ಮೂಲಕ ಇತರೆ ರಾಜ್ಯಗಳು ಮತ್ತು ದೇಶಗಳಿಗೆ ಮಾದರಿಯಾಗಿದ್ದಾರೆ ಎಂದು ಸಂಸ್ಥೆ ಗುರುತಿಸಿದೆ.

ಬಾಣಸಿಗ ವಿಕಾಸ್ ಖನ್ನಾ (49) ಸೌಲಭ್ಯವಿಲ್ಲದವರು, ಅನಾಥರು, ಕೆಳಸಮುದಾಯದ ಜನರಿಗೆ ಆಹಾರ, ಪಾದರಕ್ಷೆ, ಸ್ಯಾನಿಟರಿ ಪ್ಯಾಡ್ ಮತ್ತು ಮಾಸ್ಕ್ಗಳನ್ನು ಒದಗಿಸುವ ಫೀಡ್ ಇಂಡಿಯಾ ಎಂಬ ಕಾರ್ಯಕ್ರಮವನ್ನು ಶುರುಮಾಡಿದ್ದರು. ಮಹಾರಾಷ್ಟ್ರ ಹೋಮ್ ಗಾರ್ಡ್ ಡಿಜಿಪಿ ಸಂಜಯ್ ಪಾಂಡೆ ಅವರು ಪೊಲೀಸ್ ಅಧಿಕಾರಿಯಾಗಿ ತಮ್ಮ ಕರ್ತವ್ಯದಾಚೆಗೆ, ಮುಂಬೈನಲ್ಲಿ ಲಾಕ್ಡೌನ್ನಿಂದ ಜೀವನೋಪಾಯಕ್ಕೆ ಮಾರ್ಗವಿಲ್ಲದೆ ತತ್ತರಿಸಿದ್ದ ವಲಸೆ ಕಾರ್ಮಿಕರಿಗೆ ಮೊದಲ ಪರಿಹಾರ ಕೇಂದ್ರವನ್ನು ಸ್ಥಾಪಿಸಿದ್ದರು. ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಾಣಾಪಾಯವನ್ನು ಲೆಕ್ಕಿಸದೆ ಇಬ್ಬರು ವಾರ್ಡ್ಬಾಯ್ಗಳ ಜತೆಗೂಡಿ ತಮ್ಮ ಸಹೋದ್ಯೋಗಿಯ ಮೃತದೇಹವನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ತಾವೇ ಗುಂಡಿ ತೋಡಿ ದೇಹಕ್ಕೆ ಸೂಕ್ತ ಅಂತ್ಯಸಂಸ್ಕಾರ ನಡೆಸಿದ ಚೆನ್ನೈನ ಡಾ. ಪ್ರದೀಪ್ ಕುಮಾರ್ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ.
ಇದರ ಜತೆಗೆ ಅಮೆರಿಕದ ವೈದ್ಯ ಡಾ. ಆಂಥೋನಿ ಫೌಸಿ, ಇಟಲಿಯ ಫಾದರ್ ಫೇಬಿಯೊ ಸ್ಟೆವೆನಾಜ್, ಇಟಲಿಯ ಕ್ರಿಸ್ಟಿಯನ್ ಫ್ರಕಾಸ್ಸಿ ಮತ್ತು ಅಲೆಸ್ಸಾಂಡ್ರೊ ರೊಮೈಲಿ ಅವರನ್ನು ಕೂಡ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications