ಕೇರಳ ನರಬಲಿ ಪ್ರಕರಣ: ಮೂವರೂ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ
ಪತ್ತನಂತಿಟ್ಟ ಅಕ್ಟೋಬರ್ 12: ಕೇರಳ ನರಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರೂ ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಕೇರಳದ ಪತ್ತನಂತಿಟ್ಟಾ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ನರಬಲಿಗಾಗಿ ಇಬ್ಬರು ಮಹಿಳೆಯರನ್ನು ಕೊಂದ ಆರೋಪದ ಮೇಲೆ ಮೂವರನ್ನು ಸ್ಥಳೀಯ ನ್ಯಾಯಾಲಯ ಬುಧವಾರ ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಸಂಪತ್ತು ಮತ್ತು ಸಮೃದ್ಧಿ ಪಡೆಯಲು ದಂಪತಿ ಸೇರಿದಂತೆ ಮೂವರು ಕೇರಳದ ದೂರದ ಹಳ್ಳಿಯೊಂದರಲ್ಲಿ ಧಾರ್ಮಿಕ ಕ್ರಿಯೆಯ ಭಾಗವಾಗಿ ಇಬ್ಬರು ಮಹಿಳೆಯರನ್ನು ಬಲಿ ನೀಡಿರುವುದನ್ನು ದಂಪತಿ ಹಾಗೂ ಏಜೆಂಟ್ ಒಪ್ಪಿಕೊಂಡಿದ್ದಾರೆ. ಬಲಿಯಾದ ಪದ್ಮಾ ಮತ್ತು ರೋಸ್ಲಿನ್ ಅವರ ದೇಹದ ಭಾಗಗಳನ್ನು ತುಂಡುಗಳಾಗಿ ಕತ್ತರಿಸಿ ಹಿತ್ತಲಿನಲ್ಲಿ ಹೂಳಲಾಗಿರುವುದು ಬಯಲಾಗಿದೆ. ಮಾಂತ್ರಿಕ ಆಚರಣೆಯ ಭಾಗವಾಗಿ ಗೋಡೆಗಳು ಮತ್ತು ನೆಲದ ಮೇಲೆ ರಕ್ತ ಚೆಲ್ಲಲಾಗಿರುವುದು ಬೆಳಕಿಗೆ ಬಂದಿದೆ. ಜೊತೆಗೆ ದೇಹದ ಕೆಲ ಭಾಗಗಳನ್ನು ಸೇವಿಸಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಎಳಂತೂರಿನಲ್ಲಿ ನಡೆದ ನರಬಲಿ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಬುಧವಾರ (ಅಕ್ಟೋಬರ್ 12) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಮಾಂತ್ರಿಕ ಪೆರುಂಬವೂರು ವೆಂಗೊಳ ವೆಝಾಪಿಲ್ಲಿ ನಿವಾಸಿ ಮುಹಮ್ಮದ್ ಶಾಫಿ (52), ಪತ್ತನಂತಿಟ್ಟ ಎಳಂತೂರ್ ಕರಂವೇಲಿ ಕಡಂಪಲ್ಲಿ ನಿವಾಸಿ ಭಗವಲ್ ಸಿಂಗ್ (68) ಮತ್ತು ಅವರ ಎರಡನೇ ಪತ್ನಿ ಲೈಲಾ ಬಂಧಿತರು. ಮಧ್ಯಾಹ್ನ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಕಾಲಡಿಯಲ್ಲಿ ಬಾಡಿಗೆ ಮನೆಯಲ್ಲಿದ್ದ ರೋಸ್ಲಿ (49) ಮತ್ತು ಧರ್ಮಪುರಿಯ ಪದ್ಮಾ (52) ಕೊಲೆಯಾದವರು. ಜೂನ್ 8 ರಂದು ರಾತ್ರಿ ರೋಸ್ಲಿ ಮತ್ತು ಸೆಪ್ಟೆಂಬರ್ 26 ರಂದು ಪದ್ಮಾ ಹತ್ಯೆಯಾಗಿದ್ದು, ಆರೋಪಿಗಳ ಸಮ್ಮುಖದಲ್ಲಿ ನಿನ್ನೆ ಮೃತದೇಹಗಳನ್ನು ಹೊರತೆಗೆಯಲಾಯಿತು.

ಪದ್ಮಾ ಅವರ ದೇಹವನ್ನು 56 ತುಂಡುಗಳಾಗಿ ಕತ್ತರಿಸಲಾಗಿದ್ದು. ಆಕೆಯ ದೇಹವನ್ನು ಗುರುತಿಸಲು ಮಗನಿಗೆ ಸಾಧ್ಯವಾಗಲಿಲ್ಲ. ರೋಸ್ಲಿ ಅವರ ಅಸ್ಥಿಪಂಜರ ಮಾತ್ರ ಪತ್ತೆಯಾಗಿದೆ. ಆಕೆಯ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಲಾಗಿದೆ. ದೇಹದ ಭಾಗಗಳನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಡಿಎನ್ಎ ಪರೀಕ್ಷೆ ಮುಗಿದ ನಂತರ ಮೃತದೇಹಗಳನ್ನು ಆಕೆಯ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.

ನಂತರ ಎಳಂತೂರಿನ ಭಗವಾಲ್ ಸಿಂಗ್ ಅವರ ಮನೆಯಿಂದ ಸಾಕ್ಷ್ಯ ಸಂಗ್ರಹಿಸಲಾಗುವುದು. ವಿಧಿವಿಜ್ಞಾನ ತಂಡ ಹಾಗೂ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ. ಘಟನೆಯಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ವಿವರವಾಗಿ ತನಿಖೆ ನಡೆಸಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications