ಕೇರಳದ ಪತ್ರಕರ್ತನನ್ನು ಬಂಧಿಸಿದ ಎನ್ಐಎ
ತಿರುವನಂತಪುರಂ, ಜನವರಿ 18: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೇರಳದ ಕೊಲ್ಲಂ ಜಿಲ್ಲೆಯಿಂದ ಪತ್ರಕರ್ತ ಒಬ್ಬರನ್ನು ಬಂಧಿಸಿದೆ.
ಕೊಲ್ಲಂನ ಸ್ಥಳದಲ್ಲಿ ಭಯೋತ್ಪಾದನಾ ನಿಗ್ರಹ ಸಂಸ್ಥೆ ನಡೆಸಿದ ಶೋಧ ಕಾರ್ಯಾಚರಣೆಯ ನಂತರ ಪಿಎಫ್ಐನ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಸಾದಿಕ್ನನ್ನು ಬಂಧಿಸಲಾಗಿದೆ ಎಂದು ಎನ್ಐಎ ತಿಳಿಸಿದೆ.
ಆರೋಪಿ ಮೊಹಮ್ಮದ್ ಸಾದಿಕ್ಗೆ ಪಿಎಫ್ಐ ವರದಿಗಾರ ಹುದ್ದೆಯನ್ನು ನಿಯೋಜಿಸಿದೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಎನ್ಐಎ ಹೇಳಿದೆ. ಪಿಎಫ್ಐ ವ್ಯವಸ್ಥೆಯಲ್ಲಿನ ವರದಿಗಾರ ಇತರ ಸಮುದಾಯದ ಮುಖಂಡರನ್ನು ಗುರಿಯಾಗಿಸಿ ವಿವರಗಳನ್ನು ಆತ ಸಂಗ್ರಹಿಸುತಿದ್ದ ಎಂದು ತಿಳಿಸಿದೆ.

ಕೇರಳದಲ್ಲಿ ಪಿಎಫ್ಐ, ಅದರ ಪದಾಧಿಕಾರಿಗಳು, ಸದಸ್ಯರು ಮತ್ತು ಅಂಗಸಂಸ್ಥೆಗಳ ಚಟುವಟಿಕೆಗಳಿಗೆ ಸಂಬಂಧಿಸಿದ ಶೋಧದ ನಂತರ ಆರೋಪಿಯನ್ನು ಬಂಧಿಸಲಾಯಿತು. ವಿವಿಧ ಧರ್ಮಗಳ ಸದಸ್ಯರು ಮತ್ತು ಶಾಂತಿ ಮತ್ತು ಕೋಮು ಸೌಹಾರ್ದತೆ ಕಾಪಾಡಲು ದುಷ್ಪರಿಣಾಮ ಬೀರುವ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸುವ ಮೂಲಕ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಹಿಂಸಾತ್ಮಕ ಜಿಹಾದ್ನ ಭಾಗವಾಗಿ ಯುವಕರನ್ನು ಲಷ್ಕರ್-ಎ-ತೈಬಾ (ಎಲ್ಇಟಿ), ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ಐಎಸ್ಐಎಸ್)/ದೈಶ್ ಮತ್ತು ಅಲ್-ಖೈದಾ ಸೇರಿದಂತೆ ಭಯೋತ್ಪಾದಕ ಸಂಘಟನೆಗಳಿಗೆ ಸೇರಲು ಪ್ರೋತ್ಸಾಹಿಸುವುದು ಮತ್ತು ಭಯೋತ್ಪಾದಕ ಕೃತ್ಯವನ್ನು ಮಾಡುವ ಮೂಲಕ ಭಾರತದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಜನರು ಸಂಚು ರೂಪಿಸುತ್ತಿದ್ದಾರೆ ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರಕರಣವನ್ನು ಎನ್ಐಎ ಕೊಚ್ಚಿ ಮೂಲದ ಶಾಖೆಯು ಸೆಪ್ಟೆಂಬರ್ 19, 2022 ರಂದು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದೆ. ಶೋಧದ ಸಮಯದಲ್ಲಿ, ಆರೋಪಿಯ ಮನೆಯಿಂದ ಡಿಜಿಟಲ್ ಸಾಧನಗಳು ಮತ್ತು ಹಲವಾರು ದೋಷಾರೋಪಣೆ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.











Click it and Unblock the Notifications