ಕತುವಾ ರೇಪ್ ಸಂತ್ರಸ್ತೆ ಪರ ನಿಂತ ಕೇರಳ ಲೆಕ್ಚರರ್ ಗೆ ಬಿಜೆಪಿಯಿಂದ ಬೆದರಿಕೆ
ತಿರುವನಂತಪುರಂ, ಮೇ 01: ಕತುವಾ ಅತ್ಯಾಚಾರ ಸಂತ್ರಸ್ತೆ ಪರ ಫೇಸ್ ಬುಕ್ ನಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಪೋಸ್ಟ್ ಮಾಡಿದ ತ್ರಿಸ್ಸೂರು ಮೂಲದ ಉಪನ್ಯಾಸಕಿ ದೀಪಾ ನಿಶಾಂತ್ ಗೆ ಬೆದರಿಕೆ ಕರೆಗಳು ಬಂದಿವೆ. ಬಿಜೆಪಿ ಕಾರ್ಯಕರ್ತರಿಂದ ಬೆದರಿಕೆ ಕರೆಗಳು ಬಂದಿದೆ ಎಂದು ರಕ್ಷಣೆ ಕೋರಿ, ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಶ್ರೀಕೇರಳ ವರ್ಮಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ದೀಪಾ ಅವರು, ತಮಗೆ ಬಂದಿರುವ ಬೆದರಿಕೆ ಕರೆ, ಸಂದೇಶಗಳ ಸ್ಕ್ರೀನ್ ಶಾಟ್ ತೆಗೆದುಕೊಂಡು, ಪೊಲೀಸರಿಗೆ ಸಲ್ಲಿಸಿದ್ದಾರೆ.
ದೂರಿನಲ್ಲಿ ಏನಿದೆ?: ಬಿಜೆಪಿ ಮುಖಂಡ ಟಿಜಿ ಮೋಹನ್ ದಾಸ್ ಹಾಗೂ ಅವರ ಬೆಂಬಲಿಗರು ನನ್ನ ವಿರುದ್ಧ ಅಭಿಯಾನ ನಡೆಸುತ್ತಿದ್ದು, ಸಾಮಾಜಿಕ ಜಾಲ ತಾಣಗಳಲ್ಲಿ ನನ್ನ ಫೋನ್ ನಂಬರ್ ಹಂಚಿಕೊಂಡು, ನನ್ನನ್ನು ಹೀಯಾಳಿಸಿ, ಅವಮಾನಿಸುವಂತೆ ಕರೆ ನೀಡಿದ್ದಾರೆ. ನನ್ನ ವಿಳಾಸವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈಯಕ್ತಿಕವಾಗಿ ಗುರಿಯನ್ನಾಗಿಸಿಕೊಂಡು ನನಗೆ ಬೆದರಿಕೆ ಹಾಕಲಾಗುತ್ತಿದೆ ಎಂದಿದ್ದಾರೆ.

'ಈಕೆ ತನ್ನ ಮಿತಿ ಮೀರಿದ್ದಾಳೆ. ಇವಳ ರಕ್ತ ಬೇಕಿದೆ' ಬಹರೇನ್ ನಿಂದ ಬಿಜೆಪಿ ಬೆಂಬಲಿಗ ರಮೇಶ್ ನಾಯರ್ ಎಂಬುವರು ಬೆದರಿಕೆ ಹಾಕಿದ್ದಾರೆ. ಇದಕ್ಕೆ ಸಾಕಷ್ಟು ಬೆಂಬಲ ವ್ಯಕ್ತವಾಗಿದೆ.
ಬೆಂಗಳೂರು ಮೂಲದ ದೀಪಕ್ ಶಂಕರನಾರಾಯಣನ್ ಎಂಬ ಐಟಿ ಉದ್ಯೋಗಿ ಅವರು ಕತುವಾ ಅತ್ಯಾಚಾರ ಹಾಗೂ ಸರಣಿ ರೇಪ್ ಪ್ರಕರಣಗಳನ್ನು ಖಂಡಿಸಿ . ಕಾಶ್ಮೀರದ ಬಾಲಕಿಗೆ ನ್ಯಾಯ ಸಿಗಬೇಕಿದೆ ಎಂದು ಹಾಕಿದ್ದ ಪೋಸ್ಟ್ ಪರ ದೀಪಾ ಅವರು ನಿಂತಿದ್ದರು.
ಶೇ 31ರಷ್ಟು ಮತ ಪಡೆದವರಿಗೆ ಈ ಹೀನಕೃತ್ಯದ ಬಗ್ಗೆ ಗೊತ್ತಿರಬೇಕು ಎಂದು ದೀಪಕ್ ಹಾಕಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಶೇಕಡಾವಾರು ಮತ ಗಳಿಕೆ ಶೇ31ರಷ್ಟಿತ್ತು. ಹೀಗಾಗಿ, ದೀಪಕ್ ವಿರುದ್ಧ ತಿರುವನಂತಪುರಂ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications