ಹಲ್ಲೆ, ಕಿರುಕುಳದ ಬಗ್ಗೆ ಕೊನೆಗೂ ಮೌನ ಮುರಿದ ನಟಿ
ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮಾನಸಿಕ, ದೈಹಿಕ ಕಿರುಕುಳ ಅನುಭವಿಸಿದ ಎರಡುವಾರಗಳ ಬಳಿಕ ಮಲಯಾಳಂ ನಟಿ ತಮ್ಮ ನೋವು ತೋಡಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಫ್ರೊಫೈಲ್ ನಲ್ಲಿ ಈ ದುರ್ಘಟನೆ ಬಗ್ಗೆ ಬರೆದುಕೊಂಡಿದ್ದಾರೆ.
ತಿರುವನಂತಪುರಮ್, ಫೆಬ್ರವರಿ 28: ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮಾನಸಿಕ, ದೈಹಿಕ ಕಿರುಕುಳ ಅನುಭವಿಸಿದ ಎರಡುವಾರಗಳ ಬಳಿಕ ಮಲಯಾಳಂ ನಟಿ ತಮ್ಮ ನೋವು ತೋಡಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಫ್ರೊಫೈಲ್ ನಲ್ಲಿ ಈ ದುರ್ಘಟನೆ ಬಗ್ಗೆ ಬರೆದುಕೊಂಡಿದ್ದಾರೆ.
ಘಟನೆ ಬಳಿಕ ಎಲ್ಲೂ ಕಾಣಿಸಿಕೊಳ್ಳದೆ ನೋವು ಅನುಭವಿಸಿದ್ದ ನಟಿ ಈಗ ಸಾಮಾಜಿಕ ಜಾಲ ತಾಣ ಇನ್ಸ್ಟಾ ಗ್ರಾಮ್ ನಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮತ್ತೆ ಶೂಟಿಂಗಿಗೆ ಹಾಜರಾಗಿರುವ ನಟಿ, ನನಗೆ ಎದುರಾಗುವ ಎಲ್ಲಾ ಸವಾಲು, ಸಮಸ್ಯೆಯನ್ನು ಧೈರ್ಯದಿಂದ ಎದುರಿಸುತ್ತೇನೆ ಎಂದಿದ್ದಾರೆ.[ನಟಿ ಮೇಲೆ ಹಲ್ಲೆ ಪ್ರಕರಣ, ಪಲ್ಸರ್ ಸುನಿ ಮೊಬೈಲ್ ಎಲ್ಲಿ?]
'Life has knocked me down a few times, it showed me things I never even imagined. But I could face all those and will overcome in the future as well' ಎಂದು ಬರೆದುಕೊಂಡಿದ್ದಾರೆ.

ಈ ನಡುವೆ ಪೊಲೀಸ್ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿರುವ ನಟಿ, ನಾಲ್ವರನ್ನು ಗುರುತಿಸಿದ್ದಾರೆ. ನಾಲ್ವರು ಕೂಡಾ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳಾಗಿದ್ದು, ತನಿಖೆ ಮುಂದುವರೆದಿದೆ. ಪ್ರಮುಖ ಆರೋಪಿ ಪಲ್ಸರ್ ಸುನಿ ಹಾಗೂ ವಿಜೇಶ್ ನನ್ನು ಕೊಯಮತ್ತೂರಿಗೆ ಕರೆದೊಯ್ದಿರುವ ಕೇರಳ ಪೊಲೀಸರು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಆದರೆ, ದುಷ್ಜೃತ್ಯವನ್ನು ಸೆರೆ ಹಿಡಿದ ಮೊಬೈಲ್ ಫೋನ್ ಇನ್ನೂ ಪತ್ತೆಯಾಗಿಲ್ಲ.[ಮಲಯಾಳಿ ನಟಿ ದೌರ್ಜನ್ಯ : ಪಲ್ಸರ್ ಸುನಿಯನ್ನು ಬಂಧಿಸಿದ್ದು ಹೇಗೆ?]
ನಟಿಯ ಧೈರ್ಯವನ್ನು ಮೆಚ್ಚಿರುವ ಕೇರಳ ಚಿತ್ರರಂಗ ಆಕೆಯ ಬೆಂಬಲಕ್ಕೆ ನಿಂತಿದೆ. ನಟ ಪೃಥ್ವಿರಾಜ್, ಅಂಜಲಿ ಮೆನನ್, ಮಂಜು ವಾರಿಯರ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ನಟಿಯ ಬೆಂಬಲಿಸಿ, ಸಾಮಾಜಿಕ ಜಾಲ ತಾಣಗಳಲ್ಲಿ ಜಾಗೃತಿ ಮೂಡಿಸಿದ್ದಾರೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications