ಹಲ್ಲೆ, ಕಿರುಕುಳದ ಬಗ್ಗೆ ಕೊನೆಗೂ ಮೌನ ಮುರಿದ ನಟಿ
ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮಾನಸಿಕ, ದೈಹಿಕ ಕಿರುಕುಳ ಅನುಭವಿಸಿದ ಎರಡುವಾರಗಳ ಬಳಿಕ ಮಲಯಾಳಂ ನಟಿ ತಮ್ಮ ನೋವು ತೋಡಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಫ್ರೊಫೈಲ್ ನಲ್ಲಿ ಈ ದುರ್ಘಟನೆ ಬಗ್ಗೆ ಬರೆದುಕೊಂಡಿದ್ದಾರೆ.
ತಿರುವನಂತಪುರಮ್, ಫೆಬ್ರವರಿ 28: ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮಾನಸಿಕ, ದೈಹಿಕ ಕಿರುಕುಳ ಅನುಭವಿಸಿದ ಎರಡುವಾರಗಳ ಬಳಿಕ ಮಲಯಾಳಂ ನಟಿ ತಮ್ಮ ನೋವು ತೋಡಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಫ್ರೊಫೈಲ್ ನಲ್ಲಿ ಈ ದುರ್ಘಟನೆ ಬಗ್ಗೆ ಬರೆದುಕೊಂಡಿದ್ದಾರೆ.
ಘಟನೆ ಬಳಿಕ ಎಲ್ಲೂ ಕಾಣಿಸಿಕೊಳ್ಳದೆ ನೋವು ಅನುಭವಿಸಿದ್ದ ನಟಿ ಈಗ ಸಾಮಾಜಿಕ ಜಾಲ ತಾಣ ಇನ್ಸ್ಟಾ ಗ್ರಾಮ್ ನಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮತ್ತೆ ಶೂಟಿಂಗಿಗೆ ಹಾಜರಾಗಿರುವ ನಟಿ, ನನಗೆ ಎದುರಾಗುವ ಎಲ್ಲಾ ಸವಾಲು, ಸಮಸ್ಯೆಯನ್ನು ಧೈರ್ಯದಿಂದ ಎದುರಿಸುತ್ತೇನೆ ಎಂದಿದ್ದಾರೆ.[ನಟಿ ಮೇಲೆ ಹಲ್ಲೆ ಪ್ರಕರಣ, ಪಲ್ಸರ್ ಸುನಿ ಮೊಬೈಲ್ ಎಲ್ಲಿ?]
'Life has knocked me down a few times, it showed me things I never even imagined. But I could face all those and will overcome in the future as well' ಎಂದು ಬರೆದುಕೊಂಡಿದ್ದಾರೆ.

ಈ ನಡುವೆ ಪೊಲೀಸ್ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿರುವ ನಟಿ, ನಾಲ್ವರನ್ನು ಗುರುತಿಸಿದ್ದಾರೆ. ನಾಲ್ವರು ಕೂಡಾ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳಾಗಿದ್ದು, ತನಿಖೆ ಮುಂದುವರೆದಿದೆ. ಪ್ರಮುಖ ಆರೋಪಿ ಪಲ್ಸರ್ ಸುನಿ ಹಾಗೂ ವಿಜೇಶ್ ನನ್ನು ಕೊಯಮತ್ತೂರಿಗೆ ಕರೆದೊಯ್ದಿರುವ ಕೇರಳ ಪೊಲೀಸರು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಆದರೆ, ದುಷ್ಜೃತ್ಯವನ್ನು ಸೆರೆ ಹಿಡಿದ ಮೊಬೈಲ್ ಫೋನ್ ಇನ್ನೂ ಪತ್ತೆಯಾಗಿಲ್ಲ.[ಮಲಯಾಳಿ ನಟಿ ದೌರ್ಜನ್ಯ : ಪಲ್ಸರ್ ಸುನಿಯನ್ನು ಬಂಧಿಸಿದ್ದು ಹೇಗೆ?]
ನಟಿಯ ಧೈರ್ಯವನ್ನು ಮೆಚ್ಚಿರುವ ಕೇರಳ ಚಿತ್ರರಂಗ ಆಕೆಯ ಬೆಂಬಲಕ್ಕೆ ನಿಂತಿದೆ. ನಟ ಪೃಥ್ವಿರಾಜ್, ಅಂಜಲಿ ಮೆನನ್, ಮಂಜು ವಾರಿಯರ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ನಟಿಯ ಬೆಂಬಲಿಸಿ, ಸಾಮಾಜಿಕ ಜಾಲ ತಾಣಗಳಲ್ಲಿ ಜಾಗೃತಿ ಮೂಡಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications