ಅತ್ಯಾಚಾರ ಆರೋಪಿ ಫ್ರಾಂಕೋ ಮುಳಕ್ಕಲ್ ಪೊಲೀಸ್ ಕಸ್ಟಡಿಗೆ
ತಿರುವನಂತಪುರಂ, ಸೆಪ್ಟೆಂಬರ್ 22 : ಕ್ರೈಸ್ತ ಸನ್ಯಾಸಿನಿಯ ಮೇಲೆ ಎರಡು ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಹೊತ್ತಿರುವ ಕೇರಳ ಮೂಲದ, ಜಲಂಧರ್ ಡಯೋಸೀಸ್ ನ ಮಾಜಿ ಬಿಷಪ್ ಫ್ರಾಂಕೋ ಮುಳಕ್ಕಲ್ ನನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ನೀಡಿದೆ.
54 ವರ್ಷದ ಮಾಜಿ ಬಿಷಪ್ ಫ್ರಾಂಕೋ ಮುಳಕ್ಕಲ್ ಪರವಾಗಿ ವಾದಿಸುತ್ತಿರುವ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆತನನ್ನು ಸೋಮವಾರ 2.30ಕ್ಕೆ ಮತ್ತೆ ಹಾಜರು ಪಡಿಸುವಂತೆ ಆದೇಶಿಸಲಾಗಿದೆ.
44 ವರ್ಷದ ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಹೊತ್ತಿರುವ ಫ್ರಾಂಕೋ ಮುಳಕ್ಕಲ್ ಬಂಧನ ತಪ್ಪಿಸಿಕೊಳ್ಳಲು ಭಾರೀ ಪ್ರಯತ್ನ ನಡೆಸಿದ್ದ. ಶನಿವಾರ ಬೆಳಿಗ್ಗೆ ತನಗೆ ಎದೆ ನೋಯಿಸುತ್ತಿದೆ ಎಂದು ಆಸ್ಪತ್ರೆಗೆ ದಾಖಲಾಗಲು ಯತ್ನಿಸಿದ್ದ. ಆದರೆ, ತಪಾಸಣೆಯ ನಂತರ ಆತನಿಗೆ ಏನೂ ಆಗಿಲ್ಲವೆಂದು ವೈದ್ಯರು ಹೇಳಿದರು.

ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ರಿಮಾಂಡ್ ವರದಿಯಲ್ಲಿ, ಆತ ಅತ್ಯಾಚಾರ ನಡೆಸುವ ಉದ್ದೇಶದಿಂದಲೇ ಕಾನ್ವೆಂಟ್ ನ ರೂಂ ನಂಬರ್ 20ರಲ್ಲಿ ತಂಗಿದ್ದ. 10.48ರ ಸುಮಾರಿಗೆ ಸಂತ್ರಸ್ತ ಕ್ರೈಸ್ತ ಸನ್ಯಾಸಿನಿಯನ್ನು ತನ್ನ ರೂಮಿಗೆ ಕರೆಯಿಸಿಕೊಂಡು ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಹೇಳಲಾಗಿದೆ.
ಆ ಘಟನೆಯ ಬಗ್ಗೆ ಯಾರಿಗಾದರೂ ಬಾಯಿಬಿಟ್ಟರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಸನ್ಯಾಸಿನಿಗೆ ಬಿಷಪ್ ಫ್ರಾಂಕೋ ಬೆದರಿಕೆ ಒಡ್ಡಿದ್ದ. ಈ ಘಟನೆ ನಡೆದಿದ್ದು 2014ರ ಮೇಲ 5ರಂದು. ನಂತರ ಮೇ 6ರಂದೂ ಆತ ಕ್ರೈಸ್ತ ಸನ್ಯಾಸಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇಷ್ಟು ಸಾಲದೆಂಬಂತೆ, 2014ರಿಂದ 2016ರೊಳಗೆ ಕ್ರೈಸ್ತ ಸನ್ಯಾಸಿನಿಯನ್ನು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಲ್ಲದೆ 13 ಬಾರಿ ಅತ್ಯಾಚಾರವನ್ನೂ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಸಲ್ಲಿಸಿರುವ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿದ ನ್ಯಾಯಾಲಯ, ಇದು ಗಂಭೀರ ಪ್ರಕರಣವಾಗಿದ್ದು, ಆರೋಪಿ ಫ್ರಾಂಕೋ ಸಾಕ್ಷಿ ನಾಶಮಾಡಬಹುದು ಎಂಬ ಕಾರಣದಿಂದ ಜಾಮೀನನ್ನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಮೂರು ತಿಂಗಳ ಹಿಂದೆ, ತಮ್ಮ ಮೇಲೆ ಅತ್ಯಾಚಾರವಾಗಿದೆ ಎಂದು ಕ್ರೈಸ್ತ ಸನ್ಯಾಸಿನಿ ದೂರು ನೀಡಿದ್ದರು. ರಾಜ್ಯಾದ್ಯಂತ ಫ್ರಾಂಕೋ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಬಂಧನವಾಗಿದ್ದು ಮತ್ತು ಜಾಮೀನು ನಿರಾಕರಿಸಿ ಜೈಲಿಗೆ ತಳ್ಳಿದ್ದು ಮೊದಲ ಜಯ ಸಿಕ್ಕಂತಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications