ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ ವಿದೇಶದಲ್ಲಿ ಮರಣದಂಡನೆ: ಸದ್ಯದ ಅಪ್ಡೇಟ್ ಏನು?
ಯೆಮನ್ ಪ್ರಜೆಯೊಬ್ಬನ ಹತ್ಯೆ ಮಾಡಿದ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೊಳಗಾಗಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಸಾಧ್ಯವಾದ ರೀತಿಯಲ್ಲಿ ಎಲ್ಲಾ ಸಹಾಯವನ್ನು ನೀಡುತ್ತಿದ್ದೇವೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಯೆಮನ್ ಪ್ರಜೆಯೊಬ್ಬನ ಕೊಲೆ ಮಾಡಿದ ಪ್ರಕರಣದಲ್ಲಿ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ವಿಧಿಸಲಾಗಿದ್ದು, ಇನ್ನು ಒಂದು ತಿಂಗಳ ಒಳಗೆ ಅವರಿಗೆ ಶಿಕ್ಷೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಹಾಯಕ್ಕೆ ಮುಂದಾಗಿದೆ.
ಈ ಬಗ್ಗೆ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದು, 'ಯೆಮೆನ್ನಲ್ಲಿ ಶ್ರೀಮತಿ ನಿಮಿಷಾ ಪ್ರಿಯಾ ಅವರಿಗೆ ಶಿಕ್ಷೆ ವಿಧಿಸುವ ಬಗ್ಗೆ ನಮಗೆ ತಿಳಿದಿದೆ. ಪ್ರಿಯಾ ಅವರ ಕುಟುಂಬವು ಸಂಬಂಧಿತ ಆಯ್ಕೆಗಳನ್ನು ಕಂಡುಕೊಳ್ಳುತ್ತಿದೆ. ಈ ವಿಷಯದಲ್ಲಿ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ'ಎಂದು ಹೇಳಿದ್ದಾರೆ.

ಯೆಮೆನ್ ಪ್ರಜೆಯನ್ನು ಕೊಲೆ ಮಾಡಿದ ಆರೋಪದ ಮೇಲೆ 2017ರಿಂದ ನಿಮಿಷಾ ಯೆಮೆನ್ನಲ್ಲಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಕುಟುಂಬಸ್ಥರು ಆಕೆಯ ಬಿಡುಗಡೆಗೆ ಎಷ್ಟೇ ಪ್ರಯತ್ನಪಟ್ಟರೂ ಸಹ ಸಾಧ್ಯವಾಗುತ್ತಿಲ್ಲ. ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಜೈಲಿನಿಂದ ಹೊರತರುವುದು ಅಥವಾ ಶಿಕ್ಷೆಯಿಂದ ತಪ್ಪಿಸುವುದು ಕಷ್ಟ ಎಂದು ವರದಿಯಾಗಿದೆ.
ಪ್ರಕರಣದ ಹಿನ್ನೆಲೆ ಏನು?
ಕೇರಳ ಮೂಲಕದ ನಿಮಿಷಾ ಪ್ರಿಯಾ 2011ರಲ್ಲಿ ಯೆಮೆನ್ಗೆ ತೆರಳಿದರು. ನಿಮಿಷಾ ಪ್ರಿಯಾ ಯೆಮೆನ್ನ ಸನಾದಲ್ಲಿ ಕ್ಲಿನಿಕ್ವೊಂದನ್ನು ಸ್ಥಾಪಿಸಲು ಮುಂದಾಗಿದ್ದರು. ಈ ವೇಳೆ ಅಲ್ಲಿನ ಪ್ರಜೆ ಮಹದಿ ಎನ್ನುವಾತನ ಸಹಾಯ ಪಡೆದು, ಆತನ ಪಾಲುದಾರಿಕೆಯಲ್ಲೇ ಕ್ಲಿನಿಕ್ ಆರಂಭಿಸಿದರು. ಯೆಮೆನ್ ಕಾನೂನಿನ ಪ್ರಕಾರ ವಿದೇಶಿ ಪ್ರಜೆಗಳು ಸ್ಥಳೀಯ ಪಾಲುದಾರಿಗೆಯನ್ನು ಹೊಂದಿರಬೇಕು. ಈ ವಿಚಾರವೇ ನಿಮಿಷಾ ಪ್ರಿಯಾ ಮಹದಿಯ ಸಹಾಯ ಪಯಲು ಪ್ರಮುಖ ಕಾರಣವಾಯಿತು.
ಮೊದಮೊದಲು ಚೆನ್ನಾಗಿದ್ದ ನಿಮಿಷಾ ಪ್ರಿಯಾ ಹಾಗೂ ಮಹದಿ ಸಂಬಂಧ ಬರಬರುತ್ತಾ ಹದಗೆಟ್ಟಿದ್ದು, ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ಜೋರಾಯಿತು. ನಂತರ ಮಹದಿ ಆಕೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಲ್ಲೇ ಆಕೆಯ ಪಾಸ್ಪೋರ್ಟ್ ಪಡೆದುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ವಾಪಸ್ ಭಾರತಕ್ಕೂ ಮರಳಲು ಆಗದೇ ಆತನ ಕಿರುಕುಳ ಸಹಿಸಲು ಆಗದೇ ರೋಸಿ ಹೋಗಿದ್ದ ನಿಮಿಷಾ ಪ್ರಿಯಾ ಅಮಲು ಚುಚ್ಚುಮದ್ದು ನೀಡಿ ಆತನನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಿಮಿಷಾ ಪ್ರಿಯಾಗೆ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಇದೀಗ ಈ ಶಿಕ್ಷೆಗೆ ಯೆಮನ್ ಅಧ್ಯಕ್ಷರು ಕೂಡ ಅಧಿಕೃತ ಮುದ್ರೆಯೊತ್ತಿದ್ದಾರೆ ಎಂದು ತಿಳಿದು ಬಂದಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications