ಅಪ್ರಾಪ್ತೆ ಮೇಲೆ ರೇಪ್, ಕೇರಳದ ಪಾದ್ರಿಗೆ 40 ವರ್ಷ ಜೈಲು
ತ್ರಿಶ್ಶೂರ್, ಮಾ.02: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 35 ವರ್ಷ ವಯಸ್ಸಿನ ಪಾದ್ರಿಯೊಬ್ಬರಿಗೆ 40 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮಂಗಳವಾರ (ಮಾರ್ಚ್ 01) ಆದೇಶ ಹೊರಡಿಸಿದೆ.
ಪೀಚಿ ಎಂಬ ಪ್ರದೇಶದಲ್ಲಿರುವ ಸಾಲ್ವೇಷನ್ ಆರ್ಮಿ ಚರ್ಚ್ನ ಪಾದ್ರಿಯೊಬ್ಬರು 12 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಜಡ್ಜ್ ಕೆಪಿ ಸುಧೀರ್ ಅವರು ಚರ್ಚ್ ನ ಪಾಸ್ಟರ್ ಸಾನಿಲ್ ಕೆ ಜೇಮ್ಸ್ ಅವರಿಗೆ 40 ವರ್ಷ ಶಿಕ್ಷೆ ಪ್ರಕಟಿಸಿದ್ದಾರೆ.

Protection of Children From Sexual Offences (ಪೋಕ್ಸೊ) ಕಾಯ್ದೆಯ ಅನ್ವಯ ದಾಖಲಾದ ಪ್ರಕರಣ ಇದಾಗಿತ್ತು. ಹೀಗಾಗಿ ಶಿಕ್ಷೆ ಪ್ರಮಾಣ ಹೆಚ್ಚಳ ವಾಗಿದೆ. ಆರೋಪಿಗೆ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಜತೆಗೆ ಸಂತ್ರಸ್ತ ಬಾಲಕಿಗೆ ಸಂತ್ರಸ್ತ ಪರಿಹಾರ ನಿಧಿಯಿಂದ ಮೂರು ಲಕ್ಷ ರೂಪಾಯಿ ಪರಿಹಾರ ಧನ ನೀಡುವಂತೆ ಕೇರಳ ಸರ್ಕಾರಕ್ಕೆ ಕೋರ್ಟ್ ಆದೇಶಿಸಿದೆ.
ಕೊಟ್ಟಾಯಂನ ನೆಡುಂಕಡಂನ ಸಾನಿಲ್ ಕೆ.ಜೇಮ್ಸ್ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 376 (2) ಎಫ್ ಅನ್ವಯ ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್ 4 ಮತ್ತು 5ರ ಅನ್ವಯ ಪ್ರಕರಣ ದಾಖಲಾಗಿತ್ತು.
ಐಪಿಸಿ ಕಾಯ್ದೆ ಅನ್ವಯ 20 ವರ್ಷ ಹಾಗೂ ಪೋಕ್ಸೊ ಕಾಯ್ದೆಯಡಿ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಪೋಕ್ಸೊ ಕಾಯ್ದೆಯಡಿ ಇಂಥ ಕಠಿಣ ಶಿಕ್ಷೆ ವಿಧಿಸಿರುವುದು ಇದೇ ಮೊದಲು ಎಂದು ವಿಶೇಷ ಸರ್ಕಾರಿ ವಕೀಲ ಪಿಯಾಸ್ ಮ್ಯಾಥ್ಯೂ ಹೇಳಿದ್ದಾರೆ.
2014ರ ಏಪ್ರಿಲ್ನಲ್ಲಿ ತನ್ನ ಅಧಿಕೃತ ನಿವಾಸದಲ್ಲಿ ಅತ್ಯಾಚಾರ ಮಾಡಿದ್ದ ಎಂದು ಆರೋಪಿಸಲಾಗಿತ್ತು.ಸಂತ್ರಸ್ತ ಬಾಲಕಿ, ಸಹೋದರ ಹಾಗೂ ಆರೋಪಿಯ ಮಗ ಒಟ್ಟಿಗೆ ಬೇಸಿಗೆ ರಜೆ ಕಳೆಯುವಾಗ ಈ ಕೃತ್ಯ ನಡೆದಿದೆ. ಪಾಸ್ಟರ್ ಮೇಲೆ ಇನ್ನೂ ಕೆಲ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. (ಪಿಟಿಐ)
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications