ಅಪ್ರಾಪ್ತೆ ಮೇಲೆ ರೇಪ್, ಕೇರಳದ ಪಾದ್ರಿಗೆ 40 ವರ್ಷ ಜೈಲು
ತ್ರಿಶ್ಶೂರ್, ಮಾ.02: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 35 ವರ್ಷ ವಯಸ್ಸಿನ ಪಾದ್ರಿಯೊಬ್ಬರಿಗೆ 40 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮಂಗಳವಾರ (ಮಾರ್ಚ್ 01) ಆದೇಶ ಹೊರಡಿಸಿದೆ.
ಪೀಚಿ ಎಂಬ ಪ್ರದೇಶದಲ್ಲಿರುವ ಸಾಲ್ವೇಷನ್ ಆರ್ಮಿ ಚರ್ಚ್ನ ಪಾದ್ರಿಯೊಬ್ಬರು 12 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಜಡ್ಜ್ ಕೆಪಿ ಸುಧೀರ್ ಅವರು ಚರ್ಚ್ ನ ಪಾಸ್ಟರ್ ಸಾನಿಲ್ ಕೆ ಜೇಮ್ಸ್ ಅವರಿಗೆ 40 ವರ್ಷ ಶಿಕ್ಷೆ ಪ್ರಕಟಿಸಿದ್ದಾರೆ.

Protection of Children From Sexual Offences (ಪೋಕ್ಸೊ) ಕಾಯ್ದೆಯ ಅನ್ವಯ ದಾಖಲಾದ ಪ್ರಕರಣ ಇದಾಗಿತ್ತು. ಹೀಗಾಗಿ ಶಿಕ್ಷೆ ಪ್ರಮಾಣ ಹೆಚ್ಚಳ ವಾಗಿದೆ. ಆರೋಪಿಗೆ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಜತೆಗೆ ಸಂತ್ರಸ್ತ ಬಾಲಕಿಗೆ ಸಂತ್ರಸ್ತ ಪರಿಹಾರ ನಿಧಿಯಿಂದ ಮೂರು ಲಕ್ಷ ರೂಪಾಯಿ ಪರಿಹಾರ ಧನ ನೀಡುವಂತೆ ಕೇರಳ ಸರ್ಕಾರಕ್ಕೆ ಕೋರ್ಟ್ ಆದೇಶಿಸಿದೆ.
ಕೊಟ್ಟಾಯಂನ ನೆಡುಂಕಡಂನ ಸಾನಿಲ್ ಕೆ.ಜೇಮ್ಸ್ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 376 (2) ಎಫ್ ಅನ್ವಯ ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್ 4 ಮತ್ತು 5ರ ಅನ್ವಯ ಪ್ರಕರಣ ದಾಖಲಾಗಿತ್ತು.
ಐಪಿಸಿ ಕಾಯ್ದೆ ಅನ್ವಯ 20 ವರ್ಷ ಹಾಗೂ ಪೋಕ್ಸೊ ಕಾಯ್ದೆಯಡಿ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಪೋಕ್ಸೊ ಕಾಯ್ದೆಯಡಿ ಇಂಥ ಕಠಿಣ ಶಿಕ್ಷೆ ವಿಧಿಸಿರುವುದು ಇದೇ ಮೊದಲು ಎಂದು ವಿಶೇಷ ಸರ್ಕಾರಿ ವಕೀಲ ಪಿಯಾಸ್ ಮ್ಯಾಥ್ಯೂ ಹೇಳಿದ್ದಾರೆ.
2014ರ ಏಪ್ರಿಲ್ನಲ್ಲಿ ತನ್ನ ಅಧಿಕೃತ ನಿವಾಸದಲ್ಲಿ ಅತ್ಯಾಚಾರ ಮಾಡಿದ್ದ ಎಂದು ಆರೋಪಿಸಲಾಗಿತ್ತು.ಸಂತ್ರಸ್ತ ಬಾಲಕಿ, ಸಹೋದರ ಹಾಗೂ ಆರೋಪಿಯ ಮಗ ಒಟ್ಟಿಗೆ ಬೇಸಿಗೆ ರಜೆ ಕಳೆಯುವಾಗ ಈ ಕೃತ್ಯ ನಡೆದಿದೆ. ಪಾಸ್ಟರ್ ಮೇಲೆ ಇನ್ನೂ ಕೆಲ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. (ಪಿಟಿಐ)
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications