ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಸು ಸಾಯಿಸಿದ್ದಕ್ಕೆ ಕೇರಳದ ಎಂಟು ಯುವ ಕಾಂಗ್ರೆಸ್ಸಿಗರ ಬಂಧನ

ಕೇಂದ್ರ ಸರ್ಕಾರದ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿ ಕೇರಳದ ಕಣ್ಣೂರಿನಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಲಾಗಿತ್ತು.

|
Google Oneindia Kannada News

ಕಣ್ಣೂರು (ಕೇರಳ), ಜೂನ್ 1: ಹಸುವೊಂದನ್ನು ಹತ್ಯೆ ಮಾಡಿದ್ದಕ್ಕಾಗಿ ಕೇರಳ ಪೊಲೀಸರು ಯುವ ಕಾಂಗ್ರೆಸ್ ನ 8 ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಕೇಂದ್ರ ಸರ್ಕಾರದ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿ ಕೇರಳದ ಕಣ್ಣೂರಿನಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಹಸುವನ್ನು ಹತ್ಯೆಗೈಯುವ ಮೂಲಕ ತನ್ನ ಆಕ್ರೋಶವನ್ನು ಕೆಲ ಯುವ ಕಾಂಗ್ರೆಸ್ ಕಾರ್ಯಕರ್ತರು ಹೊರಹಾಕಿದ್ದರು.[ಗೋವಿನ ಬಗ್ಗೆ ನಿಮಗೆ ತಿಳಿಯದ ರೋಚಕ ಸಂಗತಿಗಳು]

Kerala Police arrests eight Youth Congress workers for killing an ox

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 28 ಭಾನುವಾರದಂದು ಪ್ರಕರಣ ದಾಖಲಿಸಿಕೊಂಡಿದ್ದ ಕಣ್ಣೂರಿನ ಪೊಲೀಸರು, ಇಂದು 8 ಜನರನ್ನು ಬಂಧಿಸಿದ್ದಾರೆ.

ಬಂಧಿತರನ್ನು ರಿಜಿಲ್ ಮುಕುಟ್ಟಿ, ಜೋಸಿ ಕಾಂಡಥಿಲ್, ಕೆ.ಶರಫುದ್ದಿನ್ ಮುಂತಾದವರೆಂದು ಗುರುತಿಸಲಾಗಿದೆ.
ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ ಎಫ್ ಐ) ಸಹ ಗೋಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ತಿರುವನಂತಪುರಂ ನಲ್ಲಿ ಪ್ರತಿಭಟನೆ ನಡೆಸಿತ್ತು.

English summary
The Kannur Police on Thursday arrested eight Youth Congress workers for killing an ox. To protest aganist Central government's controversial cow slaughter ban bill they have killed an ox in Kannur, Kerala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X