ಹುಡುಗಿಯರ ಸ್ತನವನ್ನು ಕಲ್ಲಂಗಡಿಗೆ ಹೋಲಿಸಿದ ರಸಿಕ ಶಿಕ್ಷಕ
ಕೋಳಿಕ್ಕೋಡ್, ಮಾ 23: ದೇವರನಾಡಿನ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಎದೆಯನ್ನು ಕಲ್ಲಂಗಡಿಗೆ ಹೋಲಿಸಿ, ದೇವರು ಕೋಪಿಸಿಕೊಳ್ಳುವಂತಹ ಕೆಲಸವನ್ನು ಮಾಡಿದ್ದಾನೆ. ಈತನ ವಿರುದ್ದ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ನಗರದ ಫಾರೂಕ್ ಟ್ರೈನಿಂಗ್ ಕಾಲೇಜಿನಲ್ಲಿ ಉಪನ್ಯಾಸ ನೀಡುತ್ತಾ ಶಿಕ್ಷಕ ಜವಹರ್ ಮುನಾವರ್, ಇಸ್ಲಾಂ ಸಂಪ್ರದಾಯಕ್ಕೆ ಅನುಗುಣವಾಗಿ ಈಗಿನ ವಿದ್ಯಾರ್ಥಿನಿಯರು ಬಟ್ಟೆ ತೊಡುತ್ತಿಲ್ಲ. ಬದಲಿಗೆ, ಹುಡುಗಿಯರು ತಮ್ಮ ಎದೆಭಾಗವನ್ನು ಕಲ್ಲಂಗಡಿಯ ತುಂಡಿನಂತೆ ಪ್ರದರ್ಶಿಸುತ್ತಿದ್ದಾರೆ ಎನ್ನುವ ವಿವಾದಕಾರಿ ಹೇಳಿಕೆಯನ್ನು ನೀಡಿದ್ದಾನೆ.
ನಾನು ಪಾಠ ಮಾಡುತ್ತಿರುವ ಈ ಕಾಲೇಜಿನಲ್ಲಿ ಶೇ. 80ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿದ್ದಾರೆ, ಅದರಲ್ಲಿ ಬಹುತೇಕ ಎಲ್ಲರೂ ಮುಸ್ಲಿಮರು. ವಿದ್ಯಾರ್ಥಿನಿಯರು ಹಿಜಬ್ (ಬುರ್ಖಾ) ಧರಿಸದೇ, ತಮ್ಮ ಎದೆಯ ಭಾಗವನ್ನು ಕೆಂಪುಬಣ್ಣದ ಕಲ್ಲಂಗಡಿಯ ತುಂಡಿನಂತೆ ತೋರಿಸುತ್ತಿದ್ದಾರೆ ಎಂದು ಶಿಕ್ಷಕ ಪ್ರೊ. ಮುನಾವರ್ ಹೇಳಿದ್ದಾನೆ.

ಶಿಕ್ಷಕನ ಈ 'ಉಪನ್ಯಾಸ'ದ ತುಣುಕು ರೆಕಾರ್ಡ್ ಆಗಿದ್ದು ಈತನ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಮಹಿಳೆಯರ ವಿರುದ್ದ ಅವಮಾನಕಾಗಿ ಹೇಳಿಕೆ ನೀಡಿದ ಶಿಕ್ಷಕನ ಮೇಲೆ, ನಗರದ ಕುಡುವಳ್ಳಿ ಪೊಲೀಸರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ.
ಅದೇ ಕಾಲೇಜಿನ ಅಮೃತಾ ಎನ್ನುವ ವಿದ್ಯಾರ್ಥಿನಿ, ಶಿಕ್ಷಕನ ಈ ಅಸಂಬದ್ದ ಹೇಳಿಕೆಯ ವಿರುದ್ದ ಪೊಲೀಸ್ ಠಾಣೆ ಮೆಟ್ಟಲೇರಿದ್ದಳು. ಆದರೆ, ತನ್ನ ವಿರುದ್ದ ದೂರು ದಾಖಲಾಗುತ್ತಿದ್ದಂತೇ, ಶಿಕ್ಷಕ ಮುನಾವರ್ ನಾಪತ್ತೆಯಾಗಿದ್ದಾನೆ.
ಈ ಶಿಕ್ಷಕನ ವಿರುದ್ದ ಸಾಮಾಜಿಕ ತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ನೆಟ್ಟಿಗರು ಈತನನ್ನು ಹುರಿದು ಮುಕ್ಕುತ್ತಿದ್ದಾರೆ ಮತ್ತು ಈತನ ವಿರುದ್ದ ಆಂದೋಲನ ಆರಂಭಿಸಿದ್ದಾರೆ. ಕೆಲವೊಂದು ಮಹಿಳೆಯರು, ತಮ್ಮ ಅರೆನಗ್ನ ಫೋಟೋಗಳನ್ನು ಹಾಕಿ ಪ್ರತಿಭಟಿಸಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications