Puthuppally By Election Results; ಚಾಂಡಿ ಉಮ್ಮನ್ ಗೆಲುವು
ತಿರುವನಂತಪುರ, ಸೆಪ್ಟೆಂಬರ್ 08; ಕೇರಳದ ಪುತ್ತುಪ್ಪಲ್ಲಿ ವಿಧಾನಸಭಾಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಉಮ್ಮನ್ ಚಾಂಡಿ ಪುತ್ರ ಚಾಂಡಿ ಉಮ್ಮನ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಪುತ್ತುಪ್ಪಲ್ಲಿ ಕ್ಷೇತ್ರ ಮತ್ತೆ ಉಮ್ಮನ್ ಚಾಂಡಿ ಕುಟುಂಬದ ಪಾಲಾಗಿದೆ.
ಕೊಟ್ಟಾಯಂ ಜಿಲ್ಲೆಯ ಪುತ್ತುಪ್ಪಲ್ಲಿ ವಿಧಾನಸಭಾಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಶುಕ್ರವಾರ ನಡೆಯಿತು. ಕಾಂಗ್ರೆಸ್- ಯುಡಿಎಫ್ ಅಭ್ಯರ್ಥಿ ಚಾಂಡಿ ಉಮ್ಮನ್ 78,649 ಮತಗಳನ್ನು ಪಡೆದು ಜಯಗಳಿಸಿದರು.

ಎಲ್ಡಿಎಫ್ ಅಭ್ಯರ್ಥಿ ಜೈಕ್ ಸಿ. ಥಾಮಸ್ 41,982 ಮತಗಳನ್ನು ಪಡೆದು ಸೋಲು ಕಂಡರು. ಬಿಜೆಪಿ ಜಿಲ್ಲಾ ಅಧ್ಯಕ್ಷ ಜಿ. ಲಿಂಜಿನ್ಲಾಲ್ ಅವರನ್ನು ಕ್ಷೇತ್ರದಲ್ಲಿ ಕಣಕ್ಕಿಳಿಸಿತ್ತು. ಆದರೆ ಚಾಂಡಿ ಉಮ್ಮನ್ ಮತ್ತು ಜೈಕ್ ಸಿ. ಥಾಮಸ್ ನಡುವೆ ಉಪ ಚುನಾವಣೆಯಲ್ಲಿ ನೇರ ಪೈಪೋಟಿ ಇತ್ತು.
ಕೇರಳದ ಮಾಜಿ ಮುಖ್ಯಮಂತ್ರಿ ದಿ. ಉಮ್ಮನ್ ಚಾಂಡಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಪುತ್ತುಪ್ಪಲ್ಲಿ. ಜುಲೈ 18ರಂದು ಉಮ್ಮನ್ ಚಾಂಡಿ ಬೆಂಗಳೂರಿನಲ್ಲಿ ವಿಧಿವಶರಾಗಿದ್ದರು. ಅವರ ನಿಧನದ ಬಳಿಕ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಸೆಪ್ಟೆಂಬರ್ 5ರಂದು ನಡೆದಿತ್ತು, ಶುಕ್ರವಾರ ಚುನಾವಣಾ ಫಲಿತಾಂಶ ಘೋಷಣೆಯಾಗಿದೆ.
ಮೊದಲ ಸುತ್ತಿನ ಮತ ಎಣಿಕೆಯಿಂದಲೇ ಚಾಂಡಿ ಉಮ್ಮನ್ ಮುನ್ನಡೆ ಕಾಯ್ದುಕೊಂಡರು. ಸುಮಾರು 36,000 ಮತಗಳ ಅಂತದಲ್ಲಿ ಉಪ ಚುನಾವಣೆ ಗೆಲ್ಲುವ ಮೂಲಕ ಕಾಂಗ್ರೆಸ್ ದಿ. ಉಮ್ಮನ್ ಚಾಂಡಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಪುತ್ತುಪ್ಪಲ್ಲಿಯನ್ನು ಉಳಿಸಿಕೊಂಡಿದೆ.
ಪುತ್ತುಪ್ಪಲ್ಲಿ ಉಪ ಚುನಾವಣೆ ಗೆಲುವಿನ ಬಳಿಕ ಕೇರಳದ ಕಾಂಗ್ರೆಸ್ ಕಛೇರಿಯಲ್ಲಿ ಪಕ್ಷದ ನಾಯಕರು ಸಿಹಿ ಹಂಚಿ ಸಂಭ್ರಮಿಸಿದರು. ಪಕ್ಷದ ನಾಯಕ ರಮೇಶ್ ಚೆನ್ನಿತಾಲ ಮಾತನಾಡಿ, "ಈ ಉಪ ಚುನಾವಣೆ ಫಲಿತಾಂಶ ಮೋದಿ ಮತ್ತು ಪಿಣರಾಯಿ ವಿಜಯನ್ಗೆ ಸ್ಪಷ್ಟ ಸಂದೇಶವಾಗಿದೆ" ಎಂದರು.
ಪುತ್ತುಪ್ಪಲ್ಲಿ ವಿಧಾನಸಭಾಕ್ಷೇತ್ರದ ಉಪಚುನಾವಣೆಯ ಸಂಪೂರ್ಣ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಉಮ್ಮನ್ ಚಾಂಡಿ ಪುತ್ರ ಚಾಂಡಿ ಉಮ್ಮನ್ 37,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಕಾಂಗ್ರೆಸ್ ಉಳಿಸಿಕೊಂಡಿದೆ. ಅಭ್ಯರ್ಥಿಗಳು ಪಡೆದ ಮತಗಳು ಹೀಗಿವೆ.
* ಸಿಪಿಐ(ಎಂ) ಜೈಕ್ ಸಿ. ಥಾಮಸ್ 41,982 ಮತ
* ಬಿಜೆಪಿಯ ಜಿ. ಲಿಂಜಿನ್ಲಾಲ್ 6,486 ಮತ
* ಆಮ್ ಆದ್ಮಿ ಪಕ್ಷದ ಲೂಕ್ ಥಾಮಸ್ 829 ಮತ
* ಪಕ್ಷೇತರ ಸಂತೋಷ್ ಪುಲಿಕಲ್ 78 ಮತ
* ಪಕ್ಷೇತರ ಶಾಜಿ 58 ಮತ
* ಪಕ್ಷೇತರ ಪಿಕೆ ದೇವದಾಸ್ 57 ಮತಗಳು.
ಚಾಂಡಿ ಉಮ್ಮನ್ ಕೇರಳದ ಯುವ ಕಾಂಗ್ರೆಸ್ ನಾಯಕ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯವಾಗಿ ತೊಡಗಿದ್ದರು. ಯಾತ್ರೆ ಪೂರ್ಣಗೊಂಡು ಒಂದು ವರ್ಷವಾಗುತ್ತಿದ್ದಂತೆಯೇ ಉಪ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಪುತ್ತುಪ್ಪಲ್ಲಿ ಕ್ಷೇತ್ರದ ಗೆಲುವು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯವಿತ್ತು. ಪಕ್ಷದ ನಾಯಕ ಉಮ್ಮನ್ ಚಾಂಡಿ 1970ರಿಂದ ಯಾವುದೇ ಅಡೆ ತಡೆ ಇಲ್ಲದೇ ಕ್ಷೇತ್ರದಿಂದ ಆರಿಸಿ ಬರುತ್ತಿದ್ದರು. ಅವರ ನಿಧನದ ಬಳಿಕ ತೆರವಾದ ಕ್ಷೇತ್ರದಲ್ಲಿ ಅವರ ಪುತ್ರ ಗೆದ್ದು ಬಂದಿದ್ದು, ಕ್ಷೇತ್ರ ಕಾಂಗ್ರೆಸ್ ವಶವಾಗಿದೆ.
ಕ್ಷೇತ್ರದಲ್ಲಿನ ಒಟ್ಟು ಮತದಾರರ ಸಂಖ್ಯೆ ಸುಮಾರು 1.76 ಲಕ್ಷ. ಸೆಪ್ಟೆಂಬರ್ 5ರಂದು ಉಪ ಚುನಾವಣೆಗೆ 182 ಮತಗಟ್ಟೆಗಳನ್ನು ತೆರೆಯಲಾಗಿತ್ತು. ಯುಡಿಎಫ್ ಮತ್ತು ಎಲ್ಡಿಎಫ್ ನಡುವೆ ಉಪ ಚುನಾವಣೆಯಲ್ಲಿ ನೇರ ಸ್ಪರ್ಧೆ ಇದೆ ಮೊದಲೇ ಅಂದಾಜಿಸಲಾಗಿತ್ತು.
ಸಿಪಿಐ(ಎಂ) ಜೈಕ್ ಸಿ. ಥಾಮಸ್ 2016, 2021ರ ಚುನಾವಣೆಯಲ್ಲಿ ಉಮ್ಮನ್ ಚಾಂಡಿ ವಿರುದ್ಧ ಕಣಕ್ಕಿಳಿದು ಸೋಲು ಕಂಡಿದ್ದರು. ಚಾಂಡಿ ಉಮ್ಮನ್ ವಿರುದ್ಧ ಗೆದ್ದು ಚುನಾವಣಾ ಸೇಡು ತೀರಿಸಿಕೊಳ್ಳಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಕಳೆದ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೇ 10ರಷ್ಟು ಮತ ಪಡೆಯಲು ವಿಫಲವಾಗಿದ್ದ ಬಿಜೆಪಿ ಸಾಂಕೇತಿಕವಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications