Puthuppally By Election Results; ಕಾಂಗ್ರೆಸ್ಗೆ ಮುನ್ನಡೆ
ತಿರುವನಂತಪುರ, ಸೆಪ್ಟೆಂಬರ್ 08; ಪುತ್ತುಪ್ಪಲ್ಲಿ ವಿಧಾನಸಭಾಕ್ಷೇತ್ರದ ಉಪಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಉಮ್ಮನ್ ಚಾಂಡಿ ಪುತ್ರ ಚಾಂಡಿ ಉಮ್ಮನ್ ಗೆಲುವು ಸಾಧಿಸಿದ್ದಾರೆ.
ಕೇರಳದ ಪುತ್ತುಪ್ಪಲ್ಲಿ ವಿಧಾನಸಭಾಕ್ಷೇತ್ರದ ಉಪಚುನಾವಣೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್-ಯುಡಿಎಫ್ ಅಭ್ಯರ್ಥಿಯಾದ ಉಮ್ಮನ್ ಚಾಂಡಿ ಪುತ್ರ ಚಾಂಡಿ ಉಮ್ಮನ್ ಗೆಲುವಿನ ವಿಶ್ವಾಸದಲ್ಲಿದ್ದಾರೆ.
ಕೊಟ್ಟಾಯಂ ಜಿಲ್ಲೆಯ ಪುತ್ತುಪ್ಪಲ್ಲಿ ವಿಧಾನಸಭಾಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಶುಕ್ರವಾರ ನಡೆಯುತ್ತಿದೆ. ಕೇರಳದ ಮಾಜಿ ಮುಖ್ಯಮಂತ್ರಿ ದಿ. ಉಮ್ಮನ್ ಚಾಂಡಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಇದು. ಜುಲೈ 18ರಂದು ಉಮ್ಮನ್ ಚಾಂಡಿ ನಿಧನದ ಬಳಿಕ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆದಿದೆ.

8ನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್- ಯುಡಿಎಫ್ ಅಭ್ಯರ್ಥಿ ಚಾಂಡಿ ಉಮ್ಮನ್ ಎಲ್ಡಿಎಫ್ ಅಭ್ಯರ್ಥಿ ಜೈಕ್ ಸಿ. ಥಾಮಸ್ ವಿರುದ್ಧ 22,580 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಜಿಲ್ಲಾ ಅಧ್ಯಕ್ಷ ಜಿ. ಲಿಂಜಿನ್ಲಾಲ್ ಕಣಕ್ಕಿಳಿಸಿದೆ.
ಕೇರಳದ ಮಾಜಿ ಮುಖ್ಯಮಂತ್ರಿ ದಿ. ಉಮ್ಮನ್ ಚಾಂಡಿ ಸುಮಾರು 5 ದಶಕಗಳ ಕಾಲ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಅವರ ನಂತರ ಉತ್ತರಾಧಿಕಾರಿ ಯಾರು? ಎಂಬ ಪ್ರಶ್ನೆ ಇದೆ. ಚುನಾವಣೆಯಲ್ಲಿ ಯುಡಿಎಫ್ ಮತ್ತು ಎಲ್ಡಿಎಫ್ ಅಭ್ಯರ್ಥಿಗಳ ನಡುವೆ ನೇರ ಪೈಪೋಟಿ ಇದೆ.
140 ಸದಸ್ಯ ಬಲದ ಕೇರಳ ವಿಧಾನಸಭೆಯಲ್ಲಿ ಎಲ್ಡಿಎಫ್ 99, ಯುಡಿಎಫ್ 40 ಸ್ಥಾನಗಳನ್ನು ಹೊಂದಿವೆ. ಖಾಲಿ ಇರುವ ಪುತ್ತುಪ್ಪಲ್ಲಿ ಕ್ಷೇತ್ರದ ಶಾಸಕರು ಯಾರು? ಎಂಬುದು ಇಂದು ತಿಳಿಯಲಿದೆ.
ಪುತ್ತುಪ್ಪಲ್ಲಿ ವಿಧಾನಸಭಾಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ಚಾಂಡಿ ಉಮ್ಮನ್ ವ್ಯಕ್ತಪಡಿಸಿದ್ದಾರೆ. ಆದರೆ ಗೆಲುವಿನ ಅಂತರ ಎಷ್ಟಿರುತ್ತದೆ? ಎಂದು ಹೇಳಲು ಅವರು ನಿರಾಕರಿಸಿದ್ದಾರೆ.
11ನೇ ಸುತ್ತಿನ ಎಣಿಕೆ ಬಳಿಕ ಅಭ್ಯರ್ಥಿಗಳು ಪಡೆದ ಮತಗಳು
* ಕಾಂಗ್ರೆಸ್ನ ಚಾಂಡಿ ಉಮ್ಮನ್ 66,112
* ಸಿಪಿಐ (ಎಂ) ಜೈಕ್ ಸಿ. ಥಾಮಸ್ 35,083
* ಬಿಜೆಪಿಯ ಲಿಂಜಿನ್ ಲಾಲ್ 5,537
* ಆಮ್ ಆದ್ಮಿ ಪಕ್ಷದ ಲೂಕ್ ಥಾಮಸ್ 737
* ಪಕ್ಷೇತರ ಸಂತೋಷ್ ಪುಲಿಕಲ್ 70
* ಪಕ್ಷೇತರ ಶಾಜಿ 51
* ಪಕ್ಷೇತರ ಪಿಕೆ ದೇವದಾಸ್ 49
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications