ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ ಮಳೆ: ಸ್ವಾತಂತ್ರ್ಯೋತ್ಸವದಂದು 25 ಜನರ ಸಾವು

|
Google Oneindia Kannada News

ಕೊಚ್ಚಿ, ಆಗಸ್ಟ್ 16: ಕೇರಳದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಗೆ ಕೇರಳದಲ್ಲಿ ನಿನ್ನೆ(ಆ.15) ಒಂದೇ ದಿನ ಒಟ್ಟು 25 ಜನ ಮೃತರಾಗಿದ್ದಾರೆ.

ಇದರೊಂದಿಗೆ ಈ ವರೆಗೆ ಮೃತರಾದವರ ಸಂಖ್ಯೆ ಒಟ್ಟು 67 ಕ್ಕೇರಿದೆ. ಬುಧವಾರ ಮಳೆ ಪ್ರಮಾಣ ಹೆಚ್ಚಿದ್ದರಿಂದ ವೈಯ್ನಾಡ್, ಕೊಳಿಕ್ಕೊಡೆ, ಕಣ್ಣೂರು, ಕಾಸರಗೋಡು, ಮಲಪ್ಪುರಂ, ಪಾಲಕ್ಕಾಡ್, ಇಡುಕ್ಕಿ ಮತ್ತು ಎರ್ನಾಕುಲಂ ಈ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ವರುಣನ ಅಬ್ಬರಕೆ ಬೆಚ್ಚಿದ ದೇವರ ಸ್ವಂತ ನಾಡು: ಮೃತರ ಸಂಖ್ಯೆ 47ಕ್ಕೆವರುಣನ ಅಬ್ಬರಕೆ ಬೆಚ್ಚಿದ ದೇವರ ಸ್ವಂತ ನಾಡು: ಮೃತರ ಸಂಖ್ಯೆ 47ಕ್ಕೆ

ಪ್ರವಾಹ ಪೀಡಿತ ಸ್ಥಳಗಳಲ್ಲಿ ಈಗಾಗಲೇ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಭಾರತೀಯ ನೌಕಾದಳದ 21 ತಂಡಗಳನ್ನು ನೇಮಿಸಿ, ರಕ್ಷಣಾ ಕಾರ್ಯ ಮಾಡಲಾಗುತ್ತಿದೆ.

Kerala rains: 25 people die on wednsday due to flood

ರಾಷ್ಟ್ರೀಯ ವಿಪತ್ತು ದಳ, ಭಾರತೀಯ ಸೇನೆಯ ಹೆಚ್ಚುವರಿ ಸಿಬ್ಬಂದಿಯನ್ನು ಕೇರಳಕ್ಕೆ ಕಳಿಸುವಂತೆ ಗೃಹ ಮಂತ್ರಿ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ. ಕೇರಳದ ಎಲ್ಲಾ ಜಲಾಶಯಗಳಲ್ಲೂ ನೀರಿನ ಮಟ್ಟ ಬಹುತೇಕ ಭರ್ತಿಯಾಗಿದ್ದು, ಈ ಭಾಗದಲ್ಲಿ ವಾಸವಿರುವ ಜನರಿಗೆ ಮುನ್ಸೂಚನೆ ನೀಡಲಾಗಿದೆ. ಅವರನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸುವ ಕಾರ್ಯ ನಡೆಯುತ್ತಿದೆ.

English summary
Kerala Rains: At least 25 people lost their lives due to incessant rain and floods in Kerala on Wednesday, taking the total death toll to 67.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X