ಕೇರಳ ಅತ್ಯಾಚಾರ: ಪ್ರಮುಖ ಸಾಕ್ಷಿಯಾಗಿದ್ದ ಫಾದರ್ ಶವ ಪಂಜಾಬ್ನಲ್ಲಿ ಪತ್ತೆ
ಜಲಂಧರ್, ಅಕ್ಟೋಬರ್ 22: ಕೇರಳದ ಚರ್ಚ್ನಲ್ಲಿ ಕ್ರೈಸ್ತ ಸನ್ಯಾಸಿನಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿದಾರರಾಗಿದ್ದ ಫಾದರ್ ಕುರಿಯಾಕೋಸ್ ಕಟ್ಟುಥಾರಾ ಅವರ ಶವ ಪಂಜಾಬ್ನ ಜಲಂಧರ್ನಲ್ಲಿ ಪತ್ತೆಯಾಗಿದೆ.
ಅತ್ಯಾಚಾರದ ಆರೋಪಕ್ಕೆ ಸಿಲುಕಿರುವ ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ಧ ನಿರ್ಭಿಡೆಯಿಂದ ಧ್ವನಿ ಎತ್ತಿದ್ದ ಕೆಲವರಲ್ಲಿ ಕುರಿಯಾಕೋಸ್ ಒಬ್ಬರಾಗಿದ್ದರು. ಅವರ ಮೃತದೇಹ ಜಲಂಧರ್ನ ದಸುಯಾದಲ್ಲಿನ ಸೈಂಟ್ ಮೇರಿಸ್ ಚರ್ಚ್ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
67 ವರ್ಷದ ಅವರ ಮೃತದೇಹ ಸೋಮವಾರ ಬೆಳಿಗ್ಗೆ ಕಂಡುಬಂದಿದೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕುರಿಯಾಕೋಸ್ ಅವರ ಸಾವಿನ ಹಿಂದೆ ಸಂಚು ಇರುವ ಬಗ್ಗೆ ಅವರು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ.
ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಪ್ರಕರಣದಲ್ಲಿ ಕುರಿಯಾಕೋಸ್, ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ಧ ಪೊಲೀಸ್ ಹೇಳಿಕೆ ನೀಡಿದ್ದರು. ಈ ಕಾರಣಕ್ಕಾಗಿಯೇ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಅವರ ಸಹೋದರ ಜೋಸ್ ಕಟ್ಟುಥಾರಾ ಶಂಕೆ ವ್ಯಕ್ತಪಡಿಸಿದ್ದಾರೆ.

ನೆಲದ ಮೇಲೆ ಬಿದ್ದಿದ್ದ ಶವ
ಸೋಮವಾರ ಬೆಳಿಗ್ಗೆ ಕೆಲವು ಸನ್ಯಾಸಿನಿಯರು ಫಾದರ್ ಕುರಿಯಾಕೋಸ್ ಅವರಿದ್ದ ಕೋಣೆಯ ಬಾಗಿಲನ್ನು ಬಡಿದರು. ಆದರೆ, ಅವರಿಂದ ಪ್ರತಿಕ್ರಿಯೆ ಬರಲಿಲ್ಲ. ಬಳಿಕ ಬಾಗಿಲು ಒಡೆದು ನೋಡಿದಾಗ ನೆಲದ ಮೇಲೆ ಕುರಿಯಾಕೋಸ್ ಅವರು ಬಿದ್ದಿರುವುದು ಕಂಡುಬಂತು. ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಆಗಲೇ ಮೃತಪಟ್ಟಿರುವುದಾಗಿ ಘೋಷಿಸಲಾಯಿತು ಎಂದು ಜಲಂಧರ್ ಡಯಾಸಿಸ್ನ ಫಾದರ್ ಪೀಟರ್ ತಿಳಿಸಿದ್ದಾರೆ.
| Array |
ಆತಂಕ ವ್ಯಕ್ತಪಡಿಸಿದ್ದ ಕುರಿಯಾಕೋಸ್
ಸನ್ಯಾಸಿನಿಯರಿಗೆ ಬೆಂಬಲ ನೀಡಿದ್ದಕ್ಕೆ ತಮ್ಮ ಮೇಲೆ ತೀವ್ರ ಒತ್ತಡ ಹೇರಲಾಗುತ್ತಿದೆ ಎಂದು ಕುರಿಯಾಕೋಸ್ ಆರೋಪಿಸಿದ್ದರು. 'ಸನ್ಯಾಸಿನಿಯರು ಬಿಷಪ್ ಫ್ರಾಂಕೋ ಅವರ ವಿರುದ್ಧ ನನ್ನ ಬಳಿ ದೂರು ನೀಡಿದ್ದರು. ಅವರು ಬಿಷಪ್ ಭಯದ ಕಾರಣದಿಂದ ಕೇರಳ ಪೊಲೀಸರನ್ನು ಸಂಪರ್ಕಿಸಿರಲಿಲ್ಲ. ವಾಸ್ತವವಾಗಿ ಅವರ ವಿರುದ್ಧ ಮಾತನಾಡುತ್ತಿರುವುದಕ್ಕೆ ನನಗೆ ಏನಾಗಲಿದೆ ಎನ್ನುವುದೂ ನನಗೆ ಗೊತ್ತಿಲ್ಲ' ಎಂದು ಸಂದರ್ಶನವೊಂದರಲ್ಲಿ ಅವರು ಹೇಳಿದ್ದರು.
|
ಪ್ರಮುಖ ಸಾಕ್ಷಿದಾರ
ಜಲಂಧರ್ ಡಯೋಸಿಸ್ನಲ್ಲಿ ಆಗಾಗ ಶಿಕ್ಷಕರಾಗಿಯೂ ಕೆಲಸ ಮಾಡುತ್ತಿದ್ದ ಕುರಿಯಾಕೋಸ್, ನ್ಯಾಯಕ್ಕಾಗಿ ಹೋರಾಟ ನಡೆಸುವಂತೆ ಸಂತ್ರಸ್ತೆ ಸನ್ಯಾಸಿನಿ ಮತ್ತು ಇತರೆ ಸನ್ಯಾಸಿನಿಯರಿಗೆ ಸಲಹೆ ನೀಡಿದ್ದರು. ಬಿಷಪ್ ಫ್ರಾಂಕೊ ಅವರ ಪ್ರಕರಣದಲ್ಲಿ ಕುರಿಯಾಕೋಸ್ ಪ್ರಮುಖ ಪ್ರಾಸಿಕ್ಯೂಷನ್ ಸಾಕ್ಷಿದಾರರಾಗಿದ್ದರು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಪಿ ಹರಿಶಂಕರ್ ತಿಳಿಸಿದ್ದಾರೆ.

ಹೋರಾಟಕ್ಕೆ ಹಿನ್ನಡೆ
ಬಿಷಪ್ ಫ್ರಾಂಕೊ ವಿರುದ್ಧದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಸ್ಟರ್ ಅನುಪಮಾ, 'ಈ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಫಾದರ್ ಕುರಿಯಾಕೋಸ್ ನನಗೆ ಬೋಧಿಸಿದವರು ಮತ್ತು ನಮ್ಮ ಹೋರಾಟದ ಭಾಗವಾಗಿದ್ದರು. ನಮ್ಮ ಪ್ರಕರಣದಲ್ಲಿ ಅವರು ಪ್ರಮುಖ ಸಾಕ್ಷಿದಾರರಾಗಿದ್ದರು ಮತ್ತು ಬಿಷಪ್ ವಿರುದ್ಧ ಪೊಲೀಸರಿಗೆ ಹೇಳಿಕೆ ನೀಡಿದ್ದರು. ನಾನು ಅವರೊಂದಿಗೆ ಸಂಪರ್ಕದಲ್ಲಿ ಇರಲಿಲ್ಲ. ಆದರೆ, ಇತರೆ ಪಾದ್ರಿಗಳು ಹೇಳುವಂತೆ ಅವರ ಮೇಲೆ ಅತಿಯಾದ ಒತ್ತಡವಿತ್ತು. ಚರ್ಚ್ನಲ್ಲಿದ್ದ ಅನೇಕರು ಅವರ ವಿರುದ್ಧ ಆಕ್ರೋಶಗೊಂಡಿದ್ದರು. ಅವರ ಸಾವಿನ ಸಂದರ್ಭ ಅನುಮಾನಾಸ್ಪದವಾಗಿದೆ. ಇದರಿಂದ ಫ್ರಾಂಕೊ ವಿಷಪ್ ವಿರುದ್ಧದ ನಮ್ಮ ಹೋರಾಟಕ್ಕೆ ಹಿನ್ನಡೆಯಾಗಲಿದೆ' .
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications