ಲೈಂಗಿಕ ಕಿರುಕುಳ: ಕೇರಳದ 'ಮಾತೃಭೂಮಿ' ಚಾನಲ್ ಪತ್ರಕರ್ತನ ಬಂಧನ
ತಿರುವನಂತಪುರಂ, ಜುಲೈ 26: ಕೇರಳದ ಪ್ರಖ್ಯಾತ ಸುದ್ದಿ ವಾಹಿನಿ 'ಮಾತೃಭೂಮಿ'ಯ ಹಿರಿಯ ಪತ್ರಕರ್ತರೊಬ್ಬರನ್ನು ಕಿರಿಯ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿಸಲಾಗಿದೆ.
ಮಾತೃಭೂಮಿ ವಾಹಿನಿಯಲ್ಲಿ ಹಿರಿಯ ಸುದ್ದಿ ಸಂಪಾದಕರಾಗಿದ್ದ ಅಮಲ್ ವಿಷ್ಣುದಾಸ್ ವಿರುದ್ಧ ಮಹಿಳಾ ಸಿಬ್ಬಂದಿಯೊಬ್ಬರು ಮಂಗಳವಾರ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಬುಧವಾರ ಬೆಳಿಗ್ಗೆ ತಿರುವನಂತಪುರಂ ನಗರ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಅಮಲ್ ವಿಷ್ಣುದಾಸ್ ವಿರುದ್ಧ ಐಪಿಸಿ ಸೆಕ್ಷನ್ 376 (ರೇಪ್), 377 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಮಹಿಳಾ ಸಹೋದ್ಯೋಗಿ ಮತ್ತು ಅಮಲ್ ವಿಷ್ಣುದಾಸ್ ಕಳೆದ ಒಂದು ವರ್ಷಗಳಿಂದ ಸಂಬಂಧದಲ್ಲಿದ್ದರು. 'ಮುದುವೆಯಾಗುವುದಾಗಿ ಹೇಳಿ ವಿಷ್ಣುದಾಸ್ ತನ್ನನ್ನು ಬಳಸಿಕೊಂಡು ವಂಚಿಸಿದ್ದಾನೆ' ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
ಅಮಲ್ ಗೆ ಈ ಹಿಂದೆಯೇ ಮದುವೆಯಾಗಿತ್ತು. ತನಗೆ ವಿಚ್ಛೇದನ ಸಿಕ್ಕಿದ ಬಳಿಕ ತಾನು ನಿನ್ನನ್ನು ಮದುವೆಯಾಗುವುದಾಗಿ ಅಮಲ್ ಯುವತಿಗೆ ಹೇಳಿದ್ದರು ಎನ್ನಲಾಗಿದೆ. ಆದರೆ ಅಮಲ್ ಗೆ ವಿಚ್ಛೇದನ ಸಿಕ್ಕಿದ ಬಳಿಕವೂ ಮದುವೆಯಾಗಲು ನಿರಾಕರಿಸಿದ್ದಾರೆ. ಹೀಗಾಗಿ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.
ಇದರ ಜತೆಗೆ 'ತಮ್ಮ ಸಂಬಂಧ ಬಹಿರಂಗಪಡಿಸಿದರೆ ತಾನು ನಿನ್ನ ಭವಿಷ್ಯವನ್ನೇ ಮುಗಿಸುತ್ತೇನೆ' ಎಂದು ಅಮಲ್ ವಿಷ್ಣುದಾಸ್ ಬೆದರಿಕೆಯನ್ನೂ ಹಾಕಿದ್ದರಂತೆ. ಜತೆಗೆ ತನ್ನಿಂದ ಹಣವನ್ನೂ ಪಡೆದುಕೊಂಡಿರುವುದಾಗಿ ಯುವತಿ ದೂರಿದ್ದಾರೆ.
ಇದೇ ವೇಳೆ ಮಾತೃಭೂಮಿ ಸಂಸ್ಥೆ ಅಮಲ್ ವಿಷ್ಣುದಾಸ್ ರನ್ನು ಕೆಲದಿಂದ ವಜಾ ಮಾಡಿದೆ. ಇತ್ತೀಚೆಗೆ ಇದೇ ಮಾತೃಭೂಮಿ ಸಂಸ್ಥೆ ಮಹಿಳಾ ಉದ್ಯೋಗಿಗಳಿಗೆ 'ಪೀರಿಯಡ್ ಲೀವ್' ಸೌಲಭ್ಯ ನೀಡಿ ಮಾದರಿಯಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications