ತಂದೆಗೆ ಲಿವರ್ ದಾನ ಮಾಡಿದ ದೇಶದ ಅತ್ಯಂತ ಕಿರಿಯ ಅಂಗಾಂಗ ದಾನಿ!
ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ತಂದೆಗೆ ಅಪ್ರಾಪ್ತ ವಯಸ್ಸಿನ ಮಗಳೆ ಅಂಗಾಂಗ ದಾನ ಮಾಡಿದ ಘಟನೆ ಕೇರಳ ರಾಜ್ಯದ ತ್ರಿಶೂರ್ ನಲ್ಲಿ ನಡೆದಿದೆ. ಈ ಮೂಲಕ ಬಾಲಕಿ ತಂದೆಗೆ ದಾನ ಮಾಡುವ ಮೂಲಕ ದೇಶದ ಅತ್ಯಂತ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.
ತ್ರಿಶೂರ್, ಫೆಬ್ರವರಿ 19: ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ತಂದೆಗೆ ಅಪ್ರಾಪ್ತ ವಯಸ್ಸಿನ ಮಗಳು ಅಂಗಾಂಗ ದಾನ ಮಾಡಿದ ಹೃದಯಸ್ಪರ್ಶಿ ಘಟನೆ ಕೇರಳ ರಾಜ್ಯದ ತ್ರಿಶೂರ್ ನಲ್ಲಿ ನಡೆದಿದೆ. ಈ ಮೂಲಕ ಬಾಲಕಿ, ತಂದೆಗೆ ಯಕೃತ್ ದಾನ ಮಾಡಿದ ದೇಶದ ಅತ್ಯಂತ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.
ಬಾಲಕಿ ಅಪ್ರಾಪ್ತೆಯಾಗಿದ್ದರಿಂದ ಅಂಗಾಂಗ ದಾನಕ್ಕೆ ಅವಕಾಶ ಇರಲಿಲ್ಲ. ಹೀಗಿದ್ದರೂ ಕಾನೂನಿನಿಂದಲೇ ಅನುಮತಿ ಪಡೆದು ತಂದೆಗೆ ಅಂಗಾಂಗ ದಾನ ನೀಡುವ ಮೂಲಕ ಅನಾರೋಗ್ಯದಿಂದ ಬಳಲುತ್ತಿದ್ದ ತಂದೆಯನ್ನು ಬದುಕಿಸಿಕೊಂಡು ಅಪಾರ ಜನರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ.

12ನೇ ತರಗತಿಯ ವಿದ್ಯಾರ್ಥಿನಿ ದೇವಾನಂದ ಎಂಬವಳ ತಂದೆ ಪ್ರತೀಶ್ (48) ಅನಾರೋಗ್ಯಕ್ಕೆ ತುತ್ತಾಗಿದ್ದರು. ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಯಕೃತ್ತಿನ ಒಂದು ಭಾಗ ನೀಡಲು ಅಪ್ರಾಪ್ತ ವಯಸ್ಸಿನ ಮಗಳು ಕೇರಳ ಹೈಕೋರ್ಟ್ನ ಮೊರೆ ಹೋಗಿದ್ದಳು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಲಯ ಯಕೃತ್ ದಾನಕ್ಕೆ ಒಪ್ಪಿಗೆ ನೀಡಿತು. ಬಳಿಕ ಇದೇ ಫೆಬ್ರವರಿ 9ರಂದು ದೇವಾನಂದ, ದೀರ್ಘಕಾಲದ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ತಂದೆಗೆ ಅಂಗಾಂಗ ದಾನ ಮಾಡಿದರು. ಅಂಗಾಂಗ ಕಸಿ ಚಿಕಿತ್ಸೆ ಯಶಸ್ವಿಯಾಗಿದೆ. ಈ ಮೂಲಕ ದೇವಾನಂದ ಅವರಿಗೆ ದೇಶಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಕೆಫೆ ನಡೆಸುತ್ತಿದ್ದ ತಂದೆಗೆ ಅನಾರೋಗ್ಯ!
ತಂದೆ ಪ್ರತೀಶ್ ತ್ರಿಶೂರ್ ನಲ್ಲಿ ಕೆಫೆ ನಡೆಸುತ್ತಿದ್ದಾರೆ. ದೇವಾನಂದ ಅವರು ತಂದೆಗೆ ಅಂಗಾಂಗ ದಾನ ನೀಡಲು ಆಹಾರ ಕ್ರಮದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದರು. ದಾನಕ್ಕೆ ಯಕೃತ್ ಉತ್ತಮ ಸ್ಥಿತಿಯಲ್ಲಿದೆ ಎಂದು ಖಚಿತಪಡಿಸಿಕೊಳ್ಳಲು ನಿಯಮಿತ ವ್ಯಾಯಾಮ ಮಾಡಿದ್ದರು. ನಂತರವೇ ಈಕೆ ಅಂಗಾಂಗ ದಾನ ಮಾಡಿದ್ದಳು.

ಸ್ಥಳೀಯ ರಾಜಗಿರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ. ದೇವಾನಂದ ಅವರ ತಂದೆ ಮೇಲಿನ ಪ್ರೀತಿ ಕಂಡು ಚಿಕಿತ್ಸೆ ಮಾಡಿದ ಆಸ್ಪತ್ರೆಯು ಶಸ್ತ್ರಚಿಕಿತ್ಸೆಯ ವೆಚ್ಚವನ್ನು ಪಡೆಯದೆ ಮಾನವೀಯತೆ ಮೆರೆದಿದೆ. ಆಸ್ಪತ್ರೆಯಲ್ಲಿ ಒಂದು ವಾರದ ನಂತರ, ದೇವಾನಂದ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ತಂದೆ ತಮ್ಮ ಮಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಪ್ರತೀಶ್ ಅವರು ಅನಾರೋಗ್ಯಕ್ಕೆ ತುತ್ತಾದ ನಂತರ ಸೂಕ್ತ ದಾನಿ ಸಿಗದ ಹಿನ್ನೆಲೆಯಲ್ಲಿ ಅವರ ಕುಟುಂಬ ತತ್ತರಿಸಿತ್ತು. ಹೀಗಾಗಿ ಮಗಳೆ ಅಂಗಾಂಗ ದಾನಕ್ಕೆ ಮುಂದಾಗಿದ್ದಳು. ಮಾನವ ಅಂಗಾಂಗಗಳ ಕಸಿ ಕಾಯಿದೆ, 1994ರ ಪ್ರಕಾರ, ಅಪ್ರಾಪ್ತರಿಂದ ಅಂಗಾಂಗಗಳನ್ನು ದಾನ ಮಾಡಲು ಕಾನೂನಿನಲ್ಲಿ ಅನುಮತಿ ಇಲ್ಲ. ಆದರೆ ಈ ವಿಶೇಷ ಪ್ರಕರಣದಲ್ಲಿ ನ್ಯಾಯಾಲಯದಿಂದ ವಿನಾಯಿತಿ ಪಡೆಯಲಾಗಿತ್ತು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications